Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ
Team Udayavani, Sep 30, 2024, 1:48 AM IST
ಮೈಸೂರು: ಮಹಿಷ ಮಂಡಲೋತ್ಸವ ಆಚರಣೆ ಹಮ್ಮಿಕೊಂಡಿದ್ದ ಟೌನ್ಹಾಲ್ ಆವರಣದಲ್ಲಿ ರವವಿವಾರ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಕಾರ್ಯಕ್ರಮ ನಡೆಸುತ್ತಿದ್ದವರು ತಾವು ಚಾಮುಂಡಿ ಬೆಟ್ಟಕ್ಕೆ ಹೋಗಿ ಮಹಿಷಾ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ಪೊಲೀಸರು ನಮ್ಮಲ್ಲಿ ಕೇವಲ ಐದು ಜನರನ್ನು ಕರೆದುಕೊಂಡು ಹೋಗಿ ಎಂದು ಕೇಳಿದರು. ನಿಷೇಧಾಜ್ಞೆ ಇರುವುದರಿಂದ ಆಗುವುದಿಲ್ಲ ಎಂದು ಪೊಲೀಸರು ಹೇಳಿದ್ದರಿಂದ ಆಕ್ರೋಶಕ್ಕೆ ಕಾರಣವಾಯಿತು.
ಬಳಿಕ ಅಲ್ಲೇ ಇದ್ದ ಅಂಬೇಡ್ಕರ್ ಪ್ರತಿಮೆ ಮುಂದೆ ನಿಂತು ಜೈಕಾರದ ಘೋಷಣೆ ಕೂಗಿದರು. ಅನಂತರ ವೇದಿಕೆ ಕಾರ್ಯಕ್ರಮ ನಡೆಯಿತು. ಇದಾದ ಬಳಿಕವೂ ಮಹಿಷ ದಸರಾ ಆಚರಣೆ ಸಮಿತಿಯವರು ಬೆಟ್ಟಕ್ಕೆ ಹೋಗಲು ಪಟ್ಟು ಹಿಡಿದರು. ಆಗ ಪೊಲೀಸರು, ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಮಾಜಿ ಮೇಯರ್ ಪುರುಷೋತ್ತಮ ಅವರನ್ನು ಜೀಪಿನಲ್ಲಿ ಹತ್ತಿಸಿಕೊಂಡರು. ನೇರವಾಗಿ ಅಶೋಕಪುರಂನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ನಡೆಯುತ್ತಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಕಾರ್ಯಕ್ರಮದ ವೇದಿಕೆ ಬಳಿಗೆ ಬಿಟ್ಟರು. ಅವರಿಬ್ಬರೂ ವೇದಿಕೆಗೆ ಹೋಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ದಸರಾ ಉದ್ಘಾಟನೆಗೆ ಅಡ್ಡಿಯ ಎಚ್ಚರಿಕೆ
ಮೈಸೂರು: ಚಾಮುಂಡಿಬೆಟ್ಟದಲ್ಲಿ ಮಹಿಷಾ ಪ್ರತಿಮೆಗೆ ಪುಷ್ಪಾರ್ಚನೆಗೆ ಜಿಲ್ಲಾಡಳಿತ ಅವಕಾಶ ಕೊಡದ ಹಿನ್ನೆಲೆಯಲ್ಲಿ ಸರಕಾರ ನಡೆಸುವ ದಸರಾ ಮಹೋತ್ಸವದ ಉದ್ಘಾಟನೆಗೆ ಅಡ್ಡಿಪಡಿಸಲಾಗುವುದು ಎಂದು ಮಾಜಿ ಮೇಯರ್ ಪುರುಷೋತ್ತಮ್ ಎಚ್ಚರಿಕೆ ನೀಡಿದರು.
ಅ. 12ರಂದು ಅಶೋಕ ಚಕ್ರವರ್ತಿಯ ಜನ್ಮ ದಿನವಿದ್ದು, ಜಂಬೂ ಸವಾರಿಯ ದಿನದಂದು ಅಶೋಕಪುರಂನಿಂದ ಪುರಭವನದವರೆಗೆ ಅಶೋಕ ಮಹಾರಾಜರ ಭಾವಚಿತ್ರವನ್ನು ಮೆರವಣಿಗೆ ಮೂಲಕ ತರುತ್ತೇವೆ. ಜಿಲ್ಲಾಡಳಿತ ಇದಕ್ಕೆ ಅವಕಾಶ ಕೊಡಬೇಕು. ಇಲ್ಲದಿದ್ದರೆ ದಸರೆಗೆ ಅಡ್ಡಿ ಪಡಿಸಲಾಗುವುದು ಎಂದರಲ್ಲದೇ, ದಸರಾವನ್ನು ನೀವು ಯಾವ ರೀತಿ ಮಾಡುತ್ತೀರಾ ನಾನು ನೋಡುತ್ತೇನೆ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…
Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್
Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್ ಪಾರ್ಟಿ: ಪೊಲೀಸ್ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BCCI ಸೆಂಟರ್ ಆಫ್ ಎಕ್ಸಲೆನ್ಸ್ ಕ್ರಿಕೆಟ್ ಅಕಾಡೆಮಿ ದಿಢೀರ್ ಉದ್ಘಾಟನೆ
Pakistan; ಬಲೂಚ್ನಲ್ಲಿ 7 ಕಾರ್ಮಿಕರ ಗುಂಡಿಟ್ಟು ಹ*ತ್ಯೆ ಮಾಡಿದ ಉಗ್ರರು
CPM ಪಾಲಿಟ್ಬ್ಯೂರೋಗೆ ಕಾರಟ್ ಮಧ್ಯಾಂತರ ಮುಖ್ಯಸ್ಥ
UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.