Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಒಂದು ವೇಳೆ ಆರೋಪಿ ಕ್ರಿಮಿನಲ್‌ ಕೇಸ್‌ ಎದುರಿಸುತ್ತಿದ್ದರೆ...

Team Udayavani, Oct 1, 2024, 12:51 PM IST

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ನವದೆಹಲಿ: ಸಾರ್ವಜನಿಕ ಸುರಕ್ಷತೆ ಸರ್ವೋತ್ಕೃಷ್ಟವಾದದ್ದು, ಈ ನಿಟ್ಟಿನಲ್ಲಿ ರಸ್ತೆ, ಜಲಮೂಲ ಅಥವಾ ರೈಲ್ವೆ ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧರ್ಮದ ದೇವಸ್ಥಾನ, ದರ್ಗಾಗಳಿರಲಿ ಅವೆಲ್ಲವನ್ನೂ ತೆರವುಗೊಳಿಸಬೇಕು ಎಂದು ಸುಪ್ರೀಂಕೋರ್ಟ್‌ (Supreme court) ಮಂಗಳವಾರ (ಅ.01) ಮಹತ್ವದ ಆದೇಶ ನೀಡಿದೆ.

“ಭಾರತ ಜಾತ್ಯತೀತ ದೇಶವಾಗಿದೆ. ಬುಲ್ಡೋಜರ್‌ ಕಾರ್ಯಾಚರಣೆ ಮತ್ತು ಅತಿಕ್ರಮಣ ವಿರೋಧಿ ತೆರವು ಕಾರ್ಯ ಯಾವುದೇ ಧರ್ಮವನ್ನು ಲೆಕ್ಕಿಸದೇ ಎಲ್ಲಾ ನಾಗರಿಕರಿಗೆ ಸಂಬಂಧಿಸಿದೆ” ಎಂದು ಸುಪ್ರೀಂಕೋರ್ಟ್‌ ಒತ್ತಿ ಹೇಳಿದೆ.

ಅಪರಾಧ ಕೃತ್ಯ ಎಸಗಿದ ಆರೋಪಿಗಳ ಮನೆಯ ಮೇಲಿನ ಬುಲ್ಡೋಜರ್‌ ಕಾರ್ಯಾಚರಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂ ಪೀಠದ ಜಸ್ಟೀಸ್‌ ಬಿಆರ್‌ ಗವಾಯಿ ಮತ್ತು ಜಸ್ಟೀಸ್‌ ಕೆವಿ ವಿಶ್ವನಾಥನ್‌, ಬುಲ್ಡೋಜರ್‌ ಕಾರ್ಯಾಚರಣೆಯ ಟ್ರೆಂಡ್‌ ಹಲವು ರಾಜ್ಯಗಳಲ್ಲಿ ಮುಂದುವರಿದಿದೆ. ಇದನ್ನು ಬುಲ್ಡೋಜರ್‌ ನ್ಯಾಯ ಎಂದೇ ಕರೆಯುತ್ತಿದ್ದಾರೆ. ಈ ಹಿಂದೆ ಅಧಿಕಾರಿಗಳು ಕಾನೂನು ಬಾಹಿರ ಕಟ್ಟಡಗಳ ತೆರವಿಗೆ ಮಾತ್ರ ಕಾರ್ಯಾಚರಣೆ ನಡೆಸುತ್ತಿದ್ದರು.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು, ಉತ್ತರ ಪ್ರದೇಶ, ಗುಜರಾತ್‌ ಮತ್ತು ಮಧ್ಯಪ್ರದೇಶ ರಾಜ್ಯಗಳ ಪರವಾಗಿ ವಾದಿಸಲು ಹಾಜರಾಗಿದ್ದರು. ಒಂದು ವೇಳೆ ಆರೋಪಿ ಕ್ರಿಮಿನಲ್‌ ಕೇಸ್‌ ಎದುರಿಸುತ್ತಿದ್ದರೆ ಅವರು ಬುಲ್ಡೋಜರ್‌ ಕಾರ್ಯಾಚರಣೆ ಎದುರಿಸಲು ಕಾರಣವಾಗಬಹುದೇ ಎಂದು ಪೀಠ ಪ್ರಶ್ನಿಸಿತ್ತು.

“ಅದಕ್ಕೆ ಮೆಹ್ತಾ ಅವರು, ಖಂಡಿತವಾಗಿಯೂ ಇಲ್ಲ, ಅವರು ಅತ್ಯಾಚಾರ ಅಥವಾ ಭಯೋತ್ಪಾದನೆಯಂತಹ ಕೃತ್ಯ ಎಸಗಿದ್ದರೂ ಕೂಡಾ ಅಂತಹ ಕಾರ್ಯಾಚರಣೆ ಸಮರ್ಪಕವಲ್ಲ. ಮೈ ಲಾರ್ಡ್‌, ಅದೇ ರೀತಿ ಕಾರ್ಯಾಚರಣೆ ನಡೆಸುವ ಬಗ್ಗೆ ಒಂದು ದಿನದ ಮೊದಲು ನೋಟಿಸ್‌ ಅಂಟಿಸಬಾರದು, ಇದು ಬಹುತೇಕ ನಗರಪಾಲಿಕೆಯ ಕಾನೂನು ಅನ್ವಯ ಕಾರ್ಯಾಚರಣೆ ನಡೆದಿದೆ. ಇಂತಹ ಕಾರ್ಯಾಚರಣೆ ಬಗ್ಗೆ ರಿಜಿಸ್ಟರ್ಡ್‌ ಅಂಚೆ ಮೂಲಕ ನೋಟಿಸ್‌ ನೀಡಿರುವ ಬಗ್ಗೆ ಪೀಠ ಗಮನಿಸಬೇಕು ಎಂದು ಹೇಳಿದರು.

ಯಾವುದೇ ಅನಧಿಕೃತ ಕಟ್ಟಡವಿರಲಿ, ಅವೆಲ್ಲದಕ್ಕೂ ಒಂದೇ ಕಾನೂನು ಅನ್ವಯ, ಇದು ಧರ್ಮ ಅಥವಾ ನಂಬಿಕೆಗೆ ಸಂಬಂಧಿಸಿದ್ದಲ್ಲ ಎಂದು ಜಸ್ಟೀಸ್‌ ಗವಾಯಿ ಪ್ರತ್ಯುತ್ತರ ನೀಡಿದರು.

ಆಸ್ತಿ ಧ್ವಂಸಗೊಳಿಸಲು ಅಪರಾಧ ಕೃತ್ಯ ಎಸಗಿರುವುದೇ ಮಾನದಂಡವಾಗಬಾರದು, ನಾಗರಿಕ ಕಾಯ್ದೆಯನ್ನು ಉಲ್ಲಂಘಿಸಿದ ಪ್ರಕರಣಗಳಲ್ಲಿ ಮಾತ್ರ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಕು ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿ ಆದೇಶ ನೀಡಿದೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.