Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು
Team Udayavani, Sep 30, 2024, 12:49 AM IST
ಉಡುಪಿ: ಮೃತರ ಹೆಸರಿನಲ್ಲಿದ್ದ ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮೆರಿಕದಲ್ಲಿ ನೆಲೆಸಿರುವ ಲಲಿತಾ ರಾವ್ ಅವರ ಪತಿ ಅಶೋಕ್ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಕೋವಿಡ್ ಲಾಕ್ಡೌನ್ ಸಮಯದಲ್ಲಿ ಕಾರ್ಕಳದಲ್ಲಿ ಮೃತಪಟ್ಟಿದ್ದರು. ಮೃತರ ಪತ್ನಿ ಮತ್ತು ಮಕ್ಕಳು ಅಮೆರಿಕದಲ್ಲಿ ಇದ್ದ ಕಾರಣ ಅಶೊಕ್ ಅವರ ಅಂತಿಮ ಸಂಸ್ಕಾರವನ್ನು ಮೃತರ ಸಹೋದರನ ಮಗ ನವೀನ್ ನಡೆಸಿದ್ದರು.
ಅಶೋಕ್ ಜು. 13ರಂದು ಮೃತಪಟ್ಟಿದ್ದರೂ ಮೃತರ ಅಣ್ಣ ಮೋಹನ್ ಅವರ ಮಗ ದಿನೇಶ್ 2020ರ ಜು.15ರಿಂದ ಆ.18ರ ಅವಧಿಯಲ್ಲಿ ಮೃತ ಅಶೋಕ್ಗೆ ಸೇರಿದ ವಿವಿಧ ಕಂಪೆನಿಗಳ ಒಟ್ಟು 4,24,90,548.90 ರೂ. ಮೌಲ್ಯದ ಷೇರು
ಗಳನ್ನು ಮೃತರ ಮೊಬೈಲ್ ಮತ್ತು ಈ-ಮೇಲ್ ಐಡಿ ದುರ್ಬಳಕೆ ಮಾಡಿ ಮಾರಾಟ ಮಾಡಿರುವುದಾಗಿ ದೂರಲಾಗಿದೆ.
ಇವರು ಮೃತರ ಉತ್ತರದಾಯಿತ್ವ ಪ್ರಮಾಣ ಪತ್ರವನ್ನು ಪಡೆಯದೆ ನಾಮನಿರ್ದೇಶನದ ಸುಳ್ಳು ದಾಖಲಾತಿ ಯನ್ನು ಸೃಷ್ಟಿಸಿ, ದಾಖಲಾತಿಯನ್ನು ನೈಜವಾದುದ್ದೆಂದು ಷೇರು ಬ್ರೋಕರ್ ಕಂಪೆನಿ ಮತ್ತು ಬ್ಯಾಂಕಿನ ಉದ್ಯೋಗಿಗಳೊಂದಿಗೆ ಶಾಮೀಲಾಗಿ, ಮೃತರ ಖಾತೆಯಿಂದ ತನ್ನ ಖಾತೆಗೆ ಹಣವನ್ನು ಜಮೆ ಮಾಡಿದ್ದಾರೆ. ಇದರಲ್ಲಿ ಷೇರುಗಳ ಮಾರಾಟದಿಂದ ಸಂಗ್ರಹವಾದ ಹಣವನ್ನು ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.