Mangaluru: ಹಂಪ್ಸ್ ಬಣ್ಣ ಮಾಯ, ಕಿತ್ತು ಹೋದ ಡಾಮರು
Team Udayavani, Sep 29, 2024, 8:10 PM IST
ಝೀಬ್ರಾ ಕ್ರಾಸ್ನಲ್ಲೂ ದಾಟುವಂತಿಲ್ಲ; ವಾಹನಗಳಿಗೂ ಅಪಾಯ
ಮಹಾನಗರ: ಸುಗಮ ವಾಹನ ಸಂಚಾರ, ಅಪಘಾತ ತಡೆಯಲೆಂದು ನಗರದ ಹಲವು ಕಡೆಗಳಲ್ಲಿ ರಸ್ತೆ ಹಂಪ್ಗ್ಳಿಗೆ ಹಾಕಿದ ಬಣ್ಣ ಮಾಸಿದೆ. ಪರಿಣಾಮ, ರಾತ್ರಿ ಹೊತ್ತು ವಾಹನ ಸವಾರರು ಹಂಪ್ಸ್ ಕಾಣದೆ ಅಪಘಾತಕ್ಕೆ ತುತ್ತಾಗುವ ಅಪಾಯ ಎದುರಾಗಿದೆ.
ಕೆಲವು ಸಮಯಗಳ ಹಿಂದೆ ನಗರದ ಕೆಲವು ಕಡೆಗಳಲ್ಲಿ ಅವೈಜ್ಞಾನಿಕ ಹಂಪ್ಸ್ ನಿರ್ಮಿಸಲಾಗಿತ್ತು. ಇದು ಅಪಘಾತಕ್ಕೆ ಕಾರಣವಾಗುತ್ತಿತ್ತು. ಸಾರ್ವಜನಿಕರಿಂದ ವಿರೋಧ ಬಂದ ಕಾರಣ ಇದೀಗ ಬಹುತೇಕ ಕಡೆಗಳಲ್ಲಿ ವೈಜ್ಞಾನಿಕ ರೀತಿಯ ಐಆರ್ಸಿ ಮಾದರಿಯ ಹಂಪ್ಗ್ಳನ್ನು ಅಳವಡಿಸಲಾಗಿದೆ. ಇನ್ನು, ರಬ್ಬರ್ ಹಂಪ್ಗ್ಳನ್ನು ತೆರವು ಮಾಡಲಾಗಿದ್ದು, ಕೆಲವೆಡೆ ಹೊಸ ಹಂಪ್ಸ್ ನಿರ್ಮಾಣವಾದರೆ ಇನ್ನೂ ಕೆಲವೆಡೆ ಹಂಪ್ಸ್ ನಿರ್ಮಿಸಬೇಕಷ್ಟೆ. ಆದರೆ ಈಗಾಗಲೇ ನಿರ್ಮಿಸಿದ ಹಂಪ್ಗ್ಳಲ್ಲಿ ಬಣ್ಣ ಮಾಸಿದ್ದು, ಮತ್ತೆ ಬಳಿಯಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬಂದಿದೆ.
ನಗರದ ಪ್ರಮುಖ ಜಂಕ್ಷನ್ಗಳಲ್ಲಿ, ಕೊಟ್ಟಾರ, ಕಾಪಿಕಾಡ್ ಬಳಿ, ಬಲ್ಲಾಳ್ಬಾಗ್, ಉರ್ವಸ್ಟೋರ್, ಮಣ್ಣಗುಡ್ಡೆ, ಕೊಡಿಯಾಲಬೈಲು, ಪಿವಿಎಸ್ ಸಹಿತ ನಗರದ ವಿವಿಧ ಕಡೆಗಳಲ್ಲಿ ಅಳವಡಿಸಿದ ಹಂಪ್ಗ್ಳಲ್ಲಿ ಬಣ್ಣ ಇಲ್ಲ.
ಅರ್ಧಂರ್ಧ ಹಂಪ್
ಸಾಮಾನ್ಯವಾಗಿ ರಸ್ತೆಗಳು ಗುಂಡಿ ಬೀಳುತ್ತದೆ. ಆದರೆ ನಗರದ ಕೆಲವು ಕಡೆ ಹಂಪ್ಗ್ಳಲ್ಲಿಯೂ ಗುಂಡಿಯಾಗಿದ್ದು, ಸಮಸ್ಯೆಗೆ ಕಾರಣವಾಗಿದೆ. ಮುಖ್ಯವಾಗಿ ನಗರದ ಎಂಪೈರ್ ಮಾಲ್ ಬಳಿಯ ಹಂಪ್ಸ್ ಅಂಚಿನಲ್ಲಿ ಡಾಮರು ಕಿತ್ತು ಹೋಗಿದ್ದು, ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಕ್ಕೆ ಒಳಗಾಗುವ ಸಂದರ್ಭ ಎದುರಾಗಿದೆ.
ರಸ್ತೆ ದಾಟಲು ಸಂಕಷ್ಟ
ಪಾದಚಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಗರದ ಪ್ರಮುಖ ಜಂಕ್ಷನ್ಗಳಲ್ಲಿ, ಅತೀ ಹೆಚ್ಚು ಜನ ಸೇರುವ ಕಡೆಗಳಲ್ಲಿ ಝೀಬ್ರಾ ಕ್ರಾಸ್ ಅನ್ನು ಅಳವಡಿಸಲಾಗಿದ್ದು, ಬಹುತೇಕ ಕಡೆ ಝೀಬ್ರಾ ಕ್ರಾಸ್ಗಳ ಬಣ್ಣ ಮಾಸಿದೆ. ಇದರಿಂದ ಸಿಗ್ನಲ್ಗಳಲ್ಲಿ ವಾಹನಗಳು ನಿಲ್ಲಿಸಲು ಸೂಚನೆ ಸಿಗದಂತಾಗಿದೆ. ಇನ್ನು, ಸಾರ್ವಜನಿಕರು ಕೂಡ ರಸ್ತೆ ದಾಟಲು ಕಷ್ಟಪಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಟರ ಸಂಘದಿಂದ ಡಾ| ಪ್ರಕಾಶ್ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ
Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್
Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ
Kulur ಫ್ಲೈ ಓವರ್ ಕೆಳಗೆ ಅನಧಿಕೃತ ಅಂಗಡಿ, ದುರ್ನಾತ
Mangaluru: ಟ್ರಾಫಿಕ್ ಸಿಗ್ನಲ್ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಬಂಟರ ಸಂಘದಿಂದ ಡಾ| ಪ್ರಕಾಶ್ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ
H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್
Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್
Delhi ಪಾಲಿಕೆ ಚುನಾವಣೆ ರಿಸಲ್ಟ್: ಸುಪ್ರೀಂಗೆ ಆಪ್ ಮೇಲ್ಮನವಿ
Prashant Kishore; ನಿವೃತ್ತ ಅಧಿಕಾರಿಗಳಿಂದ ನಿತೀಶ್ ಸರಕಾರ ನಿರ್ವಹಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.