India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ
ಚಿನ್ನ ಮೀಸಲು 6,000 ಕೋಟಿ ಹೆಚ್ಚಿ 5.27 ಲಕ್ಷ ಕೋ. ರೂ.ಗೆ ಏರಿಕೆ
Team Udayavani, Sep 28, 2024, 7:00 AM IST
ಹೊಸದಿಲ್ಲಿ: ಭಾರತದ ವಿದೇಶಿ ವಿನಿಮಯ ಮೀಸಲು ನಿಧಿ ಒಂದೇ ವಾರದಲ್ಲಿ ಭರ್ಜರಿ 23,000 ಕೋಟಿ ರೂ. ಏರಿಕೆ ಕಾಣುವ ಮೂಲಕ ಸಾರ್ವಕಾಲಿಕ ಗರಿಷ್ಠ 57.4 ಲಕ್ಷ ಕೋಟಿ ರೂ.ಗೆ ಏರಿಕೆ ಕಂಡಿದೆ. ವಿಶ್ವದ ರಾಷ್ಟ್ರಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲೇ ಉಳಿದುಕೊಂಡಿದೆ.
ಸೆ.20ಕ್ಕೆ ಮುಕ್ತಾಯವಾದ ವಾರದಲ್ಲಿ ವಿದೇಶಿ ವಿನಿಮಯ ನಿಧಿ ಗರಿಷ್ಠ ಪ್ರಮಾಣ ತಲುಪಿದೆ ಎಂದು ಆರ್ಬಿಐ ಹೇಳಿದೆ. ಸೆ.13ಕ್ಕೆ ಮುಕ್ತಾಯವಾದ ವಾರದಲ್ಲಿ ಇದು 57.2 ಲಕ್ಷ ಕೋಟಿ ರೂ.ನಷ್ಟಿತ್ತು. ಅಲ್ಲದೇ ಚಿನ್ನ ಮೀಸಲು ನಿಧಿಯಲ್ಲೂ ಸಹ 6,000 ಕೋಟಿ ರೂ. ಹೆಚ್ಚಳವಾಗುವ ಮೂಲಕ ಅದು 5.27 ಲಕ್ಷ ಕೋಟಿ ರೂ.ಗೆ ಏರಿದೆ ಎಂದು ಆರ್ಬಿಐ ಹೇಳಿದೆ.
ಆದರೆ ಉಳಿದ ದೇಶಗಳ ಅಂದರೆ ಯೂರೋ, ಪೌಂಡ್, ಯೆನ್ ಹಾಗೂ ಡಾಲರ್ ಬಳಕೆ ಮಾಡದ ದೇಶಗಳೊಂದಿಗಿನ ವಿದೇಶಿ ವಿನಿಮಯ ನಿಧಿಯಲ್ಲಿ ಕುಸಿತವಾಗಿದೆ ಎನ್ನಲಾಗಿದೆ. ವಿದೇಶಿ ಕರೆನ್ಸಿ ಗಳ ನಡುವೆ ಭಾರತ ರುಪಾಯಿ ಮೌಲ್ಯ ಕುಸಿಯುವುದನ್ನು ತಡೆಯಲು ಆರ್ಬಿಐ ಮಧ್ಯಪ್ರವೇಶ ಮಾಡುತ್ತದೆ. ವಿದೇಶಿ ವಿನಿಮಯ ಮೀಸಲು ನಿಧಿ ಹೊಂದಿರುವ ರಾಷ್ಟ್ರಗಳಲ್ಲಿ ಚೀನ ಮೊದಲ ಸ್ಥಾನದಲ್ಲಿದ್ದು, 300 ಲಕ್ಷ ಕೋಟಿ ರೂ.ನಷ್ಟಿದೆ.
ಅಲ್ಲದೆ ಕಳೆದ ವಾರ ರೂಪಾಯಿ ಮೌಲ್ಯ 2 ತಿಂಗಳ ಗರಿಷ್ಠಕ್ಕೆ ಏರಿಕೆಯಾಗಿತ್ತು. ಒಂದು ವಾರಕ್ಕೆ ಹೋಲಿಸಿದರೆ ರೂಪಾಯಿ ಮೌಲ್ಯ ಶೇ.0.4ರಷ್ಟು ಏರಿಕೆ ಕಂಡು, 83.48ಕ್ಕೆ ಏರಿಕೆ ಕಂಡಿತ್ತು.
ಸತತ 6 ವಾರ ಏರಿಕೆ
ಭಾರತದ ವಿದೇಶಿ ವಿನಿಮಯ ಮೀಸಲು ನಿಧಿ ಸತತ 6 ವಾರಗಳಿಂದ ಏರಿಕೆ ಕಾಣುವ ಮೂಲಕ ದಾಖಲೆ ನಿರ್ಮಾಣ ಮಾಡಿದೆ. ಅದರಲ್ಲೂ ಕಳೆದ ವಾರ ಗರಿಷ್ಠ ಏರಿಕೆ ಕಂಡಿದೆ.
ಟಾಪ್ 5 ರಾಷ್ಟ್ರಗಳು
ಚೀನ 300 ಲಕ್ಷ ಕೋಟಿ ರೂ.
ಸ್ವಿಟ್ಸರ್ಲೆಂಡ್ 73 ಲಕ್ಷ ಕೋಟಿ ರೂ.
ಜಪಾನ್ 105 ಲಕ್ಷ ಕೋಟಿ ರೂ.
ಭಾರತ 57.4 ಲಕ್ಷ ಕೋಟಿ ರೂ.
ರಷ್ಯಾ: 49.7 ಲಕ್ಷ ಕೋಟಿ ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
Tirupati ಭೇಟಿ; ಜಗನ್ vs ಚಂದ್ರಬಾಬು: ನನ್ನ ”ಧರ್ಮ” ಮಾನವೀಯತೆ
India;ಏಷ್ಯಾ-ಪೆಸಿಫಿಕ್ ವಲಯದಲ್ಲಿ 3ನೇ ಶಕ್ತಿಶಾಲಿ ದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.