Uppinangady: ಸಿಬಿಐ ಅಧಿಕಾರಿ ಹೆಸರಿನಲ್ಲಿ ಬೆದರಿಕೆ ಕರೆ
Team Udayavani, Oct 1, 2024, 7:10 AM IST
ಉಪ್ಪಿನಂಗಡಿ: ನಾನು ಸಿಬಿಐ ಆಫೀಸರ್ ಮಾತನಾಡುತ್ತಿದ್ದೇನೆ. ಇಂತಹಾ ಹೆಸರಿನವನು ನಿಮ್ಮ ಮಗನಾ? ಅವನ ಚಟುವಟಿಕೆಯ ಬಗ್ಗೆ ನಿಮಗೆ ಅರಿವಿದೆಯಾ? ಅವನನ್ನು ತತ್ಕ್ಷಣ ಬಂಧಿಸಬೇಕಾಗುತ್ತದೆ. ಎಂದೆಲ್ಲಾ ಬೆದರಿಸಿ ಹಣ ಕಬಳಿಸುವ ಜಾಲದ ಕರೆಯೊಂದು ಉಪ್ಪಿನಂಗಡಿ ನಿವಾಸಿಗೆ ಬಂದಿದ್ದು, ಅವರ ಸಮಯಪ್ರಜ್ಞೆಯ ನಡೆಯಿಂದಾಗಿ ವಂಚನೆಗೊಳಗಾಗುವುದು ತಪ್ಪಿಹೋಗಿದೆ.
ಉಪ್ಪಿನಂಗಡಿಯ ಬ್ಯಾಂಕ್ ರಸ್ತೆಯ ನಿವಾಸಿ ಅಬ್ಟಾಸ್ ಅವರ ಮೊಬೈಲ್ಗೆ 92-3471745608 ಸಂಖ್ಯೆಯಿಂದ ಕರೆಯೊಂದು ಬಂದಿದ್ದು, ಹಿಂದಿ ಭಾಷೆಯಲ್ಲಿ ತಾನು ಸಿಬಿಐ ಆಫೀಸರ್ ಆಗಿದ್ದು, ದಿಲ್ಲಿ ಕಚೇರಿಯಿಂದ ಮಾತಾನಾಡುತ್ತಿದ್ದೇನೆ. ಅಬ್ಟಾಸ್ ಅವರ ಪ್ರಥಮ ವರ್ಷದ ಎಂಜಿನಿಯರಿಂಗ್ ಕಲಿಯುತ್ತಿರುವ ಮಗನ ಹೆಸರನ್ನು ಉಲ್ಲೇಖೀಸಿ ಮಾತನಾಡಿದ್ದಾನೆ. ಕರೆ ಬಂದ ನಂಬರ್ನ ಪ್ರೊಫೈಲ್ ಪೋಟೋ ಕೂಡಾ ಪೊಲೀಸ್ ಆಫೀಸರ್ನಂತಿರುವ ವ್ಯಕ್ತಿಯದ್ದಾಗಿತ್ತು. ನಂಬರಿನ ಕೆಳಗಡೆ ಸಿಬಿಐ ಎಂದೂ ದಾಖಲಿಸಲ್ಪಟ್ಟಿರುವುದು ಕಂಡುಬಂದಿದೆ.
ಅಪಹರಣದ ಕರೆ ಬಂದಿತ್ತು
ಈ ಹಿಂದೆ ಅಬ್ಟಾಸ್ ಅವರ ಸಂಬಂಧಿಕರೊಬ್ಬರ ಮಗಳು ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದು, ಆಕೆಯನ್ನು ಅಪಹರಿಸಲಾಗಿದೆ ಎಂಬ ಕರೆಯನ್ನು ಆಕೆಯ ತಾಯಿಗೆ ಮಾಡಿದ್ದರು. ತನ್ನನ್ನು ಅಪಹರಣಕಾರರಿಂದ ಬಿಡಿಸಿಕೊಳ್ಳಿ ಎಂದು ವಿದ್ಯಾರ್ಥಿನಿಯ ಅಳುತ್ತಾ ಅಂಗಲಾಚುತ್ತಿದ್ದ ಧ್ವನಿಯನ್ನೂ ಕರೆಯಲ್ಲಿ ಕೇಳಿಸಲಾಗಿತ್ತು. ಕರೆ ಸ್ವೀಕರಿಸಿದ ತಾಯಿ, ಮಗಳ ಅಳುವ ಧ್ವನಿಯನ್ನು ಆಲಿಸಿ ಅಸ್ವಸ್ಥರಾದರೆ, ಇತ್ತ ಆಕೆಯ ಸಹೋದರಿಯರು ಮತ್ತು ಸಂಬಂಧಿಕರು ಸಮಯಪ್ರಜ್ಞೆಯಿಂದ ಅಪಹರಣಕ್ಕೆ ತುತ್ತಾಗಿದ್ದಾಳೆಂದು ತಿಳಿಸಲಾದ ವಿದ್ಯಾರ್ಥಿನಿ ಮಂಗಳೂರಿನ ಕಾಲೇಜಿನ ತರಗತಿಯಲ್ಲಿ ಸುರಕ್ಷಿತವಾಗಿದ್ದಾಳೆ ಎನ್ನುವುದನ್ನು ಖಾತ್ರಿಪಡಿಸಿಕೊಂಡರು. ಸುಳ್ಳು ಸುದ್ದಿಯನ್ನು ತಿಳಿಸಿ ಬೆದರಿಕೆಯೊಡ್ಡಿ ಹಣ ಕಬಳಿಸುವ ಇದೊಂದು ಜಾಲವೆಂದು ಅವರಿಗೆ ತಿಳಿದುಬಂದಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಸೈಬರ್ ವಂಚಕರಿಗೆ ಪೊಲೀಸರ ಜಾಲ!
GOAT OTT Release: ದಳಪತಿ ವಿಜಯ್ ʼಗೂಟ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ
Top court: ಬುಲ್ಡೋಜರ್ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.