Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
ಟೀಕೆಗಳ ನಡುವೆಯೂ ಹುದ್ದೆ..
Team Udayavani, Sep 28, 2024, 10:17 PM IST
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಶನಿವಾರ(ಸೆ28 ) ಮೆಗಾ ಕ್ಯಾಬಿನೆಟ್ ಪುನರ್ ರಚನೆ ಮಾಡಲು ತೀರ್ಮಾನ ಮಾಡಿದ್ದು, ಉಪಮುಖ್ಯಮಂತ್ರಿಯಾಗಿ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ಹೆಸರಿಸಲಾಗಿದೆ ಎಂದು ರಾಜಭವನವನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ. ಉದಯನಿಧಿ ಪ್ರಸ್ತುತ ಕ್ರೀಡಾ ಸಚಿವರಾಗಿದ್ದಾರೆ.
ಕೆಲ ದಿನಗಳಿಂದ ಉದಯನಿಧಿ ಅವರಿಗೆ ಡಿಸಿಎಂ ಹುದ್ದೆ ನೀಡಲಾಗುತ್ತದೆ ಎಂಬ ವಿಚಾರ ಚರ್ಚೆಯಾಗುತ್ತಿತ್ತು. ಈ ಬಗ್ಗೆ ವಿಪಕ್ಷಗಳಾದ ಎಐಎಡಿಎಂಕೆ, ಬಿಜೆಪಿ ತೀವ್ರ ಟೀಕೆಯನ್ನೂ ವ್ಯಕ್ತ ಪಡಿಸಿದ್ದವು.
ಡಿಎಂಕೆ ಪಕ್ಷದ ಹಿರಿಯ ನಾಯಕರನ್ನು ಮೀರಿ, ಟೀಕೆಗಳ ನಡುವೆಯೂ ಪುತ್ರನಿಗೆ ಬಡ್ತಿ ನೀಡುವಲ್ಲಿ 71 ರ ಹರೆಯದ ಸ್ಟಾಲಿನ್ ಯಶಸ್ವಿಯಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಡಿಎಂಕೆ ನೇತೃತ್ವವನ್ನು 46 ರ ಹರೆಯದ ಉದಯನಿಧಿ ವಹಿಸುವುದು ಖಚಿತವಾಗಿದೆ.
ರಾಜಭವನದ ಪ್ರಕಟಣೆಯ ಪ್ರಕಾರ, ಭಾನುವಾರ (ಸೆಪ್ಟೆಂಬರ್ 29)ಮಧ್ಯಾಹ್ನ 3:30 ಕ್ಕೆ ಚೆನ್ನೈನ ರಾಜಭವನದಲ್ಲಿ ನೂತನ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಸಂಪುಟ ಪುನರ್ ರಚನೆಯಲ್ಲಿಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಪಡೆದ ಸೆಂಥಿಲ್ ಬಾಲಾಜಿಯವರನ್ನು ಸಂಪುಟಕ್ಕೆ ಪುನಃ ಸೇರಿಸಿಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ರೇಸ್ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ
Kashmir;ಕುಲ್ಗಾಮ್ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.