Court Order: ಮುಡಾ ತನಿಖೆ ಚುರುಕು: ದೂರುದಾರರಿಗೆ ನೋಟಿಸ್
ತನಿಖಾ ತಂಡದೊಂದಿಗೆ ಸಭೆ ನಡೆಸಿ ತನಿಖಾ ಕ್ರಮದ ಬಗ್ಗೆ ಮಾಹಿತಿ
Team Udayavani, Oct 1, 2024, 6:55 AM IST
ಮೈಸೂರು: ಮುಡಾ ಹಗರಣ ಸಂಬಂಧ ಕೋರ್ಟ್ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಿಸಿರುವ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ತನಿಖೆ ಚುರುಕುಗೊಳಿಸಿದ್ದು, ಪ್ರಕರಣದ ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಸೋಮವಾರ ರಾತ್ರಿ ಸ್ನೇಹಮಯಿ ಕೃಷ್ಣ ಅವರಿಗೆ ಕರೆ ಮಾಡಿದ ಡಿವೈಎಸ್ಪಿ ಮಾಲತೇಶ್ ಅವರು, ಮಂಗಳವಾರ ಬೆಳಗ್ಗೆ 7.30ಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.
ಎಡಿಜಿಪಿ ಭೇಟಿ
ಪ್ರಕರಣದ ತನಿಖೆಗೆ ನಾಲ್ಕು ತಂಡ ರಚಿಸಿದ್ದ ಲೋಕಾಯಕ್ತ ಎಸ್ಪಿ ಟಿ.ಜೆ. ಉದೇಶ್ ಅವರು, ಲೋಕಾಯುಕ್ತ ಎಡಿಜಿಪಿ ಮನೀಷ್ ಖರ್ಬೀಕರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಸಲಹೆ ಸೂಚನೆ ಪಡೆದು ಮೈಸೂರಿಗೆ ಹಿಂದಿರುಗಿದ್ದಾರೆ.
ಸೋಮವಾರ ಬೆಳಗ್ಗೆ ಕಚೇರಿಯಲ್ಲಿ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಎಸ್ಪಿ, ಮೈಸೂರು ಡಿವೈಎಸ್ಪಿ ಎಸ್.ಮಾಲತೀಶ್, ಚಾಮರಾಜನಗರ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ಹಾಗೂ ಇಬ್ಬರು ಇನ್ಸ್ಪೆಕ್ಟರ್ ಅವರನ್ನು ಒಳಗೊಂಡ ತನಿಖಾ ತಂಡದೊಂದಿಗೆ ಸಭೆ ನಡೆಸಿ ತನಿಖಾ ಕ್ರಮದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
85 ದಿನಗಳಲ್ಲಿ 50 ವರ್ಷಗಳ ದಾಖಲೆ ಪರಿಶೀಲನೆ ಸವಾಲು!
ಜನಪ್ರತಿನಿಧಿಗಳ ನ್ಯಾಯಾಲಯ ತನಿಖಾ ವರದಿ ನೀಡಲು ವಿಧಿಸಿದ್ದ 3 ತಿಂಗಳ ಗಡುವಿನಲ್ಲಿ ಈಗಾಗಲೇ 5 ದಿನ ಮುಗಿದು ಹೋಗಿದ್ದು, ಇನ್ನು 85 ದಿನದಲ್ಲಿ 50 ವರ್ಷದ ದಾಖಲೆಗಳನ್ನು ಪರಿಶೀಲಿಸಿ ತನಿಖೆ ಮಾಡಬೇಕಾಗಿರುವ ಸವಾಲು ಲೋಕಾಯುಕ್ತರಿಗೆ ಎದುರಾಗಿದೆ.
ಇಡಿಯಿಂದ ಸ್ವೀಕೃತಿ
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೆ ಶನಿವಾರ ದೂರು ನೀಡಿದ್ದು, ದೂರು ಸ್ವೀಕೃತವಾಗಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Political: ಡಿಸಿಎಂ ಡಿ.ಕೆ.ಶಿವಕುಮಾರ್ -ಪರಮೇಶ್ವರ್ ರಹಸ್ಯ ಭೇಟಿ; ಮಾತುಕತೆ
Illegal immigration: ಪಾಕಿಸ್ಥಾನಿಗರ ವಿಚಾರಣೆ ನಡೆಯುತ್ತಿದೆ: ಗೃಹ ಸಚಿವ ಪರಮೇಶ್ವರ್
Govt.,: ಆರ್ಥಿಕ ಹೊರೆ ತಗ್ಗಿಸಲು ನಿಗಮ-ಮಂಡಳಿ ವಿಲೀನ?
Grant: 15ನೇ ಹಣಕಾಸು ಆಯೋಗ ಅನುದಾನದಡಿ ರಾಜ್ಯಕ್ಕೆ 2,637 ಕೋ. ರೂ.
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Bantwal: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!
Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು
ಸುರತ್ಕಲ್ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ
Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.