Officers ವರ್ಗಾವಣೆ ವಿಳಂಬ: ಮಹಾ ಸರಕಾರಕ್ಕೆ ಚುನಾವಣ ಆಯೋಗ ತರಾಟೆ
Team Udayavani, Sep 27, 2024, 11:42 PM IST
ಮುಂಬಯಿ: ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಚುನಾವಣ ಆಯೋಗ ನಿರ್ದೇಶಿಸಿದ್ದನ್ನು ಪಾಲಿಸದ ಮಹಾ ರಾಷ್ಟ್ರ ಆಡಳಿತವನ್ನು ಆಯೋಗವು ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ. 3 ವರ್ಷಗಳಿಗಿಂತ ಹೆಚ್ಚು ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸಿರುವ ಅಧಿಕಾರಿಗಳು ವರ್ಗಾವಣೆ ಮಾಡುವಂತೆ ಜು. 31ರಂದೇ ಆದೇಶ ನೀಡಿದ್ದರೂ, 100ಕ್ಕೂ ಹೆಚ್ಚು ಇನ್ಸ್ಪೆಕ್ಟರ್ಗಳು ಅದೇ ಸ್ಥಾನದಲ್ಲಿರಲು ಕಾರಣವೇನು ಎಂದು ಆಯೋಗ ಪ್ರಶ್ನಿಸಿದೆ. ವರದಿ ಸಲ್ಲಿಸುವಂತೆ ಚುನಾವಣ ಆಯೋ ಗವು ಮಹಾರಾಷ್ಟ್ರ ಸರಕಾರ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ. ಜತೆಗೆ ನ್ಯಾಯಸಮ್ಮತ ಚುನಾವಣೆ ನಡೆಯಲು ಹೊರರಾಜ್ಯ ದಿಂದ ಬರುವ ಅಕ್ರಮ ಮದ್ಯದ ಹರಿವು ತಡೆವಂತೆ ಅಬಕಾರಿ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.