Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !
ಕೊನೆಯ ಹಂತದ ಚುನಾವಣ ಪ್ರಚಾರದ ವೇಳೆ ಭಾವನಾತ್ಮಕವಾಗಿ ವಿಚಾರ ಬಳಕೆ!
Team Udayavani, Sep 29, 2024, 5:00 PM IST
ಶ್ರೀನಗರ: ದಕ್ಷಿಣ ಲೆಬನಾನ್ನ ಉಗ್ರ ಸಂಘಟನೆಯ ಪ್ರಧಾನ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ (64)ನನ್ನು ಹತ್ಯೆಗೈದಿರುವುದನ್ನು ಖಂಡಿಸಿ ಶನಿವಾರ(ಸೆ28 ) ಮಧ್ಯಾಹ್ನದ ಬಳಿಕ ನೂರಾರು ಜನರು ಪ್ರತಿಭಟನೆ ನಡೆಸಿ ಇಸ್ರೇಲ್ ಮತ್ತು ಅಮೆರಿಕ ವಿರುದ್ಧ ಘೋಷಣೆ ಕೂಗಿದ್ದಾರೆ. ಪ್ರತಿಭಟನೆಗೆ ಮಾಜಿ ಸಿಎಂ ಮತ್ತು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಬೆಂಬಲ ಸೂಚಿಸಿದ್ದಾರೆ.
ಹಸನ್ ನಸ್ರಲ್ಲಾ ಹತ್ಯೆಗೆ ಹಿರಿಯ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಅಗಾ ಸೈಯದ್ ರುಹುಲ್ಲಾ ಮೆಹದಿ ಕೂಡ ಸಂತಾಪ ಸೂಚಿಸಿ ತಮ್ಮ ಚುನಾವಣ ಪ್ರಚಾರವನ್ನು ರದ್ದುಗೊಳಿಸಿದ್ದಾರೆ.
ಶ್ರೀನಗರ ಮತ್ತು ನೆರೆಯ ಬುದ್ಗಾಮ್ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಾವಿರಾರು ಜನರು ಬೀದಿಗಿಳಿದು ನಸ್ರಲ್ಲಾ ಹತ್ಯೆಯನ್ನು ವಿರೋಧಿಸಿದ್ದಾರೆ. ಇಸ್ರೇಲ್ ವಿರೋಧಿ ಮತ್ತು ಅಮೆರಿಕ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ನಸ್ರಲ್ಲಾ ಭಾವ ಚಿತ್ರಗಳನ್ನು ಹಿಡಿದು ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದಾರೆ.
ಮೆಹಬೂಬಾ ಮುಫ್ತಿ ಚುನಾವಣ ಪ್ರಚಾರವನ್ನು ಕೊನೆಗೊಳಿಸುವುದಾಗಿ ಘೋಷಿಸಿದರು. ಅಕ್ಟೋಬರ್ 1 ರಂದು ಮೂರನೇ ಮತ್ತು ಕೊನೆಯ ಹಂತದಲ್ಲಿ ಉತ್ತರ ಕಾಶ್ಮೀರದ 16 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಭಾನುವಾರ ಚುನಾವಣ ಪ್ರಚಾರದ ಕೊನೆಯ ದಿನವಾಗಿದೆ. ಕಾಶ್ಮೀರದ ಶಿಯಾ ಸಮುದಾಯ ನಸ್ರಲ್ಲಾನ್ನು “ಪ್ರತಿರೋಧದ ಸಂಕೇತ” ಎಂದು ಪರಿಗಣಿಸಿದ್ದು ಪ್ರತಿಭಟನೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ
J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್ ಖರ್ಗೆ!
Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.