Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ


Team Udayavani, Sep 30, 2024, 1:33 PM IST

9

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿರುವ ಕೇರಳಿಗರಿಗೆ ಸುಲಭವಾಗಿ ಕನ್ನಡ ಕಲಿಸಲು ಅಭಿವೃದ್ಧಿ ಪ್ರಾಧಿಕಾರ ಸಜ್ಜಾಗುತ್ತಿದೆ. ಗಾಂಧಿ ಜಯಂತಿ ದಿನ ಕಲಿಕಾ ಕೇಂದ್ರಗಳನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ.

ಇದಕ್ಕಾಗಿ 72 ನುರಿತ ಸಂಪನ್ಮೂಲ ಶಿಕ್ಷಕರನ್ನು ಸಿದ್ಧಗೊಳಿಸಿದ್ದು, ಸರಳ ರೀತಿಯಲ್ಲಿ ಕನ್ನಡ ಕಲಿಸುವ ಕಾರ್ಯ ನಡೆಯಲಿದೆ.

ನಗರದ 16 ಸೆಂಟರ್‌ಗಳಲ್ಲಿ ಕನ್ನಡ ಕಲಿಕಾ ತರಗತಿಗಳು ಆರಂಭವಾಗಲಿವೆ. ಪ್ರತಿ ಕೇಂದ್ರಗಳಲ್ಲಿ 30 ಜನರಿಗೆ ಅವಕಾಶ ನೀಡಲಾಗುತ್ತದೆ. ಕನ್ನಡ ಕಲಿಯಲು ಕೇರಳಿಗರು ಕೂಡ ಉತ್ಸಾಹ ತೋರುತ್ತಿದ್ದಾರೆ. ತರಗತಿಗಳನ್ನು ನಡೆಸಲು ಅವರೇ ಸ್ಥಳಾವಕಾಶ ನೀಡುತ್ತಿದ್ದಾರೆ. ಜತೆಗೆ ಬೋರ್ಡ್‌, ಮತ್ತಿತರರ ಅಗತ್ಯ ಪರಿಕರಗಳನ್ನು ಒದಗಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡ ಕಲಿಸುವ ನಮ್ಮ ಕಾರ್ಯಕ್ಕೆ ಮತ್ತಷ್ಟು ಹುಮ್ಮಸ್ಸು ಬಂದಿದೆ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಹೇಳುತ್ತಾರೆ.

3 ತಿಂಗಳ ಕೋರ್ಸ್‌: ವಿವಿಧ ಬ್ಯಾಂಕ್‌ ಉದ್ಯೋಗಿಗಳಿಗೆ, ಅನ್ಯ ರಾಜ್ಯದವರಿಗೆ ಕನ್ನಡ ಕಲಿಸುವ ನಿಟ್ಟಿನಲ್ಲಿ ಪ್ರಾಧಿಕಾರ ಯೋಜನೆ ರೂಪಿಸಿದೆ. ಅದಕ್ಕೆ ತಕ್ಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಾಧಿಕಾರ ಹಮ್ಮಿಕೊಳ್ಳಲಿರುವ ಕನ್ನಡ ಕಲಿಕಾ ತರಗತಿಗಳು 3 ತಿಂಗಳದ್ದಾಗಿರಲಿದೆ. ವಾರಕ್ಕೆ ಮೂರು ದಿವಸ ಅಂದರೆ 36 ಗಂಟೆ ಮಾತ್ರ ತರಗತಿಗಳನ್ನು ನಡೆಸಲಾಗುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೇಳಿದೆ.

ಸುಲಭವಾಗಿ ಕನ್ನಡ ಕಲಿಸುವ ನಿಟ್ಟಿನಲ್ಲಿ ಪ್ರಾಧಿಕಾರವೇ ಪರಿಷ್ಕೃತ ಪಠ್ಯ ಸಿದ್ಧಗೊಳಿಸಿದೆ. ಸಂವಹನ ಕನ್ನಡವನ್ನು ಮಾತ್ರ ತರಗತಿಗಳಲ್ಲಿ ಶಿಕ್ಷಕರು ಹೇಳಿಕೊಡಲಿದ್ದಾರೆ. ಕನ್ನಡ ಸಾಹಿತ್ಯ ಇತ್ಯಾದಿಗಳನ್ನು ಕಲಿಕೆಯಿಂದ ದೂರವಿಡಲಾಗುವುದು. ದೈನಂದಿನ ವ್ಯವಹಾರಕ್ಕೆ ಏನು ಬೇಕು ಅಂತಹ ಪದಗಳನ್ನು, ಭಾಷೆ ಗಳನ್ನು ಹೇಳಿಕೊಡಲಾಗುತ್ತದೆ. ಕನ್ನಡ ಕಲಿಯುವ ವರಿಗೆ ಎಷ್ಟು ಸುಲಭವೋ, ಅಷ್ಟು ಸುಲಭ ರೀತಿಯಲ್ಲಿ ಕನ್ನಡ ಕಲಿಸುವ ಕೆಲಸ ನಡೆಯಲಿದೆ ಎಂದು ತಿಳಿಸಿದೆ.

ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಪಾಠ: ಚಹ ಅಂಗಡಿಯಿಂದ ಹಿಡಿದು ದೊಡ್ಡ ಕೈಗಾರಿಕೆಗಳಲ್ಲೂ ಕೇರಳಿಗರು ಕೆಲಸ ಮಾಡುತ್ತ ನೂರಾರು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಮುಖ್ಯವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ನರ್ಸ್‌ಗಳಾಗಿ ಸಾಕಷ್ಟು ಮಂದಿ ಕೆಲಸ ಮಾಡುತ್ತಿದ್ದಾರೆ. ಮಾಗಡಿ ರಸ್ತೆಯ ಸುಕಂದಕಟ್ಟೆ ಸಮೀಪದ ಮಲೆಯಾಳಂನ ನರ್ಸಿಂಗ್‌ ಹೋಮ್‌ ಇದ್ದು, ಇಲ್ಲಿ 120 ನರ್ಸಿಂಗ್‌ ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಕನ್ನಡ ಪಾಠ ಹೇಳಿಕೊಡುವ ಕೆಲಸ ನಡೆದಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಶೀಘ್ರದಲ್ಲೇ ಜಾಲಹಳ್ಳಿ, ವೈಟ್‌ ಫೀಲ್ಡ್‌, ಟಿ.ಸಿ.ಪಾಳ್ಯ ರಸ್ತೆ, ಎಂ.ಎಸ್‌.ಪಾಳ್ಯ, ಚಿಕ್ಕಬಾಣಾವರ, ನೆಲಮಂಗಲ ಉತ್ತರ ಭಾಗ, ತಿಪ್ಪಸಂದ್ರ, ಅಲಸೂರು, ವಿಜಯನಗರ, ಕುಂದಾನಹಳ್ಳಿ ಗೇಟ್‌, ಮಹದೇವಪುರ ಪ್ರದೇಶಗಳಲ್ಲಿ ಕನ್ನಡ ಕಲಿಕಾ ತರಗತಿಗಳು ನಡೆಯಲಿವೆ. ಪ್ರಾಧಿಕಾರದಿಂದ ಸಂಪನ್ಮೂಲ ಶಿಕ್ಷಕರಿಗೆ ಗೌರವ ಸಂಭಾವನೆ ನೀಡಲಾಗುವುದು ಎಂದು ಹೇಳಿದ್ದಾರೆ.

ಸಂಪನ್ಮೂಲ ಶಿಕ್ಷಕರಿಗಾಗಿ ಪ್ರಾಧಿಕಾರ ಪರೀಕ್ಷೆ ನಡೆಸಿದ್ದು, 200 ಮಂದಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೇರಳಿಗರಲ್ಲಿ ಕೂಡ ಕನ್ನಡ ಬಲ್ಲವರು ಕೂಡ ಇದ್ದಾರೆ. ಮದರಾಸಗಳಲ್ಲಿ ಕೂಡ ಕನ್ನಡ ಕಲಿಸುವ ಯೋಜನೆ ಇದೆ ಎಂದು ತಿಳಿಸಿದ್ದಾರೆ.

ಕೇರಳಿಗರಿಗೆ ಕನ್ನಡ ಕಲಿಸುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ಪ್ರಾಧಿಕಾರ ಮಾಡಿಕೊಂಡಿದೆ. 500 ಕೇರಳಿಗರಿಗೆ ಕನ್ನಡ ಹೇಳಿ ಕೊಡಲಾಗುತ್ತದೆ. ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಇದ್ದು ಅವರು ಕನ್ನಡ ಕಲಿತರೆ ನಾವು ಅವರನ್ನು ಹೊರ ನಾಡಿಗರು ಎಂದು ಹೇಳಲಾಗದು. ಇವರಿಗೆ ಕನ್ನಡ ಕಲಿಕಾ ತರಗತಿಗಳು ಅನುಕೂಲ.-ಡಾ.ಪುರುಷೋತ್ತಮ ಬಿಳಿಮಲೆ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ.

 -ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Arrested: ಜಲಮಂಡಳಿಯ ಸೆಂಟ್ರಿಂಗ್‌ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Theft: ದ್ವಿಚಕ್ರ ವಾಹನ ಅಡ್ಡಗಟ್ಟಿ ಇಬ್ಬರು ವಿದ್ಯಾರ್ಥಿಗಳ ಚಿನ್ನದ ಸರ ಕಳವು

Theft: ದ್ವಿಚಕ್ರ ವಾಹನ ಅಡ್ಡಗಟ್ಟಿ ಇಬ್ಬರು ವಿದ್ಯಾರ್ಥಿಗಳ ಚಿನ್ನದ ಸರ ಕಳವು

Bengaluru: 2 ದ್ವಿಚಕ್ರ ವಾಹನಕ್ಕೆ ಒಂದೇ ನಂಬರ್‌ ಪ್ಲೇಟ್‌

Bengaluru: 2 ದ್ವಿಚಕ್ರ ವಾಹನಕ್ಕೆ ಒಂದೇ ನಂಬರ್‌ ಪ್ಲೇಟ್‌

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

janaka kannada movie

Sandalwood: ತಂದೆ-ಮಗನ ಕಥಾಹಂದರ ʼಜನಕʼ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.