Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

ನಗರದಲ್ಲಿ ಐಟಿಸಿ ಸನ್‌ಫೀಸ್ಟ್ ಡಾರ್ಕ್‌ ಫ್ಯಾಂಟಸಿಯಿಂದ "ಲಿಲ್‌ ಬಿಗ್‌ ಫ್ಯಾಂಟಸಿ ಸೈನ್ಸ್‌ ಬಸ್‌' ಬಿಡುಗಡೆ‌

Team Udayavani, Sep 28, 2024, 3:23 PM IST

12-bng

ಬೆಂಗಳೂರು: ಬಾಹ್ಯಾಕಾಶ, ಪ್ರಕೃತಿ ಹಾಗೂ ವಿಜ್ಞಾನ ಲೋಕದ ಕೌತುಕಗಳನ್ನು ಕಣ್ತುಂಬಿಕೊಳ್ಳುವ ಮೂಲಕ ತಮ್ಮ ಜ್ಞಾಪಕ ಶಕ್ತಿ, ಆಲೋಚನಾ ಶಕ್ತಿಯನ್ನು ವೃದ್ಧಿಸಿ ಕೊಳ್ಳಲು ಸಹಾಯವಾಗುವ ನಿಟ್ಟಿನಲ್ಲಿ ಶಾಲಾ ಮಕ್ಕಳ ಬಳಿಯೇ ಬರುತ್ತಿದೆ “ಲಿಲ್‌ ಬಿಗ್‌ ಫ್ಯಾಂಟಸಿಯ ಸೈನ್ಸ್‌ ಬಸ್‌’… ‌

ಐಟಿಸಿ ಸನ್‌ಫೀಸ್ಟ್‌ ಡಾರ್ಕ್‌ ಫ್ಯಾಂಟಸಿಯಿಂದ ತಯಾರಾಗಿರುವ ಈ ವಿನೂತನ ಸೈನ್ಸ್‌ ಬಸ್‌ ಅನ್ನು ಇಸ್ರೋ ಮಾಜಿ ನಿರ್ದೇಶಕ ಪ್ರಕಾಶ್‌ ರಾವ್‌, ಬಾಲಿವುಡ್‌ ನಟಿ ಮಂದಿರಾ ಬೇಡಿ, ನಿಮ್ಹಾನ್ಸ್‌ನ ಡಿಎಂ ಡಾ. ಮೇಘಾ ಮಹಾಜನ್‌, ಐಟಿಸಿ ಲಿಮಿಟೆಡ್‌ ಬಿಸ್ಕೆಟ್ಸ್‌ ಮತ್ತು ಕೇಕ್ಸ್ ಕ್ಲಸ್ಟರ್‌, ಫುಡ್ಸ್ ವಿಭಾಗದ ಸಿಒಒ ಅಲಿ ಹ್ಯಾರಿಸ್‌ ಶೇರ್‌ ಅವರು “ಸೈನ್ಸ್‌ ಬಸ್‌’ ಅನ್ನು ನಗರದ ಸೆಂಟ್‌ ಜೋಸೆಫ್ ಹೈಸ್ಕೂಲ್‌ ಮೈದಾನದಲ್ಲಿ ಅನಾವರಣಗೊಳಿಸಿದರು.

ಈ ಕುರಿತು ಮಾತನಾಡಿದ ಮಾಜಿ ಇಸ್ರೋ ನಿರ್ದೇಶಕ ಪ್ರಕಾಶ್‌ ರಾವ್‌, ಮಕ್ಕಳಲ್ಲಿ ಸೃಜನಶೀಲತೆ ಯನ್ನು ಉತ್ತೇಜಿಸಿ ಅವರ ಕಲ್ಪನೆಗೆ ಜೀವ ನೀಡುವ ಉದ್ದೇಶದಿಂದ ಈ ಸೈನ್ಸ್‌ ಬಸ್‌ನನ್ನು ಐಟಿಸಿ ತಂಡ ಬಿಡುಗಡೆ ಮಾಡಿದೆ ಎಂದರು. ‌

ಐಟಿಸಿ ಲಿಮಿಟೆಡ್‌ ಬಿಸ್ಕೆಟ್ಸ್‌ ಮತ್ತು ಕೇಕ್ಸ್ ಕ್ಲಸ್ಟರ್‌, ಫುಡ್ಸ್ ವಿಭಾಗದ ಸಿಒಒ ಅಲಿ ಹ್ಯಾರಿಸ್‌ ಶೇರ್‌ , ಮಕ್ಕ ಳ ಆಲೋಚನೆಗಳಿಗೆ ತಕ್ಕಂತೆ ಐಟಿಸಿ ತಂಡ ಈ ವಿನೂತನ ಹಾಗೂ ಅತ್ಯಾಧುನಿಕ ತಂತ್ರಜ್ಞಾನದಿಂದ ಸೈನ್ಸ್‌ ಬಸ್‌ ತಯಾರಿಸಿದೆ ಎಂದರು.

ಇದೇ ವೇಳೆ ಮಾತನಾಡಿದ ಬಾಲಿವುಡ್‌ ನಟಿ ಮಂದಿರಾ ಬೇಡಿ, ನನಗೆ 8 ವರ್ಷದ ಮಗಳಿದ್ದಾಳೆ. ಅವಳು ಒಂದೊಂದು ಕಲ್ಪನೆಯಲ್ಲಿ ಇರುತ್ತಾಳೆ. ಒಂದು ದಿನ ಪೈಲೆಟ್‌, ಮತ್ತೂಂದು ದಿನ ಚೆಫ್ ಆಗಬೇಕು ಎನ್ನುತ್ತಾಳೆ. ಹೀಗೆ ಮಕ್ಕಳ ಕಲ್ಪನೆಗಳು ದಿನದಿಂದ ದಿನಕ್ಕೆ ಬದಲಾಗುತ್ತಿರುತ್ತವೆ. ಅವರ ಕಲ್ಪನೆಗಳಿಗೆ ಐಟಿಸಿ ತಂಡ ರೆಕ್ಕೆ ಕಟ್ಟಿದಂತಾಗಲಿದೆ ಎಂದರು. ಸೇಂಟ್‌ ಜೋಸೆಫ್‌ ಶಾಲೆ ಪ್ರಾಂಶುಪಾಲರು ರೋಹನ್‌ ಡಿ ಅಲ್ಮೇಡಾ ಇತರರಿದ್ದರು.

ನಾಸಾ ಭೇಟಿಗೆ ಅವಕಾಶ

ಸೈನ್ಸ್‌ ಬಸ್‌ನಲ್ಲಿ ಮಕ್ಕಳು ತಮ್ಮ ಆಸಕ್ತಿದಾ ಯಕ ವಿಚಾರ ಹಾಗೂ ಕಲೆಯನ್ನು ಪ್ರದರ್ಶಿ ಸಬಹುದು. ಯಾವ ಮಗುವಿನ ಕಲ್ಪನೆಯು ಹೆಚ್ಚು ವಿಭಿನ್ನ ಹಾಗೂ ವಿಶೇಷವಾಗಿರುತ್ತ ದೆಯೋ ಆ ಆಯ್ದ ಮಕ್ಕಳನ್ನು ನಾಸಾಗೆ ಭೇಟಿ ನೀಡುವ ಅವಕಾಶವನ್ನು ಐಟಿಸಿ ಡಾರ್ಕ್‌ ಫ್ಯಾಂಟಸಿ ತಂಡ ಮಾಡಲಿದೆ. ಪ್ರಸ್ತು ತ ಬೆಂಗಳೂರಿನಲ್ಲಿ ನೂತನ ಬಸ್‌ಗೆ ಚಾಲನೆ ಸಿಕ್ಕಿದ್ದು, ಈ ಬಸ್‌ ಇಡೀ ದೇಶಾ ದ್ಯಂತ ಎಲ್ಲೆ ಡೆ ಸಂಚರಿಸಿ, ಕೋಟ್ಯಂತರ ಮಕ್ಕಳ ಕ್ರಿಯಾ ತ್ಮಕತೆ ಹಾಗೂ ಕಲ್ಪನೆಗೆ ಸಾಕ್ಷಿಯಾಗಲಿದೆ.

ಸೈನ್ಸ್‌ ಬಸ್‌ನ ವಿಶೇಷತೆ

ಈ ಬಸ್‌ ಹಲವು ವಿಶೇಷ ಹಾಗೂ ಕೌತುಕದಿಂದ ಕೂಡಿದೆ. ಈ ಬಸ್‌ನಲ್ಲಿ ವಿಸ್ತಾರವಾದ ಸಂವಾದಾತ್ಮಕ ಪರದೆ ಇದ್ದು, ಅತ್ಯಾಧುನಿಕ ತಂತ್ರಜ್ಞಾನದ ಸಂಯೋಜನೆಯಿಂದ ನಡೆಸಲ್ಪಡುತ್ತದೆ. ಇದರಲ್ಲಿ ಮಕ್ಕಳ ತಮ್ಮ ಕೈಯಿಂದ ಬಿಡಿಸಿದ ಚಿತ್ರ ಅಥವಾ ಪಾತ್ರವು ರೋಮಾಂಚಕ ಡಿಜಿಟಲ್‌ ರಚನೆಗಳಾಗಿ ಪರಿವರ್ತನೆಗೊಳ್ಳಲಿದೆ. ಮಕ್ಕಳು ಪೇಪರ್‌ ಮೇಲೆ ಬರೆದ ಈ ಕಲಾಕೃತಿಯನ್ನು ಸ್ಕ್ಯಾನ್‌ ಮಾಡಿದ ನಂತರ, ಅವರ ಪಾತ್ರಗಳು ಅಥವಾ ಕಲಾಕೃತಿಗಳು ಸ್ಪೇಸ್‌ ಶಿಪ್‌ನಲ್ಲಿ ಡಿಜಿಟಲ್‌ ಆಗಿ ರೂಪದಲ್ಲಿ 3ಡಿ ಸಂವಾದಾತ್ಮಕ ಅಕ್ಷರಗಳಾಗಿ ಪ್ರದರ್ಶನಗೊಳ್ಳಲಿದೆ.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

8-bng

Bengaluru: ವಾಹನ ಕಳ್ಳನ ಬಂಧನ: 30 ದ್ವಿಚಕ್ರ ವಾಹನ ಜಪ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.