Sullia: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್: ದೂರು
Team Udayavani, Sep 29, 2024, 7:05 AM IST
ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಉಲ್ಲೇಖೀಸಿ ಅದರಲ್ಲಿ ಇಬ್ಬರ ಹೆಸರನ್ನು ಹಾಕಿ ಫೇಸ್ಬುಕ್ನಲ್ಲಿ ವ್ಯಕ್ತಿಯೋರ್ವರು ಪೋಸ್ಟ್ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಘಟನೆ ಬಗ್ಗೆ ಇತ್ತಂಡಗಳಿಂದ ಬೆಳ್ಳಾರೆ ಠಾಣೆಗೆ ದೂರು ನೀಡಲಾಗಿದೆ.
ಪ್ರವೀಣ್ ಕೊಲೆ ಪ್ರಕರಣವನ್ನು ಉಲ್ಲೇಖೀಸಿ ಹಾಗೂ ವಿವಿಧ ಆರೋಪಗಳನ್ನು ಹೊರಿಸಿ ಇಬ್ರಾಹಿಂ ಖಲೀಲ್ ಎಂಬವರು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾರೆ. ಇದು ವೈರಲ್ ಆಗುತ್ತಿದ್ದು, ವಿವಿಧ ರೀತಿಯಲ್ಲಿ ಚರ್ಚೆಗಳಿಗೆ ಕಾರಣವಾಗುತ್ತಿವೆ. ಜಮಾಲ್ ಮತ್ತು ಅಜರುದ್ದೀನ್ ಎಂಬಿಬ್ಬರ ವಿರುದ್ಧವೂ ವಿವಿಧ ಆರೋಪ ಹೊರಿಸಿ ಬರಹವನ್ನು ಪೋಸ್ಟ್ ಮಾಡಲಾಗಿದ್ದು, ಇದರಲ್ಲಿ ಪ್ರವೀಣ್ ಪ್ರಕರಣವೂ ಉಲ್ಲೇಖವಾಗಿತ್ತು.
ಈ ಸಂಬಂಧ ನಿಂತಿಕಲ್ಲು ಸಮೀಪದ ಇಬ್ರಾಹಿಂ ಖಲೀಲ್ ವಿರುದ್ಧ ಬೆಳ್ಳಾರೆ ಜಮಾಅತರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ 2018ರಿಂದ ಬೆಳ್ಳಾರೆಯ ಜಮಾಲ್ ಮತ್ತು ಅಝರುದ್ದೀನ್ ಅವರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಇಬ್ರಾಹಿಂ ಖಲೀಲ್ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ. ವೈಯಕ್ತಿಕ ವಿಚಾರದಲ್ಲಿ ಆರೋಪಗಳನ್ನು ಮಾಡಲಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.