K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…
ಹಿಂದೂಗಳು ಮುಂದಕ್ಕೆ ಬಾರದ ಜನ, ಹಿಂದೂ ಧರ್ಮ ನಮ್ಮದಲ್ಲ...ಮನುಸ್ಮೃತಿಯಲ್ಲಿ ಶೂದ್ರ ಅಂದರೆ... !!
Team Udayavani, Sep 29, 2024, 8:00 PM IST
ಮೈಸೂರು: ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಹಿಂದೂಗಳು ಮುಂದಕ್ಕೆ ಬಾರದ ಜನ ಹಾಗೂ ಬೇರೆಯವರನ್ನು ಮುಂದಕ್ಕೆ ಬಿಡುವುದಿಲ್ಲ ಎಂದು ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್(K. S. Bhagawan) ಮತ್ತೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಮೈಸೂರಿನ ಟೌನ್ಹಾಲ್ನಲ್ಲಿ ರವಿವಾರ (ಸೆ29) ನಡೆದ ಮಹಿಷಾ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಹಿಂದೂ ಧರ್ಮ ಅಂದರೆ ಅದು ಹಿಂದೂಗಳ ಧರ್ಮ ಅಲ್ಲ.ಹಿಂದೂ ಧರ್ಮ ಅಂದರೆ ಅದು ಬ್ರಾಹ್ಮಣರ ಧರ್ಮ. ಗಂಡಸರನ್ನು ಮಾತ್ರ ಬ್ರಾಹ್ಮಣರು ಅಂತಾರೆ ಹೊರತು ಹೆಂಗಸರನ್ನು ಬ್ರಾಹ್ಮಣರು ಎನ್ನುವುದಿಲ್ಲ ಅವರನ್ನೂ ಶೂದ್ರರು ಎನ್ನುತ್ತಾರೆ.ದೇವಸ್ಥಾನ ಕಟ್ಟುವುದು ಶೂದ್ರರು. ಆದರೆ ದೇವಸ್ಥಾನದ ಒಳಗೆ ಇರುವವರು ಬ್ರಾಹ್ಮಣರು. ದೇವಸ್ಥಾನ ಕಟ್ಟಿದ ಶೂದ್ರರನ್ನೇ ಬಿಟ್ಟುಕೊಳ್ಳುವುದಿಲ್ಲ. ಅದಕ್ಕಾಗಿ ನಾವು ಶೂದ್ರರಲ್ಲ ಎಂದು ಹೇಳಬೇಕು. ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಸಬೇಕು. ದೇವಸ್ಥಾಕ್ಕೆ ಹೋದರೆ ಏನು ಆಗಲ್ಲ. ತಟ್ಟೆಗೆ ದುಡ್ಡು ಹಾಕುತ್ತೀರಾ, ಅರ್ಧ ಕಾಯಿ ಇಟ್ಟುಕೊಂಡು ಅರ್ಧ ಕೊಡುತ್ತಾರೆ ಅಷ್ಟೇ. ದೇವಸ್ಥಾನಕ್ಕೆ ಹೋದರೆ ಕಳೆದುಕೊಳ್ಳುತ್ತೇವೆ. ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು ಎಂದರು.
ಮನುಸ್ಮೃತಿಯಲ್ಲಿ ಶೂದ್ರ ಅಂದರೆ ಸೂ…ಹುಟ್ಟಿದವನು ಅಂತಾ ಇದೆ. ನಾವು ಶೂದ್ರರು ಎಂದು ಒಪ್ಪಿಕೊಳ್ಳಬೇಕೇ? ಹಿಂದೂ ಧರ್ಮ ನಮ್ಮದಲ್ಲ. ನಮಗೆ ಹಿಂದೂ ಧರ್ಮ ಬೇಕಿಲ್ಲ.ಎಲ್ಲರೂ ಬುದ್ಧ ಗುರುಗಳನ್ನು ನಂಬಿ. ಏಕೆಂದರೆ ನಾನು ಹೇಳಿದ್ದು ನಂಬಿ ಎಂದು ಬುದ್ಧ ಹೇಳಿಲ್ಲ. ಆದ್ದರಿಂದ ನಾವು ಬುದ್ಧ ಧರ್ಮಕ್ಕೆ ಹೋಗಬೇಕು ಎಂದರು.
ಗುಲಾಮ, ಸೂ… ಮಗ ಎಂದು ಹೇಳುವ ಹಿಂದೂ ಧರ್ಮದಲ್ಲಿ ಇರಬಾರದು. ಸೂ ..ಮಗ ಎನ್ನುವ ಧರ್ಮಕ್ಕೆ ಎಡಗಾಲಿನ …ತಗೆದುಕೊಂಡು ಹೊಡೆಯಬೇಕು. ಹಿಂದೂ ಎಂದರೆ ಹೀನಾ ಎಂದು ಅರ್ಥ ಬರುತ್ತದೆ. ಆದ್ದರಿಂದ ಯಾರು ಹಿಂದೂ ಆಗಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್
FIR Rigister: ಕೇಂದ್ರ ಸಚಿವೆ ನಿರ್ಮಲಾ, ಸಿದ್ದರಾಮಯ್ಯ ಪ್ರಕರಣ ಅಜಗಜಾಂತರ: ಆರ್. ಅಶೋಕ್
Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ
Bidar; ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ
Speed ತಗ್ಗಿಸಲು ಹೇಳಿದ್ದಕ್ಕೆ ಕಾರು ಹತ್ತಿಸಿ ಪೊಲೀಸ್ ಪೇದೆ ಹತ್ಯೆ
ಬಂಟರ ಸಂಘದಿಂದ ಡಾ| ಪ್ರಕಾಶ್ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ
H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್
Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.