Nite Road Movie Review: ಪಾಪ ಕರ್ಮಗಳ ಲೆಕ್ಕಾಚಾರ!


Team Udayavani, Sep 28, 2024, 12:02 PM IST

Nite Road Movie Review:

ಅದು ಹೈವೇ ರಸ್ತೆ. ಪ್ರತಿ ಅಮಾವಾಸ್ಯೆಯ ದಿನ ಅಲ್ಲಿ ಅಪಘಾತ ನಡೆದು ಒಬ್ಬೊಬ್ಬ ಸಾಯುತ್ತಿರುತ್ತಾನೆ. ಇಂತಹ ಅಪಘಾತದಲ್ಲೇ ಪೊಲೀಸ್‌ ಇನ್ಸ್‌ಪೆಕ್ಟರ್‌ನ ಸಹೋದರ ಸಾಯುತ್ತಾನೆ. ಮೇಲ್ನೋಟಕ್ಕೆ ಯಾವ ವಾಹನ ಕೂಡಾ ಆತನ ಬೈಕ್‌ಗೆ ಡಿಕ್ಕಿ ಹೊಡೆದಿರುವುದಿಲ್ಲ. ಆದರೆ, ಆತ ಸತ್ತಿರುತ್ತಾನೆ. ನಿಗೂಢ… ಇನ್ಸ್‌ ಪೆಕ್ಟರ್‌ ಕುತೂಹಲ ಕೆರಳುತ್ತದೆ. ಅಪಘಾತ ಹಾಗೂ ಸತ್ತ ವ್ಯಕ್ತಿಗಳ ಜಾಡು ಹಿಡಿದು ಹೋಗುವ ಇನ್ಸ್‌ಪೆಕ್ಟರ್‌ಗೆ ಒಂದೊಂದೇ ವಿಚಿತ್ರ ಸತ್ಯಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಇದು ಈ ವಾರ ತೆರೆಕಂಡಿರುವ “ನೈಟ್‌ ರೋಡ್‌’ ಸಿನಿಮಾದ ಒನ್‌ಲೈನ್‌.

ಕೆಲವು ಸಿನಿಮಾಗಳು ಒಂದೊಳ್ಳೆಯ ಪ್ರಯತ್ನವಾಗಿ ಮೂಡಿಬಂದಿರುತ್ತವೆ. ಆದರೆ, ಸರಿಯಾದ ಪ್ರಚಾರದ ಕೊರತೆಯಿಂದ ಬಂದಿದ್ದು, ಹೋಗಿದ್ದು ಗೊತ್ತಾಗುವುದಿಲ್ಲ. “ನೈಟ್‌ ರೋಡ್‌’ ಕೂಡಾ ಒಂದೊಳ್ಳೆಯ ಪ್ರಯತ್ನ. ಒಂದು ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರಕ್ಕೆ ಇರಬೇಕಾದ ಎಲ್ಲಾ ಗುಣಗಳು ಈ ಚಿತ್ರಕ್ಕಿದೆ.

ನಿರ್ದೇಶಕ ಗೋಪಾಲ್‌ ಹಳೇಪಾಳ್ಯ ಅವರ ಅಚ್ಚುಕಟ್ಟಾದ ಕೆಲಸ ಈ ಸಿನಿಮಾವನ್ನು ನೋಡಿಸಿಕೊಂಡು ಹೋಗುವಂತೆ ಮಾಡುತ್ತದೆ. ಕಥೆಯ ವಿಚಾರದಲ್ಲೂ ಅಷ್ಟೇ, ರೆಗ್ಯುಲರ್‌ ಶೈಲಿ ಬಿಟ್ಟು ಹೊಸದನ್ನು ಪ್ರಯತ್ನಿಸಿದ್ದಾರೆ. ಹಿಂದಿನ ಜನ್ಮದ ಪಾಪ ಕರ್ಮಗಳು ಈ ಜನ್ಮದಲ್ಲಿ ಹೇಗೆ ಮನುಷ್ಯನನ್ನು ಸುತ್ತಿಕೊಳ್ಳುತ್ತವೆ ಹಾಗೂ ಪಾಸಿಟಿವ್‌ -ನೆಗೆಟಿವ್‌ಗಳು ಹೇಗೆ ಪರಿಣಾಮ ಬೀರುತ್ತವೆ ಎಂಬುದು ಈ ಸಿನಿಮಾದ ಪ್ರಮುಖ ಅಂಶ. ಈ ಅಂಶವನ್ನು ತುಂಬಾ ಸ್ಪಷ್ಟವಾಗಿ ಹಾಗೂ ಗೊಂದಲ ಮುಕ್ತವಾಗಿ ಕಟ್ಟಿಕೊಟ್ಟಿದ್ದಾರೆ.

ಸಾಮಾನ್ಯವಾಗಿ ಬಹುತೇಕ ಹೊಸಬರು ಒಂದಷ್ಟು ಕಾಮಿಡಿ, ಫೈಟ್‌, ಹಾಡು.. ಸೇರಿಸಿ ಸಸ್ಪೆನ್ಸ್‌-ಥ್ರಿಲ್ಲರ್‌ ಸಿನಿಮಾವನ್ನೇ ಕೆಡಿಸಿಬಿಡುತ್ತಾರೆ. ಆದರೆ, “ನೈಟ್‌ ರೋಡ್‌’ ಅದರಿಂದ ಮುಕ್ತ. ಆ ನಿಟ್ಟಿನಲ್ಲಿ ಚಿತ್ರಕಥೆಗೆ ಹೆಚ್ಚಿನ ಮಾರ್ಕ್ಸ್ ನೀಡಬಹುದು. ಇಲ್ಲಿನ ಕಥೆಯಲ್ಲಿ ಒಂದಷ್ಟು ಕೊಂಡಿಗಳಿವೆ. ಅದರಲ್ಲಿ ಒಂದು ಕೊಂಡಿ ಮಿಸ್‌ ಆದರೂ ಕಥೆ ಅಪೂರ್ಣವಾಗುತ್ತದೆ. ಆದರೆ, ಇಲ್ಲಿ ಎಲ್ಲಾ ಕೊಂಡಿಗಳು ಸರಿಯಾಗಿ ಸೇರಿಕೊಂಡು ಕಥೆಯನ್ನು ಬಿಗಿಯಾಗಿಸಿವೆ.

ಇಡೀ ಚಿತ್ರವನ್ನು ಹೆಗಲ ಮೇಲೆ ಹೊತ್ತು ಸಾಗಿದವರು ಧರ್ಮ. ಪೊಲೀಸ್‌ ಆಫೀಸರ್‌ ಆಗಿ, ಸಸ್ಪೆನ್ಸ್‌ ಬೆನ್ನು ಬಿದ್ದ ವ್ಯಕ್ತಿಯಾಗಿ ಅವರು ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಇವರಿಗೆ ಗೋವಿಂದೇ ಗೌಡ ಸಾಥ್‌ ನೀಡಿದ್ದಾರೆ. ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರವನ್ನು ಇಷ್ಟಪಡುವವರು “ನೈಟ್‌ ರೋಡ್‌’ನಲ್ಲಿ ಪಯಣಿಸಬಹುದು.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Sanju Movie Review

Sanju Movie Review: ಪ್ರೀತಿ ಪಯಣದಲ್ಲೊಂದು ವಿಷ ಘಳಿಗೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Hagga movie review

Hagga movie review: ರೋಚಕ ರಹಸ್ಯದ ಕಥಾನಕ

Shalivahana Shake Movie Review

Shalivahana Shake Movie Review: ಟೈಮ್‌ ಲೂಪ್‌ ಕಥೆಯ ʼಶಾಲಿವಾಹನ ಶಕೆ’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.