Karkala: ಕೆಮ್ಮಣ್ಣು ತಿರುವಿನಲ್ಲಿ ಅಪಾಯಕಾರಿ ಮರ !

| ಸಂಪೂರ್ಣ ರಸ್ತೆಗೆ ಬಾಗಿಕೊಂಡು ಆತಂಕ ಸೃಷ್ಟಿ | ಮಳೆ ಗಾಳಿಗೆ ಇದರಡಿಯೇ ವಿಶ್ರಾಂತಿ!

Team Udayavani, Oct 1, 2024, 2:35 PM IST

6

ಕಾರ್ಕಳ: ಸಹಸ್ರಾರು ಜನ, ವಾಹನ ಓಡಾಡುವ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕೆಮ್ಮಣ್ಣು ತಿರುವಿನಲ್ಲಿ ರಸ್ತೆಗೆ ತಾಗಿಕೊಂಡೇ ಬೃಹತ್‌ ಮರವೊಂದಿದೆ. ಸಂಪೂರ್ಣವಾಗಿ ರಸ್ತೆಗೆ ಬಾಗಿಕೊಂಡಿರುವ ಮರ ಯಾವುದೇ ಕ್ಷಣ ಉರುಳಿ ಬೀಳುವ ಅಪಾಯವಿದೆ. ಆದರೆ, ಸ್ಥಳೀಯಾಡಳಿತ ಈ ಬಗ್ಗೆ ಯಾವುದೇ ಮುನ್ನೆಚ್ಚರಿಕೆಯನ್ನು ವಹಿಸಿಲ್ಲ.

ಕಲ್ಯಾ ಗ್ರಾಮ ಪಂಚಾಯತ್‌ ಹಾಳೆಕಟ್ಟೆ ಹಾಗೂ ನಿಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೆಮಣ್ಣಿನ ನಡುವಿನ ತಿರುವಿನಲ್ಲಿ ಈ ಮರವಿದೆ. ಸಮೃದ್ಧವಾಗಿ ಬೆಳೆದು ನಿಂತ ಮರದ ಕೊಂಬೆಗಳು ರಸ್ತೆಯನ್ನು ಆವರಿಸಿಕೊಂಡಿವೆ. ಈ ಹೆದ್ದಾರಿಯಲ್ಲಿ ಕಂಟೇನರ್‌ ಹಾಗೂ ಘನ ವಾಹನಗಳು ಸಂಚರಿಸುವಾಗ ಚಾಚಿಕೊಂಡ ಕೊಂಬೆಗಳು ವಾಹನಗಳಿಗೆ ತಾಗುತ್ತವೆ. ಇಂಥಹುದೇ ಘಟನೆಗಳು ಮರುಕಳಿಸಿದಾಗ ಕೊಂಬೆಗಳು ಉರುಳಿ ಬೀಳುವ ಸಾಧ್ಯತೆಯೂ ಇರುತ್ತದೆ. ಶಾಲಾ ಕಾಲೇಜು ತೆರಳುವ ವಿದ್ಯಾರ್ಥಿಗಳು ಇದೇ ಮರದಡಿಯಲ್ಲಿ ಸಾಗುತ್ತಿರುತ್ತಾರೆ. ಮಕ್ಕಳು ಮಳೆ, ಬಿಸಿಲಿಗೆ ಇದೇ ಮರದಿ ವಿಶ್ರಾಂತಿ ಪಡೆಯುತ್ತಾರೆ.

ಮರದ ಬುಡವು ಬಿರುಕು ಬಿಟ್ಟಿದ್ದು, ಜೋರಾಗಿ ಗಾಳಿ ಬೀಸಿದರೆ ಇಡೀ ಮರವೇ ಬುಡದಿಂದ ಕಿತ್ತುಕೊಂಡು ರಸ್ತೆಗೆ ಬೀಳುವ ಆತಂಕವೂ ಇದೆ. ಅರಣ್ಯ ಇಲಾಖೆ ಎಚ್ಚೆತ್ತು ಕೂಡಲೇ ಅಪಾಯಕಾರಿ ಮರವನ್ನು ತೆರವುಗೊಳಿಸುವಂತೆ ಗ್ರಾಮಸ್ಥರು, ವಾಹನ ಸವಾರರು ಒತ್ತಾಯಿಸಿದ್ದಾರೆ.

ಗ್ರಾ.ಪಂಗಳು ತಮ್ಮ ವ್ಯಾಪ್ತಿಯ ಅಪಾಯಕಾರಿ ಮರದ ಗಂಭೀರತೆಯನ್ನು ಅರಣ್ಯ ಇಲಾಖೆಗೆ ವಿವರಿಸಿ ತ್ವರಿತ ಕ್ರಮಕ್ಕೆ ಮನವಿ ಮಾಡಬೇಕಾಗಿದೆ.

ಪರಿಶೀಲಿಸಿ ಕ್ರಮ
ಈ ಮರದ ಬಗ್ಗೆ ದೂರುಗಳು ಬಂದ ಬಗ್ಗೆ ಗಮನವಿಲ್ಲ. ಕಡತ ಪರಿಶೀಲಿಸಿ ದೂರು ಸ್ವೀಕಾರವಾಗಿದಲ್ಲಿ ಕ್ರಮ ವಹಿಸಲಾ ಗುವುದು. ಜತೆಗೆ ಅಪಾಯಕಾರಿ ಮರ ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುವುದು.
-ಹುಕ್ರಪ್ಪ ಗೌಡ, ಅರಣ್ಯಾಧಿಕಾರಿ

ಎಚ್ಚೆತ್ತುಕೊಳ್ಳಲಿ
ಮರ ತೆರವುಗೊಳಿಸಿ ಅಪಾಯವನ್ನು ತಪ್ಪಿಸಬೇಕು. ಅವಘಡ ಆದ ಅನಂತರ ಎಚ್ಚೆತ್ತುಕೊಳ್ಳುವ ಇಲಾಖೆಗಳು ಪೂರ್ವದಲ್ಲಿ ಮರೆಯುವುದು ಸರಿಯಲ್ಲ.
-ಸುರೇಂದ್ರ ಶೆಟ್ಟಿ, ವಾಹನ ಸವಾರ

ಯಾರಿಗೆಲ್ಲ ಅಪಾಯ?

  • ಈ ಮರದ ಬುಡದಲ್ಲಿ ಬಸ್ಸಿಗಾಗಿ ಕಾಯುವುದು ಸೇರಿದಂತೆ ವಿಶ್ರಾಂತಿ ಪಡೆದು ಕೊಳ್ಳುವುದೂ ಇದೆ.
  • ಹಿರಿಯ ನಾಗರಿಕರು, ಮಹಿಳೆಯರು ಇದೇ ಮರದಿಡಿಯ ಮೂಲಕವೇ ವಾಕಿಂಗ್‌ಗೆ ಹೋಗುತ್ತಾರೆ.
  • ನೂರಾರು ವಾಹನಗಳು, ಶಾಲೆ, ಕಾಲೇಜು ವಿದ್ಯಾರ್ಥಿಗಳು ಈ ಮರದ ಅಡಿಯಿಂದಲೇ ಹೋಗುತ್ತಾರೆ.

ಟಾಪ್ ನ್ಯೂಸ್

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Tirupati Laddu case:ಸುಪ್ರೀಂ ತರಾಟೆ ಬೆನ್ನಲ್ಲೇ ಅ.3ರವರೆಗೆ SIT ತನಿಖೆಗೆ ಆಂಧ್ರ ತಡೆ

Tirupati Laddu case:ಸುಪ್ರೀಂ ತರಾಟೆ ಬೆನ್ನಲ್ಲೇ ಅ.3ರವರೆಗೆ SIT ತನಿಖೆಗೆ ಆಂಧ್ರ ತಡೆ

3-anadapura

Anadapura ಬಳಿ ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

MLA-Beluru

Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Udupi: ಅಡುಗೆಯಲ್ಲಿ ಭಾರತಕ್ಕೆ ಮೊದಲ ಶ್ರೇಷ್ಠತಾ ಪದಕ ತಂದ ಹರ್ಷವರ್ಧನ್‌

Udupi: ಅಡುಗೆಯಲ್ಲಿ ಭಾರತಕ್ಕೆ ಮೊದಲ ಶ್ರೇಷ್ಠತಾ ಪದಕ ತಂದ ಹರ್ಷವರ್ಧನ್‌

8(1)

Udupi ನಗರದಲ್ಲಿವೆ ಅಪಾಯಕಾರಿ ಗುಂಡಿಗಳು

5

Thekkatte: ಕುಸಿತದ ಭೀತಿಯಲ್ಲಿದೆ ಕನ್ನುಕೆರೆ ತಡೆಗೋಡೆ

4(1)

Kundapura: ರಾಷ್ಟ್ರೀಯ ಹೆದ್ದಾರಿ ಬದಿ ವಿದ್ಯಾರ್ಥಿಗಳು ರಸ್ತೆಯಲ್ಲೇ ಬಾಕಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

man

Chikodi: ಕೌಟುಂಬಿಕ ಕಲಹ; ತಾಯಿ-ಮಗು ಬಾವಿಗೆ ಹಾರಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.