Kaup: ಟಿಪ್ಪರ್ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ
Team Udayavani, Oct 1, 2024, 10:30 PM IST
ಕಾಪು: ಕಾಪು ಪಡುಗ್ರಾಮದ ಮಂಗಳೂರು ಉಡುಪಿ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ನ್ನು ಸೊತ್ತು ಸಮೇತವಾಗಿ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಾಪು ಕ್ರೈಂ ಎಸ್ಸೈ ರಮೇಶ ನಾಯ್ಕ ಅವರು ಮಂಗಳವಾರ ಮುಂಜಾನೆ ರಾತ್ರಿ ರೌಂಡ್ಸ್ನಲ್ಲಿದ್ದಾಗ ಉಡುಪಿ ಕಡೆಗೆ ಬರುತ್ತಿದ್ದ ಟಿಪ್ಪರ್ನ ಬಾಡಿಯಿಂದ ನೀರು ಇಳಿಯುತ್ತಿರುವುದು ಕಂಡು ಬಂದಿದ್ದು ವಾಹನದಲ್ಲಿ ಮರಳನ್ನು ಸಾಗಿಸುತ್ತಿರಬಹುದು ಎಂಬ ಅನುಮಾನದಿಂದ ಟಿಪ್ಪರ್ನ ಚಾಲಕನಲ್ಲಿ ವಾಹನವನ್ನು ನಿಲ್ಲಿಸುವಂತೆ ಸೂಚಿಸಿದಾಗ ಚಾಲಕನು ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದನು. ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಬಾಡಿಯ ಮಟ್ಟದವರೆಗೆ ಮರಳನ್ನು ತುಂಬಿಸಿರುವುದು, ಆ ಮರಳಿನಿಂದ ನೀರು ಇಳಿಯುತ್ತಿರುವುದು ಕಂಡು ಬಂದಿತ್ತು.
ಟಿಪ್ಪರ್ ಮತ್ತು ಅದರಲ್ಲಿದ್ದ ಸುಮಾರು 15,000 ರೂಪಾಯಿ ಬೆಲೆ ಬಾಳುವ ಮರಳಿನ ಜತೆಗೆ ಚಾಲಕ ಶಿವಮೊಗ್ಗ ಮೂಲದ ಮೃತ್ಯುಂಜಯ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಚಾಲಕ ಮತ್ತು ವಾಹನದ ಮಾಲಕ ಪಡುಬಿದ್ರಿ ನಿವಾಸಿ ಮಯ್ಯದ್ದಿ ಹುಸೇನ್ ಎಂಬಾತನ ವಿರುದ್ಧ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್
Karkala: ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು
Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ
Uppinangady: ಕೆಎಸ್ಆರ್ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.