Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
Team Udayavani, Sep 29, 2024, 10:33 AM IST
ಸೇಡಂ: ಪತಿಯಿಂದಲೇ ಪತ್ನಿ ಹತ್ಯೆಯಾದ ಘಟನೆ ಸೆ.28ರ ಶನಿವಾರ ರಾತ್ರಿ ತಾಲೂಕಿನ ಬಟಗೇರಾ ಎಂಬಲ್ಲಿ ನಡೆದಿದೆ.
ತಾಲೂಕಿನ ಬಟಗೇರಾ(ಬಿ) ನಿವಾಸಿ ನಾಗಮ್ಮ ಶೇಕಪ್ಪ (45) ಕೊಲೆಯಾದ ಮಹಿಳೆ. ಪತಿ ಶೇಕಪ್ಪ ಮಾದ್ವಾರ (50) ಕೊಲೆ ಮಾಡಿದಾತ.
ನಾಗಮ್ಮ ಅವರು ಶೇಕಪ್ಪ ಅವರ ಮೊದಲ ಪತ್ನಿಯಾಗಿದ್ದು, ಶೇಕಪ್ಪ ಕಳೆದ 5-6 ವರ್ಷದ ಹಿಂದೆ 2ನೇ ಮದುವೆ ಮಾಡಿಕೊಂಡಿದ್ದರು. ಈ ಕಾರಣಕ್ಕೆ ಹಾಗೂ ಕುಡಿತದ ಚಟ ಹೊಂದಿದ್ದ ಎನ್ನುವ ಕಾರಣಕ್ಕೆ ಆಗಾಗ ಗಂಡ ಹೆಂಡತಿ ಮಧ್ಯೆ ಜಗಳವಾಗುತ್ತಿತ್ತು ಎನ್ನಲಾಗಿದೆ.
ಪತ್ನಿ ನಾಗಮ್ಮ ಅನ್ಯರ ಮನೆಯಲ್ಲಿ ಕೆಲಸ ಮಾಡಿಕೊಂಡು ವಾಸವಿದ್ದಳು. ಸೆ.28ರ ಶನಿವಾರದಂದು ನಾಗಮ್ಮಳ ತಮ್ಮ ಹಾಗೂ ಆತನ ಪತ್ನಿ(ನಾಗಮ್ಮಳ ಅತ್ತಿಗೆ) ಮನೆಗೆ ಬಂದು ಇಬ್ಬರ ನಡುವೆ ರಾಜಿ ಸಂಧಾನ ಮಾಡಿಸಿದ್ದಾರೆ. ರಾತ್ರಿ ಊಟ ಮುಗಿಸಿ ನಾಗಮ್ಮಳ ತಮ್ಮ ತನ್ನ ಪತ್ನಿಯನ್ನು ಅಲ್ಲೇ ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ನಾಗಮ್ಮ ಹಾಗೂ ಶೇಕಪ್ಪ ಒಂದು ಕೊಣೆಯಲ್ಲಿ ಮಲಗಿದ್ದರು. ಈ ನಡುವೆ ಗಂಡ- ಹೆಂಡತಿ ಮಧ್ಯೆ ಜಗಳವಾಗಿದೆ. ಇದರಿಂದ ಕೋಪಗೊಂಡ ಶೇಕಪ್ಪ ಪತ್ನಿಯ ಕುತ್ತಿಗೆಗೆ ಹಗ್ಗ ಬಿಗಿದು ಉಸಿರುಗಟ್ಟಿಸಿದ್ದಾನೆ. ನಂತರ ಕೊಡಲಿಯಿಂದ ಕುತ್ತಿಗೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಮೃತ ನಾಗಮ್ಮಳಿಗೆ 3 ಜನ ಹೆಣ್ಣು ಮಕ್ಕಳಿದ್ದಾರೆ. ಮೊದಲ ಮಗಳಿಗೆ ಮದುವೆಯಾಗಿದ್ದು, 2ನೇ ಮಗಳು ತವರಲ್ಲಿದ್ದು, 3ನೇ ಮಗಳೊಂದಿಗೆ ನಾಗಮ್ಮ ವಾಸವಿದ್ದಳು.
ಆರೋಪಿ ಶೇಕಪ್ಪನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು
Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ಮನನೊಂದು ರೈತ ಆತ್ಮಹತ್ಯೆ
Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಭೇಟಿ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ
MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.