Bengaluru: 2 ದ್ವಿಚಕ್ರ ವಾಹನಕ್ಕೆ ಒಂದೇ ನಂಬರ್‌ ಪ್ಲೇಟ್‌


Team Udayavani, Sep 30, 2024, 1:08 PM IST

Bengaluru: 2 ದ್ವಿಚಕ್ರ ವಾಹನಕ್ಕೆ ಒಂದೇ ನಂಬರ್‌ ಪ್ಲೇಟ್‌

ಬೆಂಗಳೂರು: ಎರಡು ದ್ವಿಚಕ್ರ ವಾಹನಗಳಿಗೆ ಒಂದೇ ನಂಬರ್‌ ಪ್ಲೇಟ್‌ ಅಳವಡಿಸಿಕೊಂಡು ಓಡಾಡುತ್ತಿದ್ದ ಸವಾರನ ವಿರುದ್ಧ ವಿವೇಕನಗರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ವಿವೇಕನಗರದ ಆಂಧ್ರ ಕಾಲೋನಿ ನಿವಾಸಿ ಅಜರುದ್ದೀನ್‌(30) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಜತೆಗೆ ಒಂದೇ ನಂಬರ್‌ ಪ್ಲೇಟ್‌ ಹೊಂದಿದ್ದ

ಎರಡೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಪತ್ತೆ ಯಾಗಿದ್ದು ಹೇಗೆ?: ಅಶೋಕನಗರ ಸಂಚಾರ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಎಂ.ಕೆ.ಶಿವರಾಜು ಸೆ.27ರಂದು ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದರು. ಆಂಧ್ರ ಕಾಲೋನಿಯ ಶಾಂತಿನಿಕೇತನ ಸ್ಕೂಲ್‌ ಬಳಿ ಒಂದೇ ನಂಬರ್‌ ಪ್ಲೇಟ್‌ನ (ಕೆಎ-01-ಎಚ್‌ಟಿ- 9039)ದ, ಒಂದೇ ಬಣ್ಣದ ಎರಡು ಆಕ್ವಿವಾ ದ್ವಿಚಕ್ರ ವಾಹನಗಳು ಪತ್ತೆಯಾಗಿವೆ. ಈ ವೇಳೆ ಅನುಮಾಗೊಂಡ ಶಿವರಾಜು, ದ್ವಿಚಕ್ರ ವಾಹನದ ಮಾಲಿಕ ಅಜರುದ್ದೀನ್‌ನನ್ನು ವಿಚಾರಣೆ ಮಾಡಿ ದ್ವಿಚಕ್ರ ವಾಹನಗಳ ದಾಖಲೆ ತೋರಿಸುವಂತೆ ಕೇಳಿದ್ದಾರೆ. ಈ ವೇಳೆ ಆತ ಯಾವುದೇ ದಾಖಲೆ ತೋರಿಸದೆ ಗೊಂದಲದ ಉತ್ತರ ನೀಡಿದ್ದಾನೆ.

8 ಪ್ರಕರಣ ಸಂಬಂಧ 4 ಸಾವಿರ ರೂ. ದಂಡ ಬಾಕಿ: ಬಳಿಕ ಈ ದ್ವಿಚಕ್ರ ವಾಹನಗಳ ವಿರುದ್ಧ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಪರಿಶೀಲಿ ಸಿದಾಗ 8 ಪ್ರಕರಣಗಳಲ್ಲಿ 4 ಸಾವಿರ ರೂ. ದಂಡ ಬಾಕಿಯಿ ರುವುದು ಕಂಡು ಬಂದಿದೆ. ಎರಡು ದ್ವಿಚಕ್ರ ವಾಹನಗಳಿಗೆ ಅಜರುದ್ದೀನ್‌ ಒಂದೇ ನೋಂದಣಿ ಸಂಖ್ಯೆ ಫ‌ಲಕ ಅಳವಡಿಸಿಕೊಂಡು ಸರ್ಕಾರಕ್ಕೆ ವಂಚಿಸುತ್ತಿರುವುದು ಕಂಡು ಬಂದಿದೆ.

ಅಂತೆಯೇ ಈ ದ್ವಿಚಕ್ರ ವಾಹನಗಳನ್ನು ಅಪರಾಧ ಕೃತ್ಯಗಳಿಗೆ ಬಳಸುವ ಸಾಧ್ಯತೆ ಹಿನ್ನೆಲೆಯಲ್ಲಿ ಎರಡು ದ್ವಿಚಕ್ರ ವಾಹನಗಳ ಸಮೇತ ಆತನನ್ನು ವಿವೇಕನಗರ ಪೊಲೀಸರಿಗೆ ಒಪ್ಪಿಸಿದ್ದು, ಈ ಸಂಬಂಧ ದೂರು ನೀಡಿದ್ದಾರೆ.

ಮತ್ತೊಂದು ದ್ವಿಚಕ್ರ ವಾಹನ ಖರೀದಿ: ಇನ್ನು ಆರೋಪಿ ವಿಚಾರಣೆಯಲ್ಲಿ ಅಜರುದ್ದೀನ್‌ ನಗರದಲ್ಲಿ ಫ‌ುಡ್‌ ಡೆಲಿವರಿ ಬಾಯ್‌ ಕೆಲಸ ಮಾಡುತ್ತಾನೆ. ಈತ 2012ರಲ್ಲಿ ಕೆಎ-01-ಎಚ್‌ಟಿ-9039 ನೋಂದಣಿ ಸಂಖ್ಯೆಯ ನೀಲಿ ಬಣ್ಣದ ಆಕ್ವೀವಾ ದ್ವಿಚಕ್ರ ವಾಹನ ಖರೀದಿಸಿದ್ದು, 2 ವರ್ಷದ ಹಿಂದೆ ದೆಹಲಿಯಲ್ಲಿ ಮತ್ತೂಂದು ಬಿಳಿ ಬಣ್ಣದ ಆಕ್ವೀವಾ ದ್ವಿಚಕ್ರ ವಾಹನ ಖರೀದಿಸಿದ್ದಾನೆ. ಬಳಿಕ ಈ ದ್ವಿಚಕ್ರ ವಾಹನದ ಬಣ್ಣವನ್ನು ನೀಲಿ ಬಣ್ಣಕ್ಕೆ ಬದಲಾಯಿಸಿದ್ದಾನೆ. ಅಲ್ಲದೆ, ತನ್ನ ಮತ್ತೂಂದು ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯ ಫ‌ಲಕವನ್ನೇ ಅಳವಡಿಸಿಕೊಂಡು ಕಳೆದ ಎರಡು ವರ್ಷಗಳಿಂದ ನಗರದಲ್ಲಿ ಓಡಾಡುತ್ತಿರುವುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದರು.

ಈ ಸಂಬಂಧ ವಿವೇಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

8

Arrested: ಜಲಮಂಡಳಿಯ ಸೆಂಟ್ರಿಂಗ್‌ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Theft: ದ್ವಿಚಕ್ರ ವಾಹನ ಅಡ್ಡಗಟ್ಟಿ ಇಬ್ಬರು ವಿದ್ಯಾರ್ಥಿಗಳ ಚಿನ್ನದ ಸರ ಕಳವು

Theft: ದ್ವಿಚಕ್ರ ವಾಹನ ಅಡ್ಡಗಟ್ಟಿ ಇಬ್ಬರು ವಿದ್ಯಾರ್ಥಿಗಳ ಚಿನ್ನದ ಸರ ಕಳವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

janaka kannada movie

Sandalwood: ತಂದೆ-ಮಗನ ಕಥಾಹಂದರ ʼಜನಕʼ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.