Yelandur: ಜಾತಿ ನಿಂದನೆ: ಪ್ರಕರಣ ದಾಖಲು
Team Udayavani, Oct 1, 2024, 8:24 PM IST
ಯಳಂದೂರು: ಪ್ರೇಮಿಗಳು ಮಾತನಾಡುತ್ತಿರುವುದನ್ನು ಪ್ರಶ್ನೆ ಮಾಡಿದ ಹುಡುಗಿಯ ದೊಡ್ಡಪ್ಪನಿಗೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ ವ್ಯಕ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ಯಳಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ತಾಲೂಕಿನ ಮದ್ದೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 948 ರಸ್ತೆಯಲ್ಲಿ ಸೆ.30ರ ಸೋಮವಾರ ಸಂಜೆ ತಾಲೂಕಿನ ವಡಗೆರೆ ಗ್ರಾಮದ ಒಕ್ಕಲಿಗ ಬಡಾವಣೆಯ ನಿವಾಸಿ ಅಪ್ಪು(24) ಹಾಗೂ ತಾಲೂಕಿನ ಮದ್ದೂರು ಗ್ರಾಮದ ಚಿಕ್ಕಬಸಯ್ಯ ಎಂಬವರ ಮಗಳಾದ ಭಾರತಿ (22) ಎಂಬವರು ಮಾತನಾಡುತ್ತಿದ್ದರು.
ಈ ವೇಳೆ ಹುಡುಗಿಯ ದೊಡ್ಡಪ್ಪ ಸಿದ್ದರಾಜು(60) ಎಂಬವರು ಜಮೀನಿನ ಕಡೆ ಹೋಗುವ ಮಾರ್ಗದಲ್ಲಿ ಗಮನಿಸಿ ಈ ರೀತಿ ಮಾತನಾಡುವುದು ಸರಿಯಿಲ್ಲ ಎಂದು ಬುದ್ಧಿವಾದ ಹೇಳಿದ್ದಾರೆ.
ಇದರಿಂದ ಕೋಪಗೊಂಡ ಅಪ್ಪು ಪ್ರಚೋದನಾಕಾರಿಯಾಗಿ ಹಾಗೂ ಜಾತಿ ಬಗ್ಗೆ ಮಾತನಾಡಿ ತನ್ನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿದ್ದಾರೆ ಎಂದು ಸಿದ್ದರಾಜು ದೂರಿದ್ದಾರೆ.
ಈ ಬಗ್ಗೆ ಯಳಂದೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ
KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.