Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್ ಗಿಫ್ಟ್ ಮಾಡಿದ ನಿರ್ಮಾಪಕ
Team Udayavani, Sep 29, 2024, 11:01 AM IST
ತುಳುನಾಡಿನ ಕಾರಣಿಕ ಪುರುಷ “ಕೊರಗಜ್ಜ’ (Koragajja) ಕುರಿತಾಗಿ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಸಿನಿಮಾ ಚಿತ್ರೀಕರಣ ಮುಗಿಸಿ ಬಿಡುಗಡೆಯ ಹಂತಕ್ಕೆ ಬಂದಿದೆ. ಸಿನಿಮಾ ಮೂಡಿಬಂದಿರುವ ರೀತಿಗೆ ಫಿದಾ ಆದ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಅವರು ನಿರ್ದೇಶಕ ಸುಧೀರ್ ಅತ್ತಾವರ್ (Sudhir Attavar) ಅವರಿಗೆ ಕಿಯಾ ಕೇರನ್ಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಮೂಲಕ ಸಿನಿಮಾ ಮೇಲಿನ ಪ್ರೀತಿ ಪ್ರದರ್ಶಿಸಿದ್ದಾರೆ ತ್ರಿವಿಕ್ರಮ ಸಪಲ್ಯ.
ಚಿತ್ರದ ಕುರಿತು ಮಾತನಾಡುವ ತ್ರಿವಿಕ್ರಮ ಸಪಲ್ಯ, ನನ್ನ ತ್ರಿವಿಕ್ರಮ ಸಿನೆಮಾಸ್ ಬ್ಯಾನರ್ ಅಡಿಯಲ್ಲಿ ಈ ಮಟ್ಟದಲ್ಲಿ ಸಿನಿಮಾ ಒಂದು ಮೂಡಿ ಬರುತ್ತದೆ ಎಂದು ನಾನು ಊಹಿಸಿರಲಿಲ್ಲ. ಕೊರಗಜ್ಜ ಸಿನಿಮಾ ಎಲ್ಲಾ ಊಹೆಯನ್ನು ಮೀರಿ ಅದ್ಭುತ ರೀತಿಯಲ್ಲಿ ಮೂಡಿಬಂದಿದೆ. ಭಾರತೀಯ ಚಿತ್ರರಂಗದಲ್ಲೇ ಇದೊಂದು ವಿಶಿಷ್ಟ ಸಿನೆಮಾ ಆಗಿ ಮೂಡಿ ಬಂದಿದೆ. ನಿರ್ದೇಶಕರು ಸುಮಾರು ಒಂದುವರೆ ವರ್ಷಗಳ ಕಾಲ ತಯಾರಿ ಮಾಡಿ ಎಂಟು ನೂರು ವರ್ಷದ ಹಿಂದೆ ಬದುಕಿದ್ದ 23-24 ವರ್ಷ ಪ್ರಾಯದ ತನಿಯಾ ಎನ್ನುವ ಆದಿವಾಸಿ ಹುಡುಗ, ಮಹಾನ್ ಶಕ್ತಿ ಕೊರಗಜ್ಜ ಆಗಿ ಬೆಳಗುತ್ತಿರುವ ಬಗೆ ಹೇಗೆ ಎನ್ನುವುದನ್ನು ಕಣ್ಣಿಗೆ ಕಟ್ಟುವ ರೀತಿಯಲ್ಲಿ ವಿಭಿನ್ನ ಈ ಸಿನಿಮಾವನ್ನು ಮಾಡಿದ್ದಾರೆ. ನೂರಾರು ಕಲಾವಿದರನ್ನು ಬಳಸಿಕೊಂಡು ಮೈನವಿನೇಳಿಸುವಂತೆ ಚಿತ್ರೀಕರಿಸಿದ್ದ ಯುದ್ಧ ಭೂಮಿಯಪರಿಕಲ್ಪನೆಯಂತೂ ಜಗತ್ತಿನ ಯಾವುದೇ ವಾರ್ ಸಿನೆಮಾ ಸೃಷ್ಟಿಸುವ ಸಂಚಲನವನ್ನು ಕೊರಗಜ್ಜ ಸಿನಿಮಾ ಸೃಷ್ಟಿಸಿದೆ’ ಎನ್ನುತ್ತಾರೆ.
ಚಿತ್ರದಲ್ಲಿ ಕಬೀರ್ ಬೇಡಿ, ಸಂದೀಪ್ ಸೋಪರ್ಕರ್, ಗಣೇಶ್ ಆಚಾರ್ಯ, ಶ್ರುತಿ, ಭವ್ಯ, ಋತಿಕಾ ಮೊದಲಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಜೀತ್ ಜೊಸ್ಸಿ ಮತ್ತು ವಿದ್ಯಾಧರ್ ಶೆಟ್ಟಿ ಸಂಕಲನ, ಮನೋಜ್ ಪಿಳ್ಳೆ ಮತ್ತು ಪವನ್ ವಿ. ಛಾಯಾಗ್ರಹಣ, ಬಿಬಿನ್ ದೇವ್ ಸೌಂಡ್ ಡಿಸೈನಿಂಗ್ ಈ ಸಿನಿಮಾಕ್ಕಿದೆ. ಕೊರಗಜ್ಜ ಸಿನಿಮಾ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಭೇಟಿ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ
MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.