Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ
ಆಯುರ್ವೇದ, ಪಂಚಗವ್ಯ ಚಿಕಿತ್ಸೆ, ಸಾವಯವ ಕೃಷಿಯಲ್ಲಿ ದೇಸಿ ಗೋವಿನ ಹಾಲು, ಉಪ ಉತ್ಪನ್ನಗಳ ಪ್ರಾಮುಖ್ಯತೆ ಆಧರಿಸಿ ಈ ನಿರ್ಧಾರ
Team Udayavani, Sep 30, 2024, 6:29 PM IST
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಸೋಮವಾರ ದೇಸಿ (ಸ್ಥಳೀಯ) ಹಸುಗಳನ್ನು ‘ರಾಜ್ಯಮಾತಾ ಗೋಮಾತೆ’ ಎಂದು ಘೋಷಿಸಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಿ, ಭಾರತೀಯ ಸಂಸ್ಕೃತಿ, ಕೃಷಿಯಲ್ಲಿ ವೇದಗಳ ಕಾಲದಿಂದಲೂ ಹಸುಗಳು ಹೊಂದಿರುವ ಪ್ರಾಮುಖ್ಯತೆ ಆಧರಿಸಿ ಅವುಗಳನ್ನು ‘ರಾಜ್ಯಮಾತಾ ಗೋಮಾತೆ’ ಎಂದು ಘೋಷಿಸಲಾಗಿದೆ ಸರ್ಕಾರವು ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಆರೋಗ್ಯ ಪೋಷಣೆಯಲ್ಲಿ ದೇಸಿ ಹಸು ಪ್ರಮುಖ ಪಾತ್ರ:
ಮಾನವನ ಆರೋಗ್ಯ ಪೋಷಣೆಯಲ್ಲಿ ದೇಸಿ ಹಸುವಿನ ಹಾಲಿನ ಪ್ರಾಮುಖ್ಯತೆ ಪಡೆದಿದೆ. ದೇಸಿ ಹಸುವಿನ ಸಗಣಿ, ಗಂಜಲ (ಮೂತ್ರ) ಆಯುರ್ವೇದ ಮತ್ತು ಪಂಚಗವ್ಯ ಚಿಕಿತ್ಸೆ, ಸಾವಯವ ಕೃಷಿಯಲ್ಲಿ ಹಸುವಿನ ಗೊಬ್ಬರವಾಗಿ ಬಳಸುತ್ತಿದ್ದು ಹಾಗೆಯೇ ಇತರ ಅಂಶಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಕೃಷಿ, ಹೈನುಗಾರಿಕೆ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಹೊರಡಿಸಿದ ಆದೇಶದಲ್ಲಿ ಸರ್ಕಾರದ ನಿರ್ಣಯ ತಿಳಿಸಿದೆ.
ಹೆಚ್ಚುವರಿ ಗೋಶಾಲೆ: ಫಡ್ನವೀಸ್
“ದೇಸಿ ಹಸುಗಳು ರೈತರಿಗೆ ವರದಾನವಾಗಿದೆ. ಆದ್ದರಿಂದ ಮಹಾರಾಷ್ಟ್ರ ಸರ್ಕಾರವು ಅವುಗಳಿಗೆ ‘ರಾಜ್ಯ ಮಾತಾ’ ಸ್ಥಾನಮಾನ ನೀಡಲು ನಿರ್ಧರಿಸಿದೆ. ದೇಸಿ ಹಸುಗಳನ್ನು ಸಾಕಾಣಿಕೆಗೆ ನೆರವಾಗುವ ದೃಷ್ಟಿಯಿಂದ ಹೆಚ್ಚುವರಿ ಗೋಶಾಲೆಗಳ ನೀಡಲಾಗುವುದು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿ ಹೇಳಿಕೆ ಪ್ರಕಾರ, ರಾಜ್ಯ ಸಚಿವ ಸಂಪುಟವು ದೇಸಿ ಹಸುಗಳನ್ನು ಸಾಕಲು ದಿನಕ್ಕೆ 50 ರೂಪಾಯಿ ಸಬ್ಸಿಡಿ ಯೋಜನೆಗೆ ಅನುಮೋದನೆ ನೀಡಿದೆ. ಕಡಿಮೆ ಆದಾಯದಿಂದ ಗೋಶಾಲೆಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿವೆ. ಅವುಗಳನ್ನು ಬಲಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದೆ ಮತ್ತು ಈ ಯೋಜನೆಯನ್ನು ಮಹಾರಾಷ್ಟ್ರ ಗೋಸೇವಾ ಆಯೋಗವು ಆನ್ಲೈನ್ ಮೂಲಕ ಕಾರ್ಯಗತಗೊಳಿಸಲಿದೆ”.
ಹಿಂದೂ ಧರ್ಮದ ಪ್ರಕಾರ ಹಸುಗಳು ಧಾರ್ಮಿಕ, ಸಾಂಸ್ಕೃತಿಕ ಪ್ರಾಮುಖ್ಯತೆ ಹೊಂದಿದೆ. ಅದರಲ್ಲೂ ದೇಸಿ ಗೋವಿನ ಹಾಲು ಶ್ರೇಷ್ಠ ಸ್ಥಾನದಲ್ಲಿದೆ. ಹಸುವಿಗೆ ತಾಯಿಯ ಸ್ಥಾನಮಾನ ನೀಡಲಾಗಿದ್ದು ಏಕೆಂದರೆ ತಾಯಿಯ ಬಳಿಕ ಹಾಲು ನೀಡಿ ಪೋಷಿಸುವುದು ಗೋವು ಅದು ಮಾತ್ರವಲ್ಲದೇ ಆರೋಗ್ಯಕ್ಕೆ ಪೂರಕವಾದ ಹಸುವಿನ ಇತರ ಉಪ ಉತ್ಪನ್ನಗಳ ಪಡೆಯಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..
Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್
1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್
VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ
Bulldozer Action:ಬುಲ್ಡೋಜರ್ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Malpe: ಹುಲ್ಲು ತರಲು ಹೋಗಿದ್ದ ಮಹಿಳೆ ನಾಪತ್ತೆ
Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ
Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್ ಭವಿಷ್ಯ
PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.