Kundapura: ಚೆಕ್‌ ಅಮಾನ್ಯ ಪ್ರಕರಣ ಆರೋಪಿ ದೋಷಮುಕ್ತ


Team Udayavani, Oct 2, 2024, 6:30 AM IST

Court-1

ಕುಂದಾಪುರ: ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಳಹಳ್ಳಿ ಗ್ರಾಮದ ನಿವಾಸಿ ಲೋಕೇಶ್‌ ಅವರನ್ನು ಗೌರಿಬಿದನೂರಿನ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯ ದೋಷಮುಕ್ತಗೊಳಿಸಿ ಆದೇಶಿಸಿದೆ.

ಆರೋಪಿಯ ಸಹೋದರ ಪ್ರವೀಣ್‌ ಗೌರಿಬಿದನೂರು ತಾಲೂಕಿನ ತೊಂಡೆಬಾವಿಯಲ್ಲಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಸಾಲ ಪಡೆದಿದ್ದು ಸಾಲಕ್ಕೆ ದೂರುದಾರರ ಮಗ ಗೌರಿಬಿದನೂರು ಪೊಲೀಸ್‌ ಠಾಣೆಯ ಮುಖ್ಯ ಪೇದೆ ರವಿಕುಮಾರ್‌ ಜಾಮೀನುದಾರರಾಗಿದ್ದರು.

ಕೋವಿಡ್‌ ಸಮಯದಲ್ಲಿ ಪ್ರವೀಣ್‌ ಅ‌ವರಿಗೆ ಸಾಲ ಮರುಪಾವತಿಸಲು ಅನನುಕೂಲವಾಗಿದ್ದು ಸಂಪೂರ್ಣ ಸಾಲವನ್ನು ರವಿಕುಮಾರ್‌ ಅವರೇ ಪಾವತಿಸಿದ್ದರು. ಅನಂತರ ಪ್ರವೀಣ್‌ ರವಿಕುಮಾರ್‌ಗೆ ಹಣ ಮರುಪಾವತಿಸಿದ್ದರೂ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಗೌರಿಬಿದನೂರು ಠಾಣೆಯ ತನ್ನ ಸಹೋದ್ಯೋಗಿ ಸಿಬಂದಿಗಳೊಂದಿಗೆ ಕೋಟ ಪೊಲೀಸ್‌ ಠಾಣೆಯ ಸಿಬ್ಬಂದಿ ಸಹಾಯದಿಂದ ಪ್ರವೀಣ್‌ ಅವರನ್ನು ಸುತ್ತುವರಿದು ಅವರ ಸಹೋದರ ಲೋಕೇಶ್‌ ಅವರ ಖಾಲಿ ಚೆಕ್‌ಗಳನ್ನು ಪಡೆದು, ಪ್ರವೀಣ್‌ರನ್ನು ಕೋಟ ಪೊಲೀಸ್‌ ಠಾಣೆಯಲ್ಲಿಟ್ಟಿದ್ದರು. ಅಲ್ಲಿಂದ ತಪ್ಪಿಸಿಕೊಂಡ ಪ್ರವೀಣ್‌ ಇಲಾಖೆಯ ಮೇಲಧಿಕಾರಿಗಳಿಗೆ ದೂರು ನೀಡಿದ್ದು, ತನಿಖಾ ಹಂತದಲ್ಲಿರುವಾಗಲೇ ಪ್ರವೀಣ್‌ರಿಂದ ಪಡೆದ ಲೋಕೇಶ್‌ ಅವರ ಎರಡು ಚೆಕ್‌ಗಳನ್ನು ರವಿಕುಮಾರ್‌ ತನ್ನ ತಂದೆ ಹಾಗೂ ತಾಯಿಯ ಹೆಸರಿನಲ್ಲಿ ನಗದೀಕರಣಕ್ಕೆ ಹಾಕಿದ್ದರು. ಆರೋಪಿಯ ಖಾತೆಯಲ್ಲಿ ಸಾಕಷ್ಟು ಹಣ ಇಲ್ಲದ ಕಾರಣ ಚೆಕ್‌ ಅಮಾನ್ಯಗೊಂಡಿತು. ರವಿಕುಮಾರ್‌ ತಂದೆಯ ಮೂಲಕ ನ್ಯಾಯಾಲಯದಲ್ಲಿ ಚೆಕ್‌ ಅಮಾನ್ಯ ಪ್ರಕರಣ ದಾಖಲಿಸಿದ್ದರು. ಇದೀಗ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿ ಆದೇಶಿಸಿದೆ. ಆರೋಪಿ ಮೊಳಹಳ್ಳಿ ಲೋಕೇಶ್‌ ಪರವಾಗಿ ಗೌರಿಬಿದನೂರು ನ್ಯಾಯಾಲಯದಲ್ಲಿ ಕುಂದಾಪುರದ ನ್ಯಾಯವಾದಿ ನೀಲ್‌ ಬ್ರಿಯಾನ್‌ ಪಿರೇರಾ ವಾದಿಸಿದ್ದರು.

 

ಟಾಪ್ ನ್ಯೂಸ್

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

7-mng

ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ

6

Kollywood: ಮೂವರು ಗಂಡಂದಿರಿಗೆ ವಿಚ್ಚೇದನ ಕೊಟ್ಟು 4ನೇ ಮದುವೆಗೆ ಸಜ್ಜಾದ ಖ್ಯಾತ ನಟಿ

Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

1-shirva

Muscut ವಿಶ್ವಬ್ರಾಹ್ಮಣ ಒಕ್ಕೂಟ; ಸ್ವಯಂಪ್ರೇರಿತ ರಕ್ತದಾನ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

14(1)

Pajagudde ಲಾರಿ-ಬೈಕ್‌ ಅಪಘಾತ ಮೃತಪಟ್ಟ ನಾಲ್ವರ ಅಂತಿಮ ಸಂಸ್ಕಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

7-mng

ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ

6-muddebihala

Muddebihal: ಗಾಂಧಿ ಜಯಂತಿಯಂದು ಪೊಲೀಸರಿಂದ ಮಾದರಿ ಕಾರ್ಯ

6

Kollywood: ಮೂವರು ಗಂಡಂದಿರಿಗೆ ವಿಚ್ಚೇದನ ಕೊಟ್ಟು 4ನೇ ಮದುವೆಗೆ ಸಜ್ಜಾದ ಖ್ಯಾತ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.