Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ
ಮಹಾರಾಷ್ಟ್ರ ವಿದ್ಯುತ್ ಸರಬರಾಜು ಮಂಡಳಿ ವಿರುದ್ಧ ಕುಟುಂಬಸ್ಥರಿಂದ ಆಕ್ರೋಶ
Team Udayavani, Sep 29, 2024, 8:13 PM IST
ಬೆಳಗಾವಿ: ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಮಿರಜ್ ತಾಲೂಕಿನ ಮೈಶಾಳ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಮೈಶಾಳ ಗ್ರಾಮದ ಪಾರೀಶನಾಥ ಹೊನಮೋರೆ(40), ಸಾಯಿರಾಜ ಪಾರೀಶನಾಥ ಹೊನಮೋರೆ(13), ಪ್ರದೀಪ ಶ್ರೀಕೃಷ್ಣ ಮೋಠೆ (35) ಮೃತಪಟ್ಟಿದ್ದು, ಹೇಮಂತ ಹೊನಮೋರೆ(14) ಗಂಭೀರ ಗಾಯಗೊಂಡು ಮಿರಜ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ರವಿವಾರ ಬೆಳಗ್ಗೆ ಹೊಲದಲ್ಲಿ ಮೇವು ಸಂಗ್ರಹಿಸಿ ಇಡುವಾಗ ವಿದ್ಯುತ್ ತಂತಿ ಮುರಿದು ಬಿದ್ದಿತ್ತು.
ಮೇವು ಇಡುವಾಗ ಪಾರೀಶನಾಥ ತಂತಿ ತುಳಿದು ವಿದ್ಯುತ್ ಸ್ಪರ್ಶಿಸಿ ಕೆಳಗೆ ಬಿದ್ದಿದ್ದಾರೆ. ಆಗ ಇದನ್ನು ನೋಡಿದ ಮಗ ಸಾಯಿರಾಜ ತಂದೆಯ ಎಬ್ಬಿಸಲು ಹೋದಾಗ ಈತನಿಗೂ ವಿದ್ಯುತ್ ತಗುಲಿದೆ. ಜತೆಗೆ ಪ್ರದೀಪ ಎಂಬ ವ್ಯಕ್ತಿಗೂ ವಿದ್ಯುತ್ ತಗುಲಿ ಸ್ಥಳದಲ್ಲಿಯೇ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಮತ್ತೊಬ್ಬ ಮಗ ಹೇಮಂತ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರ ವಿದ್ಯುತ್ ಸರಬರಾಜು ಮಂಡಳಿ ವಿರುದ್ಧ ಕುಟುಂಬಸ್ಥರು ಹಾಗೂ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮಿರಜ್ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heart attack: ಕಚೇರಿಯಲ್ಲೇ 40 ವರ್ಷದ ಟೆಕ್ಕಿ ಸಾವು
Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ
Speed ತಗ್ಗಿಸಲು ಹೇಳಿದ್ದಕ್ಕೆ ಕಾರು ಹತ್ತಿಸಿ ಪೊಲೀಸ್ ಪೇದೆ ಹತ್ಯೆ
ಬಂಟರ ಸಂಘದಿಂದ ಡಾ| ಪ್ರಕಾಶ್ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ
H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.