BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

ಮೈಸೂರಿಗೆ ಪಾದಯಾತ್ರೆ ಮಾಡಿಸಿದ್ದೂ ಕಾಂಗ್ರೆಸ್ಸಿನವರೇ. ಮುಡಾ ಬೆನ್ನಲ್ಲೇ ಕಾಂಗ್ರೆಸ್ಸಿನವರೇ ಅರ್ಕಾವತಿ ಅಸ್ತ್ರ

Team Udayavani, Sep 30, 2024, 2:12 AM IST

yathnal

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ನಾವು ಯಾರೂ ಪಟ್ಟು ಹಿಡಿದಿಲ್ಲ. ಅದರ ಬಗ್ಗೆ ಚರ್ಚೆಯೇ ಆಗಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಿಗೆ ಚಿತ್ರದುರ್ಗದಲ್ಲಿ ಒಂದು ಸಂಸ್ಕಾರ ಆಗಿದೆ. ಇನ್ನೊಂದು ಅವರದ್ದೇ ಮನೆಯಲ್ಲಿ ಆಗಿದೆ. ನಾವು 38 ಜನ ಎಲ್ಲಿ ಹೇಳಬೇಕೋ ಅಲ್ಲಿ ಹೇಳಿದ್ದೇವೆ. ಮುಂದಿನ ಕ್ರಮ ಏನು ತೆಗೆದುಕೊಳ್ಳಬೇಕು ಎಂಬುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವುದೇ ವಿಷಯದ ಬಗ್ಗೆ ಬಹಿರಂಗವಾಗಿ ಮಾತನಾಡದಂತೆ ಹೈಕಮಾಂಡ್‌ ಸೂಚನೆ ನೀಡಿದೆ. ವರಿಷ್ಠರು ಯೋಗ್ಯ ನಿರ್ಣಯ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ. 1,200 ಕೋಟಿ ರೂ. ಆಸ್ತಿ ಇರುವ ವ್ಯಕ್ತಿ ಮುಖ್ಯಮಂತ್ರಿ ಆಗಬೇಕು ಎಂದು ಬಯಸಿರುವ ಅನೇಕರು ಕಾಂಗ್ರೆಸ್‌, ಬಿಜೆಪಿಯಲ್ಲೂ ಇದ್ದಾರೆ.

ನಮ್ಮಲ್ಲೂ ದುಡ್ಡು ಇರುವಂತಹ ಕೆಲವರಿಗೆ ಕುದುರೆ ವ್ಯಾಪಾರದ ಆಸೆ ಇರಬಹುದು. ಆದರೆ ಬಿಜೆಪಿಯಲ್ಲಿ ಕುದುರೆ ವ್ಯಾಪಾರ ಒಪ್ಪುವುದೇ ಇಲ್ಲ. ಕಾಂಗ್ರೆಸ್‌ ಸರಕಾರ ವಿಸರ್ಜನೆಯಾದ ಅನಂತರ ಚುನಾವಣೆ ನಡೆದು ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ. ನಾನು ಮುಖ್ಯಮಂತ್ರಿ ಆಗಬೇಕು. ನಾನೇ ಮುಖ್ಯಮಂತ್ರಿ ಆಗಲೇಬೇಕು ಎಂದು ಕೆಲವರು ತುದಿಗಾಲ ಮೇಲೆಯೇ ನಿಂತಿದ್ದಾರೆ ಎಂದರು.

ತಮ್ಮ ತಲೆ ಮೇಲೆ ತಾವೇ ಕಲ್ಲು ಹಾಕಿಕೊಂಡ ಸಿಎಂ: ಯತ್ನಾಳ್‌
ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸುವ ಆಟ ಜೋರಾಗಿ ನಡೆಯುತ್ತಿದೆ. ತಮ್ಮ ತಲೆ ಮೇಲೆ ತಾವೇ ಕಲ್ಲು ಎಳೆದುಕೊಂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯಗೆ ನಾನು ಯಾವಾಗಲೂ ಒಳ್ಳೆಯ ಸಲಹೆಗಳನ್ನೇ ಕೊಡುತ್ತ ಬಂದಿದ್ದೇನೆ. ರಾಜೀನಾಮೆ ಕೊಡಿ ಅಂತಾನೂ ಸಲಹೆ ಕೊಟ್ಟಿದ್ದೆ. ಮುಡಾ ವಿಚಾರದಲ್ಲಿ ಹೈಕೋರ್ಟ್‌ಗೆ ಹೋದವರು ಯಾರು. ಸಿದ್ದರಾಮಯ್ಯ ತಮ್ಮ ತಲೆ ಮೇಲೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ. ನಮ್ಮ ಒಳ್ಳೆಯ ಸಲಹೆಗಳನ್ನು ಅವರು ಕೇಳುವುದಿಲ್ಲ. ಬೇರೆಯವರ ಮಾತನ್ನಷ್ಟೇ ಕೇಳುತ್ತಾರೆ. ಸಿದ್ದರಾಮಯ್ಯ ವಿರುದ್ಧ ಬಿಜೆಪಿಯವರೇನೂ ಷಡ್ಯಂತ್ರ ಮಾಡುತ್ತಿಲ್ಲ. ಮುಡಾ ಹಗರಣದ ದಾಖಲೆಗಳನ್ನು ನೀಡಿ, ಅದನ್ನು ಹೊರ ತೆಗೆದಿದ್ದೇ ಕಾಂಗ್ರೆಸ್ಸಿನವರು.

ಮೈಸೂರಿಗೆ ಪಾದಯಾತ್ರೆ ಮಾಡಿಸಿದ್ದೂ ಕಾಂಗ್ರೆಸ್ಸಿನವರೇ. ಮುಡಾ ಬೆನ್ನಲ್ಲೇ ಕಾಂಗ್ರೆಸ್ಸಿನವರೇ ಅರ್ಕಾವತಿ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಸಂಬಂಧಿಸಿದ ದಾಖಲೆಗಳನ್ನೂ ಕಾಂಗ್ರೆಸ್ಸಿನವರೇ ಒದಗಿಸುತ್ತಿದ್ದಾರೆ. ಅವರನ್ನು ಕುರ್ಚಿಯಿಂದ ಕೆಳಗಿಳಿಸುವ ಕೆಲಸ ಕಾಂಗ್ರೆಸ್‌ನವರಿಂದಲೇ ಆಗುತ್ತಿದೆ. ಸಿದ್ದರಾಮಯ್ಯ ಹಿಂದೆ ಇದ್ದವರೇ ಈಗ ತಾವೇ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 5 ಎಕರೆ ಜಮೀನು ವಿವಾದ ತೆಗೆದಿದ್ದು ಸಹ ಕಾಂಗ್ರೆಸ್‌ನವರೇ. ಅವರೇ ತಂದು ಕೊಟ್ಟ ದಾಖಲೆಗಳನ್ನು ಹಿಡಿದುಕೊಂಡೇ ನಾವು ಎಲ್ಲವನ್ನೂ ಹೇಳುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Priyank-Kharghe

Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು

pratp

MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್‌ ಸಿಂಹ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.