Kantara: Chapter 1: ʼಕಾಂತಾರ-1ʼನಲ್ಲಿ ರಿಷಬ್‌ ತಂದೆ ಪಾತ್ರದಲ್ಲಿ ಮೋಹನ್‌ ಲಾಲ್?


Team Udayavani, Oct 1, 2024, 1:26 PM IST

Kantara: Chapter 1: ʼಕಾಂತಾರ-1ʼನಲ್ಲಿ ರಿಷಬ್‌ ತಂದೆ ಪಾತ್ರದಲ್ಲಿ ಮೋಹನ್‌ ಲಾಲ್?

ಬೆಂಗಳೂರು: ʼಕಾಂತಾರʼದ ಮೂಲಕ ಪ್ಯಾನ್‌ ಇಂಡಿಯಾದಲ್ಲಿ ಮೋಡಿ ಮಾಡಿದ ರಿಷಬ್‌ ಶೆಟ್ಟಿ ಸದ್ಯ ʼಕಾಂತಾರ ಚಾಪ್ಟರ್-1”(Kantara: Chapter 1) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಮೊದಲು  ಕನ್ನಡದಲ್ಲಿ ತೆರೆಕಂಡ ʼಕಾಂತಾರʼ  ಆ ಬಳಿಕ ಇತರೆ ಭಾಷೆಗೆ ಡಬ್‌ ಆಗಿ ತೆರೆಕಂಡಿತ್ತು. ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ 400 ಕೋಟಿ ಗಳಿಕೆ ಕಾಣುವುದರ ಜತೆ ‘ಅತ್ಯುತ್ತಮ ನಟನೆʼಗಾಗಿ ರಿಷಬ್‌ ಅವರಿಗೆ ರಾಷ್ಟ್ರ ಪ್ರಶಸ್ತಿ ಕೂಡ ತಂದುಕೊಟ್ಟಿದೆ.

ಇದನ್ನೂ ಓದಿ: GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

ʼಕಾಂತಾರ ಪ್ರೀಕ್ವೆಲ್‌ʼ ಸಿನಿಮಾಕ್ಕಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಮುಹೂರ್ತದ ಬಳಿಕ ಸಿನಿಮಾ ತಂಡದಿಂದ ಯಾವ ಮಹತ್ವದ ಅಪ್ಡೇಟ್ ಕೂಡ ಹೊರಬಿದ್ದಿಲ್ಲ. ‌ಆದರೂ ಆಗಾಗ ಸಿನಿಮಾದ ಪಾತ್ರವರ್ಗ ಬಗ್ಗೆ ಸುದ್ದಿ ಹರಿದಾಡುತ್ತಲೇ ಇರುತ್ತದೆ.

ರಿಷಬ್‌ ಶೆಟ್ಟಿ (Rishab Shetty) ಅವರ ʼಕಾಂತಾರ-1ʼ ನಲ್ಲಿ ಅವರು ನಟಿಸುತ್ತಾರೆ, ಇವರು ನಟಿಸಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಲೇ ಇದೆ.  ಜೂ.ಎನ್‌ ಟಿಆರ್‌ ಕೂಡ ಸಿನಿಮಾದ ಭಾಗವಾಗಲಿದ್ದಾರೆ ಎನ್ನುವ ಮಾತು ಈ ಹಿಂದೆ ಕೇಳಿಬಂದಿತ್ತು. ಇತ್ತೀಚೆಗಷ್ಟೇ ರಿಷಬ್‌ ದಂಪತಿ ಮಾಲಿವುಡ್‌ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್ (Mohanlal) ಅವರನ್ನು ಭೇಟಿ ಆಗಿದ್ದರು.

ʼಕಾಂತಾರ-1ʼ ಅನೌನ್ಸ್‌ ಬಳಿಕ ರಿಷಬ್‌ ಯಾವ ಕಲಾವಿದರನ್ನು ಭೇಟಿ ಆದರೂ ಆ ಕಲಾವಿದ ʼಕಾಂತಾರʼದಲ್ಲಿ ನಟಿಸುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತದೆ. ಮೋಹನ್‌ ಲಾಲ್‌ ಅವರನ್ನು ಭೇಟಿ ಆದಾಗಲೂ ಈ ಮಾತು ಕೇಳಿ ಬಂದಿತ್ತು.

ಇದೀಗ ಈ ವಿಚಾರಕ್ಕೆ ಮತ್ತಷ್ಟು ಮಸಾಲೆ ಸೇರಿದ್ದು, ಮೋಹನ್‌ ಲಾಲ್‌ ʼಕಾಂತಾರ-1ʼ ಸಿನಿಮಾದಲ್ಲಿ ನಟಿಸಲಿದ್ದಾರೆ. ಅವರು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ ಅವರ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

ಆದರೆ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಈಗಾಗಲೇ ಚಿತ್ರತಂಡ ತಂಡವು ಜೂನಿಯರ್ ಆರ್ಟಿಸ್ಟ್‌ಗಳಿಗೆ ಆಡಿಷನ್‌ಗಳನ್ನು ನಡೆಸಿದೆ. ಪ್ರಮುಖ ಪಾತ್ರದಲ್ಲಿ ಯಾರೆಲ್ಲಾ ನಟಿಸಲಿದ್ದಾರೆ ಎನ್ನುವ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ.

ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ʼಕಾಂತಾರ ಪ್ರೀಕ್ವೆಲ್‌ʼ ಪಂಜರ್ಲಿ ದೈವದ ಹುಟ್ಟು ಮತ್ತು ಇತಿಹಾಸದ ಕಥೆಯನ್ನೊಳಗೊಳ್ಳಲಿದೆ ಎನ್ನಲಾಗಿದೆ. ಮುಂದಿನ ವರ್ಷ ಸಿನಿಮಾ ತೆರೆ ಕಾಣುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Tirupati Laddu case:ಸುಪ್ರೀಂ ತರಾಟೆ ಬೆನ್ನಲ್ಲೇ ಅ.3ರವರೆಗೆ SIT ತನಿಖೆಗೆ ಆಂಧ್ರ ತಡೆ

Tirupati Laddu case:ಸುಪ್ರೀಂ ತರಾಟೆ ಬೆನ್ನಲ್ಲೇ ಅ.3ರವರೆಗೆ SIT ತನಿಖೆಗೆ ಆಂಧ್ರ ತಡೆ

3-anadapura

Anadapura ಬಳಿ ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

MLA-Beluru

Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GOAT OTT Release: ದಳಪತಿ ವಿಜಯ್‌ ʼಗೋಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

GOAT OTT Release: ದಳಪತಿ ವಿಜಯ್‌ ʼಗೋಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

1-siddi

Ra*e case: ನಟ ಸಿದ್ಧಿಕ್‌ಗೆ ಸುಪ್ರೀಂನಿಂದ ನಿರೀಕ್ಷಣ ಜಾಮೀನು

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

1-wqewqe

Malayalam ಚಿತ್ರರಂಗ; ಆ ದೃಶ್ಯಗಳನ್ನು ನೋಡುವಂತೆ ಬಲವಂತ: ನಟಿಯ ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

man

Chikodi: ಕೌಟುಂಬಿಕ ಕಲಹ; ತಾಯಿ-ಮಗು ಬಾವಿಗೆ ಹಾರಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.