Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Team Udayavani, Sep 29, 2024, 6:45 AM IST
ಮಂಗಳೂರು: ಸೈಬರ್ ಕ್ರೈಂ ಬ್ರಾಂಚ್ ಅಧಿಕಾರಿ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿಯೋರ್ವರನ್ನು ಬೆದರಿಸಿ 35 ಲ.ರೂ.ಗಳನ್ನು ವರ್ಗಾಯಿಸಿ ವಂಚಿಸಿರುವ ಬಗ್ಗೆ ಮಂಗಳೂರು ನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೋರ್ವರು ಸೆ.24ರಂದು ಮನೆಯಲ್ಲಿರುವಾಗ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ಆತನನ್ನು ಮುಂಬೈಯ ಡಿಎಚ್ಎಲ್ ಕೊರಿಯರ್ ಸರ್ವಿಸ್ ಕಂಪೆನಿಯ ಕಾರ್ತಿಕ್ ಶರ್ಮಾ ಎಂದು ಪರಿಚಯಿಸಿಕೊಂಡು “ಮುಂಬೈನಿಂದ ತೈವಾನ್ಗೆ ಕಾನೂನುಬಾಹಿರವಾಗಿ ಮಾದಕ ವಸ್ತುಗಳಿರುವ ಕೊರಿಯರ್ ನಿಮ್ಮ ಹೆಸರಿನಲ್ಲಿ ಬಂದಿದೆ. ಅದನ್ನು ಮುಂಬೈ ಸೈಬರ್ ಕ್ರೈಂ ಬ್ರಾಂಚ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ನೀವು ಸೈಬರ್ ಕ್ರೈಂ ಅಧಿಕಾರಿಗಳೊಂದಿಗೆ ಮಾತನಾಡಬೇಕು’ ಎಂದು ಹೇಳಿ 9957376759 ನಂಬರ್ನ್ನು ನೀಡಿದ್ದಾನೆ. ದೂರುದಾರರು ಆ ನಂಬರ್ಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿದ ವ್ಯಕ್ತಿ ಆತನನ್ನು ಸೈಬರ್ ಕ್ರೈಂನ ಅಧಿಕಾರಿ ಪ್ರಾಣೇಶ್ ಗುಪ್ತಾ ಎಂದು ಪರಿಚಯಿಸಿಕೊಂಡು ವಿಡಿಯೋ ಕಾಲ್ ಮೂಲಕ ದೂರುದಾರರಲ್ಲಿ ಮಾತನಾಡಿ “ಅಂತಾರಾಷ್ಟ್ರೀಯ ಡ್ರಗ್ಸ್ ಪ್ರಕರಣದಲ್ಲಿ ನಿಮ್ಮ ಹೆಸರು ನಮೂದಿಸಿದ್ದು ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ. ಈ ಪ್ರಕರಣದಿಂದ ಮುಕ್ತಗೊಳಿಸಲು ಹಣ ನೀಡಬೇಕು’ ಎಂದು ಹೇಳಿದ್ದಾನೆ. ಇದರಿಂದ ಭಯಗೊಂಡ ದೂರುದಾರರು ಅಪರಿಚಿತ ವ್ಯಕ್ತಿ ನೀಡಿದ ಖಾತೆಗೆ ಒಟ್ಟು 35 ಲ.ರೂ.ಗಳನ್ನು ವರ್ಗಾಯಿಸಿದ್ದಾರೆ. ಅನಂತರ ಇದೊಂದು ವಂಚನೆ ಎಂಬುದಾಗಿ ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.