Tirupati Laddu Controversy;ಆಂಧ್ರ ಸಿಎಂ ನಾಯ್ಡುಗೆ ತರಾಟೆ: ಸಾಕ್ಷ್ಯ ಕೇಳಿದ ಸುಪ್ರೀಂ
ದೇವರನ್ನಾದರೂ ನಿಮ್ಮ ರಾಜಕೀಯದಿಂದ ದೂರವಿಡಿ: ನ್ಯಾಯಪೀಠ
Team Udayavani, Oct 1, 2024, 6:58 AM IST
ಹೊಸದಿಲ್ಲಿ: “ಮೇಲ್ನೋಟಕ್ಕೆ ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆಯ ತುಪ್ಪವನ್ನೇ ಬಳಸಲಾಗಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ. ಧರ್ಮ ಮತ್ತು ರಾಜಕೀಯವನ್ನು ಯಾವತ್ತೂ ಬೆರೆಯಲು ಬಿಡಬಾರದು. ಕನಿಷ್ಠಪಕ್ಷ ದೇವರನ್ನಾದರೂ ನಿಮ್ಮ ರಾಜಕೀಯದಿಂದ ದೂರವಿಡಿ.’
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನಂಶವಿರುವ ತುಪ್ಪವನ್ನು ಬಳಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿಚಾರಣೆ ವೇಳೆ ಆಂಧ್ರ ಸರಕಾರವನ್ನು ಸುಪ್ರೀಂಕೋರ್r ತರಾಟೆಗೆ ತೆಗೆದುಕೊಂಡ ಪರಿಯಿದು.
ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ 3 ಅರ್ಜಿಗಳನ್ನು ನ್ಯಾ| ಬಿ.ಆರ್.ಗವಾಯಿ ಮತ್ತು ನ್ಯಾ| ಕೆ.ವಿ.ವಿಶ್ವನಾಥನ್ ನೇತೃತ್ವದ ಪೀಠ ವಿಚಾರಣೆ ನಡೆಸಿತು.
ನಿಮ್ಮಲ್ಲಿ ಸಾಕ್ಷ್ಯ ಇದೆಯೇ?
ತುಪ್ಪ ಕಲಬೆರಕೆಯಾಗಿದೆ ಎಂಬುದಕ್ಕಾಗಲೀ, ಕಲಬೆರಕೆಯಾಗಿದೆ ಎನ್ನಲಾದ ತುಪ್ಪದಿಂದಲೇ ಲಡ್ಡು ತಯಾರಿಸಲಾಗಿದೆ ಎಂಬುದಕ್ಕಾಗಲೀ ಸೂಕ್ತ ಪುರಾವೆಗಳಿಲ್ಲದ ಬಗ್ಗೆಯೂ ನ್ಯಾಯಪೀಠ ಆಕ್ಷೇಪ ವ್ಯಕ್ತಪಡಿಸಿದೆ. “ತನಿಖಾ ವರದಿ ಬರುವ ಮುನ್ನವೇ ಮಾಧ್ಯಮಗಳ ಮುಂದೆ ಹೋಗುವ ಆವಶ್ಯಕತೆ ಏನಿತ್ತು? ನೀವು ಸಾಂವಿಧಾನಿಕ ಹುದ್ದೆಯಲ್ಲಿ ಇರುವವರು. ರಾಜಕೀಯದಿಂದ ದೇವರನ್ನು ದೂರವಿಡಬೇಕೆಂದು ನಿರೀಕ್ಷಿಸುತ್ತೇವೆ. ಲ್ಯಾಬ್ ವರದಿ ಬಂದಿದ್ದು ಜುಲೈಯಲ್ಲಿ, ನಿಮ್ಮ ಹೇಳಿಕೆ ಬಿಡುಗಡೆಯಾಗಿದ್ದು ಸೆಪ್ಟಂಬರ್ನಲ್ಲಿ. ಅಲ್ಲದೆ ಲ್ಯಾಬ್ ವರದಿಯೂ ಸ್ಪಷ್ಟವಾಗಿಲ್ಲ. ಇದಕ್ಕೆ ನಿಮ್ಮ ಬಳಿ ಸಾಕ್ಷ್ಯ ಇದೆಯೇ? ಎಂದು ನ್ಯಾಯಪೀಠ ಪ್ರಶ್ನಿಸಿದೆ.
ಟಿಟಿಡಿ ಹೇಳಿಕೆ ಆಧರಿಸಿ ತರಾಟೆ
ಪೂರೈಕೆದಾರ ಸಂಸ್ಥೆಯು ಜೂನ್ನಿಂದ ಜು.4ರ ವರೆಗೆ ಪೂರೈಸಿದ ತುಪ್ಪವನ್ನು ಪರೀಕ್ಷೆಗೆಂದು ಕಳುಹಿಸಿಲ್ಲ ಎಂದು ಟಿಟಿಡಿಯೇ ಹೇಳಿದೆ. ಜು. 6 ಮತ್ತು 12ರಂದು 2 ಟ್ಯಾಂಕರ್ಗಳಲ್ಲಿ ಪೂರೈಸಲಾದ ತುಪ್ಪವನ್ನು ಮಾತ್ರ ಲ್ಯಾಬ್ಗ ಪರೀಕ್ಷೆಗೆಂದು ಕಳುಹಿಸಲಾಗಿದೆ. ಪರೀಕ್ಷೆಗೆ ಕಳುಹಿಸಿದ ಎಲ್ಲ 4 ಮಾದರಿಗಳಲ್ಲೂ ಕಲಬೆರಕೆಯಾಗಿರುವುದು ದೃಢಪಟ್ಟಿದೆ ಎಂದೂ ಟಿಟಿಡಿ ಹೇಳಿದೆ. ಹೀಗಿರುವಾಗ, ಪ್ರಾಣಿಗಳ ಕೊಬ್ಬು ಬೆರಕೆಯಾದ ತುಪ್ಪದಿಂದಲೇ ಲಡ್ಡು ತಯಾರಿಸಲಾಗಿದೆ ಎಂದು ಹೇಗೆ ಹೇಳುತ್ತೀರಿ? ಅದಕ್ಕೆ ಸಾಕ್ಷಿ ಎಲ್ಲಿದೆ? ಎಂದು ನ್ಯಾಯಪೀಠ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Top court: ಬುಲ್ಡೋಜರ್ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?
Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು
Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!
Himachal Pradesh: ಭಾರತೀಯ ವಾಯುಪಡೆ ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಶೋಧ
Jammu and Kashmir: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಸೈಬರ್ ವಂಚಕರಿಗೆ ಪೊಲೀಸರ ಜಾಲ!
GOAT OTT Release: ದಳಪತಿ ವಿಜಯ್ ʼಗೂಟ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ
Top court: ಬುಲ್ಡೋಜರ್ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.