Bengaluru: ನಗರದಲ್ಲಿ ಬೈಕ್‌ ಕಳ್ಳತನ ತಡೆಗೆ ಸೈರನ್‌ ಅಳವಡಿಸಿ: ಕಮಿಷನರ್‌

ಸುರಕ್ಷತಾ ಪರಿಕರ, ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲು ವಿತರಕರಿಗೆ ಪತ್ರ ; ದ್ವಿಚಕ್ರ ವಾಹನ ಕಳ್ಳತನ ಕಡಿವಾಣಕ್ಕೆ ಕ್ರಮ: ದಯಾನಂದ್‌

Team Udayavani, Sep 28, 2024, 12:05 PM IST

5-bng

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನ ಕಳವು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದ್ವಿಚಕ್ರ ವಾಹನಗಳ ಮಾರಾಟ ಸಂದರ್ಭದಲ್ಲಿ ಕೆಲ ಸುರಕ್ಷಿತ ಪರಿಕರಗಳನ್ನು ಅಳವಡಿಸುವಂತೆ ನಗರದ ದ್ವಿಚಕ್ರ ವಾಹನಗಳ ವಿತರ ಕರಿಗೆ ಪತ್ರ ಬರೆಯು ವುದಾಗಿ ನಗರದ ಪೊಲೀಸ್‌ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ದ್ವಿಚಕ್ರ ವಾಹನಗಳ ಕಳವು ಹೆಚ್ಚಳವಾಗಿದ್ದು, ದ್ವಿಚಕ್ರ ವಾಹನಗಳಲ್ಲಿ ಸುರಕ್ಷಿತ ಪರಿಕರಗಳು ಸಮಂಜಸವಾಗಿಲ್ಲದ ಕಾರಣ ಕಳ್ಳರು ಸುಲಭವಾಗಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದಾರೆ.ಹೀಗಾಗಿ ನಗರದಲ್ಲಿ ದ್ವಿಚಕ್ರ ವಾಹನಗಳ ಕಳವು ತಡೆ ನಿಟ್ಟಿನಲ್ಲಿ ದ್ವಿಚಕ್ರ ವಾಹನ ಮಾರಾಟ ಸಂದರ್ಭದಲ್ಲಿ ಅತ್ಯಾಧುನಿಕ ಪರಿಕರಗಳನ್ನು ಅಳವಡಿಸಿ, ಗ್ರಾಹಕರಿಗೆ ಮಾಹಿತಿ ನೀಡುವಂತೆ ನಗರದ ದ್ವಿಚಕ್ರ ವಾಹನಗಳ ವಿತರಕರಿಗೆ ಪತ್ರ ಬರೆಯಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಪಿಎಸ್‌, ವೀಲ್‌ಲಾಕ್‌, ಪ್ರಬಲ ಹ್ಯಾಂಡಲ್‌ ಲಾಕ್‌:

ದ್ವಿಚಕ್ರ ವಾಹನಗಳ ಮಾರಾಟದ ವೇಳೆ ಜಿಪಿಎಸ್‌ ಸಿಸ್ಟಂ, ವೀಲ್‌ ಲಾಕಿಂಗ್‌, ಪ್ರಬಲ ಹ್ಯಾಂಡಲ್‌ ಲಾಕ್‌, ನಕಲಿ ಕೀ ಅಥವಾ ಸರ್ಕ್ನೂಟ್‌ ಬ್ರೇಕ್‌ ಮಾಡಿ ವಾಹನ ಕಳ್ಳತನಕ್ಕೆ ಯತ್ನಿಸಿದಾಗ ಸೈರನ್‌ ಆಗುವಂತಹ ವ್ಯವಸ್ಥೆ ಅಥವಾ ಮೊಬೈಲ್‌ಗೆ ಮಾಹಿತಿ ಬರುವಂತಹ ವ್ಯವಸ್ಥೆ ಮಾಡಬೇಕು ಸೇರಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಆ್ಯಂಟಿ ಥೆಫ್ಟ್ ಮೆಷರ್ಸ್‌ ಅಳವಡಿಸುವಂತೆ ಡಿಸ್ಟ್ರಿಬ್ಯೂಟರ್‌ಗಳಿಗೆ ಸೂಚಿಸ ಲಾಗುವುದು.

ಅದರಿಂದ ದ್ವಿಚಕ್ರ ವಾಹನಗಳ ಕಳವು ನಿಯಂತ್ರಿಸಲು ಸಹಕಾರಿಯಾಗಲಿದೆ. ಈ ಬಗ್ಗೆ ಇತ್ತೀಚೆಗೆ ನಡೆದ ದ್ವಿಚಕ್ರ ವಾಹನಗಳ ಉತ್ಪಾದಕರ ಸಮ್ಮೇಳನದಲ್ಲಿಯೂ ಗಮನ ಸೆಳೆಯಲಾಗಿದೆ. ಸಾರ್ವಜನಿಕರು ಸಹ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ತಿಳಿಸುವುದಾಗಿ ಹೇಳಿದರು. ಹಾಗೆಯೇ ವಾಹನ ಮಾಲೀಕರು ಕೂಡ ಕೆಲವೊಂದು ಕ್ರಮಕೈಗೊಳ್ಳಬೇಕಾಗುತ್ತದೆ. ನಿರ್ಜನ ಪ್ರದೇಶ ಹಾಗೂ ಸಿಸಿ ಕ್ಯಾಮೆರ ಇಲ್ಲದ ಸ್ಥಳದಲ್ಲಿ ನಿಲುಗಡೆ ಮಾಡಬಾರದು ಎಂದು ಆಯುಕ್ತರು ಕೋರಿದ್ದಾರೆ.

ರಾಜಧಾನಿಯಲ್ಲಿ ಪ್ರತಿದಿನ 16 ಬೈಕ್‌ ಕಳವು

ನಗರದಲ್ಲಿ ಒಟ್ಟು ಸುಮಾರು 80 ಲಕ್ಷ ದ್ವಿಚಕ್ರ ವಾಹನಗಳಿವೆ. ಪ್ರತಿದಿನ ಸುಮಾರು ಒಂದೂವರೆಯಿಂದ ಎರಡು ಸಾವಿರ ದ್ವಿಚಕ್ರ ವಾಹನಗಳು ಹೊಸದಾಗಿ ನೋಂದಣಿಯಾಗುತ್ತಿವೆ. ಈ ಪೈಕಿ ಕಳೆದ 3 ವರ್ಷಗಳಿಂದ ನಿತ್ಯ ಸರಾಸರಿ ಸುಮಾರು 14ರಿಂದ 16 ದ್ವಿಚಕ್ರ ವಾಹನಗಳು ಕಳ್ಳತನವಾಗುತ್ತಿವೆ. ಕಳೆದ 3 ವರ್ಷಗಳಲ್ಲಿ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 13,628 ದ್ವಿಚಕ್ರ ವಾಹನ ಕಳವು ಪ್ರಕರಣಗಳು ದಾಖಲಾಗಿವೆ. ಅದರಂತೆ 2022-4,785, 2023-5,580, 2024(ಆ.31)- 3,263 ದ್ವಿಚಕ್ರ ವಾಹನಗಳು ಕಳ್ಳತನವಾಗಿವೆ. ಈ ಪೈಕಿ 4,420 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದರು.

ಪಟಾಕಿ ವರ್ತಕರ ಜತೆ ಪೊಲೀಸ್‌ ಆಯುಕರ ಸಭೆ

ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಪಟಾಕಿ ವರ್ತಕರೊಂದಿಗೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಶುಕ್ರವಾರ ಸಭೆ ನಡೆಸಿದರು.

ಸಭೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಅಗ್ನಿಶಾಮಕ ಮತ್ತು ತುರ್ತು ಸೇವೆ, ಜಿಎಸ್‌ಟಿ ಇಲಾಖೆಗಳ ಪ್ರತಿನಿಧಿಗಳು ಹಾಗೂ ಪಟಾಕಿ ವರ್ತಕರು ಭಾಗಿಯಾಗಿದ್ದರು.

ಕಳೆದ ವರ್ಷ ದೀಪಾವಳಿ ಸಂದರ್ಭದಲ್ಲಿ ಮಾರಾಟ ಮಾಡಲು ದಾಸ್ತಾನು ಮಾಡಲಾಗಿದ್ದ ಪಟಾಕಿಗಳ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 17 ಮಂದಿ ಮೃತಪಟ್ಟಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ವ್ಯಾಪ್ತಿಯಲ್ಲಿ ನಡೆದಿತ್ತು. ನಗರದಲ್ಲಿ ಅಂತಹ ಯಾವುದೇ ದುರಂತ ಮರುಕಳಿಸದಂತೆ ಮುನ್ನೆ ಚ್ಚರಿಕೆ ವಹಿಸಿರುವ ಬೆಂಗಳೂರು ಪೊಲೀಸ್‌ ಇಲಾಖೆ, ವರ್ತಕರೊಂದಿಗೆ ಸಭೆ ನಡೆಸಿ ವಿವಿಧ ಇಲಾಖೆಗಳ ಅಹವಾಲುಗಳನ್ನು ಸ್ವೀಕರಿಸಿದೆ.

ಪಟಾಕಿ ಮಾರಾಟಗಾರರು ಪೊಲೀಸ್‌, ಅಗ್ನಿಶಾಮಕ, ಬಿಬಿಎಂಪಿ, ಬೆಸ್ಕಾಂ ಇಲಾಖೆಗಳಿಂದ ಅನುಮತಿ ಪಡೆದಿರಬೇಕು. ಹಾಗೂ ಆಯಾ ಇಲಾಖೆಗಳು ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಬೇಕು. ಅಲ್ಲದೇ, ಸುಪ್ರೀಂ ಕೋರ್ಟ್‌ ಆದೇಶದಂತೆ ಹಸಿರು ಪಟಾಕಿಗಳನ್ನು ಮಾತ್ರವೇ ಮಾರಾಟ ಮಾಡಬೇಕು. ನಕಲಿ ಪಟಾಕಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.