Heavy rain; ಉಜ್ಜಯಿನಿ ಮಹಾಕಾಲ ಮಂದಿರ ಗೋಡೆ ಕುಸಿದು 2 ಸಾವು
Team Udayavani, Sep 27, 2024, 11:29 PM IST
ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಗುರುವಾರ ಧಾರಾಕಾರ ಮಳೆಯಾಗಿದೆ. ಇಲ್ಲಿನ ಮಹಾಕಾಲ್ ಮಂದಿರದ ಎದುರು ಇರುವ ಬಡಾ ಗಣೇಶ್ ಮಂದಿರದ ಸಮೀಪದ ಗೋಡೆ ಕುಸಿದು, ಇಬ್ಬರು ಅಸುನೀಗಿದ್ದಾರೆ. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಹೆಚ್ಚಿನವರು, ಪೂಜಾ ಸಾಮಗ್ರಿಗಳ ವ್ಯಾಪಾರಿಗಳಾಗಿದ್ದಾರೆ. ಗೋಡೆಯ ಅವಶೇಷಗಳ ನಡುವೆ ಹಲವರು ಸಿಲುಕಿರುವ ಶಂಕೆ ಇದೆ. ಅವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ ದೇವಾಲಯದ ನಾಲ್ಕನೇ ಗೇಟ್ ಎದುರು ಇರುವ ಹಳೆಯ ಶಾಲೆಯೊಂದರ ಗೋಡೆ ಕುಸಿದಿದೆ.
ಹಿಂದಿನ ಘಟನೆಗಳು: ಮಾ.24ರಂದು ಹೋಳಿ ಹಬ್ಬದ ವೇಳೆ ದೇಗುಲದಲ್ಲಿ ಭಸ್ಮ ಆರತಿ ವೇಳೆ ಬೆಂಕಿ ಆಕಸ್ಮಿಕ ಉಂಟಾಗಿ 14 ಮಂದಿಗೆ ಗಾಯಗಳಾಗಿದ್ದವು. 2023ರ ಮೇ 29ರಂದು ಯೋಜನೆಯ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದ್ದ 6 ಮಂದಿ ಸಪ್ತರ್ಷಿಗಳ ಮೂರ್ತಿ ಗಳು ಬಿರುಗಾಳಿ ಬೀಸಿದ್ದರಿಂದ ಕುಸಿದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.