Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

ಬಿಜೆಪಿ ಈಡೇರಿಸಲು ಸಾಧ್ಯವಾಗದ ಯಾವುದೇ ಗ್ಯಾರಂಟಿ ನೀಡುವುದಿಲ್ಲ

Team Udayavani, Sep 29, 2024, 5:24 PM IST

1-shah

ಚಂಡೀಗಢ: ಚುನಾವಣ ಕಾವೇರಿರುವ ಹರಿಯಾಣದಲ್ಲಿ ಭಾನುವಾರ(ಸೆ29) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ”ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ರಾಹುಲ್ ಗಾಂಧಿ ಅವರ ಚುನಾವಣ ಗ್ಯಾರಂಟಿಗಳು ಫಸಲು ಪಡೆದಿವೆ ಎಂದಿದ್ದಾರೆ.

ಗುರುಗ್ರಾಮ್‌ನ ಬಾದಶಹಪುರದಲ್ಲಿ ಚುನಾವಣ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿ, ಚುನಾವಣ ಸಮಯದಲ್ಲಿ ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ. ಹಿಮಾಚಲ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ರಾಹುಲ್ ಗಾಂಧಿಯವರ ಗ್ಯಾರಂಟಿಗಳು ಫಲ ನೀಡಿದವು. ಆದರೆ ಅವರಿಗೆ ಈಗ ತಮ್ಮ ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ” ಎಂದು ಕಿಡಿ ಕಾರಿದರು.

ಬಿಜೆಪಿ ಈಡೇರಿಸಲು ಸಾಧ್ಯವಾಗದ ಯಾವುದೇ ಭರವಸೆ ನೀಡುವುದಿಲ್ಲ. ರಾಹುಲ್ ಬಾಬಾ ಮತ್ತು ಕಂಪನಿ ಅಭಿವೃದ್ಧಿಯನ್ನು ಕೈಗೊಳ್ಳಲು ಸಾಧ್ಯವಿಲ್ಲ.ಹರ್ಯಾಣದ ಅಭಿವೃದ್ಧಿಯನ್ನು ಖಚಿತಪಡಿಸುವುದು ಡಬಲ್ ಇಂಜಿನ್ ಸರಕಾರ. ನಾವು ದೇಶದ ಗಡಿಯನ್ನು ಭದ್ರಪಡಿಸುತ್ತೇವೆ, ನಾವು ಮೀಸಲಾತಿಯನ್ನು ರಕ್ಷಿಸುತ್ತೇವೆ ಮತ್ತು 370 ನೇ ವಿಧಿಯನ್ನು ಹಿಂತಿರುಗಿಸಲು ಎಂದಿಗೂ ಅನುಮತಿಸುವುದಿಲ್ಲ” ಎಂದರು.

”ವಕ್ಫ್ ಮಂಡಳಿಯಲ್ಲಿನ ಪ್ರಸ್ತುತ ಶಾಸನದಲ್ಲಿ ಸಮಸ್ಯೆ ಇದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ನಾವು ಅದನ್ನು ತಿದ್ದುಪಡಿ ಮಾಡುತ್ತೇವೆ” ಎಂದು ಘೋಷಿಸಿದರು.

ಇಂದಿರಾ ಗಾಂಧಿಯಿಂದ ಹಿಡಿದು ಮನಮೋಹನ್ ಸಿಂಗ್ ವರೆಗೆ ಕಾಂಗ್ರೆಸ್ ಒನ್ ರ‍್ಯಾಂಕ್ ಒನ್ ಪೆನ್ಷನ್ ಬೇಡಿಕೆಯನ್ನು ಈಡೇರಿಸಲಿಲ್ಲ. 2015ರಲ್ಲಿ ನರೇಂದ್ರ ಮೋದಿ ಸರಕಾರ ಅದನ್ನು ಈಡೇರಿಸಿ ಸೈನಿಕರಿಗೆ ಸೂಕ್ತ ಗೌರವ ನೀಡಿತು ಎಂದರು.

ಅಗ್ನಿಪಥ್ ಯೋಜನೆ ಬಗ್ಗೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಶಾ, ”ತುಷ್ಟೀಕರಣದಿಂದ ಕಾಂಗ್ರೆಸ್ ಕುರುಡಾಗಿದೆ. ರಾಹುಲ್ ಗಾಂಧಿ ಸುಳ್ಳು ಹೇಳುವ ಯಂತ್ರ. ಅಗ್ನಿವೀರ್‌ಗಳಿಗೆ ಉದ್ಯೋಗ ಸಿಗುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಸಶಸ್ತ್ರ ಪಡೆಗಳ ಯುವ ಮುಖಗಳನ್ನು ಖಚಿತಪಡಿಸಿಕೊಳ್ಳಲು ಅಗ್ನಿವೀರ್ ಯೋಜನೆಯನ್ನು ಪರಿಚಯಿಸಲಾಗಿದೆ. ನಿಮ್ಮ ಮಕ್ಕಳನ್ನು ಸೈನ್ಯಕ್ಕೆ ಕಳುಹಿಸಲು ಹಿಂಜರಿಯಬೇಡಿ. ಹರಿಯಾಣ ಮತ್ತು ಕೇಂದ್ರ ಸರಕಾರವು ಪ್ರತಿಯೊಬ್ಬ ಅಗ್ನಿವೀರ್‌ಗೆ ಪಿಂಚಣಿ, ಉದ್ಯೋಗಗಳನ್ನು ನೀಡಲಿದೆ” ಎಂದು ಕೇಂದ್ರ ಗೃಹ ಸಚಿವರು ಭರವಸೆ ನೀಡಿದರು.

ಅಕ್ಟೋಬರ್ 3 ರಂದು ನವರಾತ್ರಿ ಪ್ರಾರಂಭವಾಗುತ್ತದೆ. ಅಕ್ಟೋಬರ್ 5 ರಂದು, ನಿಮ್ಮ ಮತ ಚಲಾಯಿಸುವಾಗ, ಶಕ್ತಿ ದೇವತೆ ಅನ್ನು ಯಾರು ಅವಮಾನಿಸುತ್ತಾರೆ ಎನ್ನುವುದನ್ನು ಅರಿತು ರಾಹುಲ್ ಬಾಬಾ ಮತ್ತು ಅವರ ಕಾಂಗ್ರೆಸ್‌ ಪಕ್ಷಕ್ಕೆ ಉತ್ತರವನ್ನು ನೀಡಬೇಕು” ಎಂದರು.

ಟಾಪ್ ನ್ಯೂಸ್

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-modi

Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ

M-Kharge-illeness

J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

arest

Puttur: ವಂಚನೆ ಪ್ರಕರಣದ ಆರೋಪಿ ತೆಲಂಗಾಣದಲ್ಲಿ ಬಂಧನ

accident

Kundapura: ಬೈಕ್‌ಗಳ ಮುಖಾಮುಖೀ ಢಿಕ್ಕಿ ಒಬ್ಬ ಸಾವು, ಇಬ್ಬರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.