![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 1, 2024, 7:27 AM IST
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸೋಮವಾರ ಮಹತ್ವದ ವಿದ್ಯಮಾನಗಳು ಪ್ರಾರಂಭವಾಗಿದ್ದು, ಇಷ್ಟು ದಿನಗಳ ಕಾಲ ಸುರಕ್ಷಿತ ಅಂತರ ಕಾಯ್ದುಕೊಳ್ಳುತ್ತಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ| ಜಿ. ಪರಮೇಶ್ವರ್ ರಹಸ್ಯ ಸಭೆ ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಪರಮೇಶ್ವರ್ ನಿವಾಸಕ್ಕೆ ತೆರಳಿದ ಡಿ.ಕೆ. ಶಿವಕುಮಾರ್ ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ. ಈ ಚರ್ಚೆ ನಡೆಯುವ ಕಾಲಕ್ಕೆ ಯಾರಿಗೂ ಒಳಗೆ ಪ್ರವೇಶ ನೀಡದೇ ಇರುವ ಮೂಲಕ ಗೌಪ್ಯತೆ ಕಾಯ್ದುಕೊಳ್ಳಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಸಿಲುಕಿರುವ ರಾಜಕೀಯ ಬಲೆಯ ವ್ಯಾಪ್ತಿ ಹಾಗೂ ಗಾಂಭೀರ್ಯದ ಬಗ್ಗೆ ಮೂಲ ಕಾಂಗ್ರೆಸ್ನ ಇಬ್ಬರು ಪ್ರಬಲ ನಾಯಕರು ಚರ್ಚೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.
ಪರಮೇಶ್ವರ್ ನಿವಾಸಕ್ಕೆ ಶಿವಕುಮಾರ್ ಭೇಟಿ ಕೊಡುವುದಕ್ಕೆ ಬೇಕಾದ ತುರ್ತು ಕಾರಣವೊಂದು ಎರಡೂ ಪಾಳಯದಿಂದ ಹರಿಯಬಿಡಲಾಗಿದೆ. ನಿಗಮ-ಮಂಡಳಿ ನಿರ್ದೇಶಕರ ನೇಮಕಕ್ಕೆ ಸಂಬಂಧಪಟ್ಟಂತೆ ಡಾ| ಜಿ. ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಸಭೆಯಲ್ಲಿ ನೇಮಕ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಪರಮೇಶ್ವರ್ ಕೆಲ ವಿಮರ್ಶೆ ವ್ಯಕ್ತಪಡಿಸಿದ್ದು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಜತೆಗೂ ಮಾತನಾಡಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿವಕುಮಾರ್ ಅವರು ಪರಮೇಶ್ವರ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.