Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Team Udayavani, Sep 28, 2024, 8:24 AM IST
ಪುಣೆ: ಐಷಾರಾಮಿ ಕಾರನ್ನು ಮನಬಂದಂತೆ ಚಲಾಯಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣವಾದ ಪುಣೆ ಪೋರ್ಷೆ ಅಪಘಾತದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಹೊರಬಂದ ಯುವಕನಿಗೆ ಇನ್ನೊಂದು ಆಘಾತ ಎದುರಾಗಿದೆ.
ಅಪಘಾತ ನಡೆಸಿದ ಅಪ್ರಾಪ್ತ ಬಾಲಕನ ವಿರುದ್ಧ ನಡೆಯುತ್ತಿರುವ ಕ್ರಿಮಿನಲ್ ಮೊಕದ್ದಮೆಯಿಂದಾಗಿ ಆತನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಗುತ್ತಿಲ್ಲ ಕಾಲೇಜಿನಲ್ಲಿ ಸೀಟು ಪಡೆಯಲು ಬಾಲಕ ಹೆಣಗಾಡುತ್ತಿದ್ದಾನೆ ಎಂದು ಆತನ ಪರ ವಕೀಲರು ಬಾಲ ನ್ಯಾಯ ಮಂಡಳಿಗೆ (ಜೆಜೆಬಿ) ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಪಿಯುಸಿ ಉತ್ತೀರ್ಣನಾದ ಅಪ್ರಾಪ್ತ ಆರೋಪಿಯು ದೆಹಲಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಬಿಬಿಎ ಕೋರ್ಸ್ಗೆ ಅರ್ಜಿ ಸಲ್ಲಿಸಿದ್ದ ಎನ್ನಲಾಗಿದೆ ಆದರೆ ಇದರ ನಂತರ ನಡೆದ ಘಟನೆಯಿಂದ ಆತನ ಪ್ರವೇಶವನ್ನು ಕಾಲೇಜು ಆಡಳಿತ ಮಂಡಳಿ ನಿರಾಕರಿಸಿದೆ ಎಂದು ವಕೀಲರು ಹೇಳಿದ್ದಾರೆ.
ಮೇ 19 ರ ಮುಂಜಾನೆ 17 ವರ್ಷದ ಬಾಲಕ ತನ್ನ ಪೋರ್ಷೆ ಕಾರನ್ನು ಮನಬಂದಂತೆ ಚಲಾಯಿಸಿ ಕಲ್ಯಾಣಿ ನಗರ ಪ್ರದೇಶದಲ್ಲಿ ಬೈಕ್ನಲ್ಲಿದ್ದ ಐಟಿ ಉದ್ಯೋಗಿಗಳಿಗೆ ಡಿಕ್ಕಿ ಹೊಡೆದು ಅವರ ಬೈಕ್ ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದರು.
ಇದನ್ನೂ ಓದಿ: Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ
Tirupati ಭೇಟಿ; ಜಗನ್ vs ಚಂದ್ರಬಾಬು: ನನ್ನ ”ಧರ್ಮ” ಮಾನವೀಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.