Attack on Israel: ಹೆಜ್ಬುಲ್ಲಾ ಬಾಸ್‌ ಹತ್ಯೆ ಬೆನ್ನಲ್ಲೇ ಇರಾನ್‌ 180 ಕ್ಷಿಪಣಿಗಳ ಮಳೆ

ಮಧ್ಯಪ್ರಾಚ್ಯ ಧಗ ಧಗ ;ವಿಶ್ವಸಂಸ್ಥೆ ಸೇರಿ ವಿಶ್ವಕ್ಕೇ ಕಳವಳ, ಇಸ್ರೇಲ್‌ ನೆರವಿಗೆ ಧಾವಿಸಿದ ಅಮೆರಿಕ ಸೇನೆ

Team Udayavani, Oct 2, 2024, 6:57 AM IST

White House: ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿಗೆ ಇರಾನ್‌ ಸಿದ್ಧತೆ!

ಜೆರುಸಲೇಮ್‌: ಲೆಬನಾನ್‌ ಹೆಜ್ಬುಲ್ಲಾ ಉಗ್ರ ಸಂಘಟನೆ ಮುಖ್ಯಸ್ಥ ಹಸನ್‌ ನಸ್ರಲ್ಲಾ ಹತ್ಯೆಗೆ ಪ್ರತೀಕಾರವಾಗಿ ಇರಾನ್‌ ಮಂಗಳವಾರ ರಾತ್ರಿ ಏಕಾಏಕಿ ಇಸ್ರೇಲ್‌ ಮೇಲೆ 180ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳ ದಾಳಿ ನಡೆಸಿದೆ. ಇಸ್ರೇಲ್‌ ಈ ದಾಳಿಯನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದೆ. ಇದ ರೊಂದಿಗೆ ಮಧ್ಯಪ್ರಾಚ್ಯದಲ್ಲಿ ಪೂರ್ಣ ಪ್ರಮಾಣದ ಯುದ್ಧ ಆರಂಭವಾದಂತಾಗಿದೆ.

ಇಸ್ರೇಲ್‌ನ ಟೆಲ್‌ ಅವಿವ್‌ ಹಾಗೂ ಜೆರುಸಲೇಮ್‌ ಅನ್ನು ಗುರಿಯಾಗಿಸಿಕೊಂಡು ಇರಾನ್‌ನ ನಗರ ಗಳಾದ ಇಸ್ಫಹಾನ್‌, ತಬ್ರಿಜ್‌, ಖೋರಮಾ ಬಾದ್‌, ಕರಾಜ್‌ ಮತ್ತು ಅರಾಕ್ನಿಗಳಿಂದ ಕ್ಷಿಪಣಿಗಳನ್ನು ಉಡಾಯಿಸಲಾಗಿದೆ. ಈ ದಿಢೀರ್‌ ಬೆಳವಣಿಗೆಯು ಇಡೀ ಜಗತ್ತಲ್ಲೇ ಆತಂಕ ಸೃಷ್ಟಿಸಿದ್ದು, ವಿಶ್ವಸಂಸ್ಥೆ ಸೇರಿದಂತೆ ಹಲವು ರಾಷ್ಟ್ರಗಳು ಕಳವಳ ವ್ಯಕ್ತಪಡಿಸಿವೆ.
ದಾಳಿ ಬೆನ್ನಲ್ಲೇ ಅಮೆರಿಕವು ಇಸ್ರೇಲ್‌ ನೆರವಿಗೆ ಧಾವಿಸಿದೆ. ಇರಾನ್‌ನ ಕ್ಷಿಪಣಿಗಳನ್ನು ಹೊಡೆದುರುಳಿ ಸಲು ನೆರವಾಗಿ ಎಂದು ತನ್ನ ಸೇನೆಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಸೂಚಿಸಿದ್ದಾರೆ.

ಪ್ರತೀಕಾರದ ದಾಳಿ
ಟೆಹ್ರಾನ್‌ ಟೈಮ್ಸ ವರದಿಯ ಪ್ರಕಾರ, ಇಸ್ರೇಲ್‌ ವಿರುದ್ಧ ಪ್ರತೀಕಾರ ಕೈಗೊಳ್ಳುವ ನಿರ್ಧಾರವನ್ನು ಇರಾನ್‌ನ ಪ್ರಮುಖ ರಾಷ್ಟ್ರೀಯ ಭದ್ರತಾ ಮಂಡಳಿ (ಎಸ್‌ಎನ್‌ಎಸಿ) ಕೈಗೊಂಡಿತ್ತು.

ಇಸ್ರೇಲ್‌ ದಾಳಿಯಲ್ಲಿ ಹೆಜ್ಬುಲ್ಲಾ ನಾಯಕ ಹಸನ್‌ ನಸ್ರಲ್ಲಾ, ಬ್ರಿಗೇಡಿಯರ್‌ ಜನರಲ್‌ ಅಬ್ಟಾಸ್‌ ನಿಲೊ#àರುಷನ್‌ ಸೇರಿದಂತೆ ಹಲವು ಉಗ್ರ ಕಮಾಂಡರ್‌ಗಳು ಸಾವಿಗೀಡಾಗಿದ್ದರು. ಪ್ರತೀಕಾರವಾಗಿ ಇರಾನ್‌ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ಆರಂಭಿಸಿದೆ. ಅಲ್ಲದೇ ಈ ದಾಳಿ ಬಳಿಕ ಮತ್ತೆ ಪ್ರತಿದಾಳಿಗೆ ಮುಂದಾದರೆ ಇಸ್ರೇಲ್‌ ಅನ್ನು ಹೊಸಕಿ ಹಾಕುವುದಾಗಿ ಇರಾನ್‌ ಎಚ್ಚರಿಸಿದೆ.

ಹಿಮ್ಮೆಟ್ಟಿಸಿದ ಇಸ್ರೇಲ್‌
ಇರಾನ್‌ ಕ್ಷಿಪಣಿ ದಾಳಿಯನ್ನು ಇಸ್ರೇಲ್‌ ಕ್ಷಿಪಣಿ ನಿಗ್ರಹ ವ್ಯವಸ್ಥೆ (ಐರನ್‌ ಡೋಮ್‌) ಸಮರ್ಥವಾಗಿ ಹಿಮ್ಮೆಟ್ಟಿಸಿದೆ. ಟೆಲ್‌ ಅವಿವ್‌, ಜೆರುಸಲೇಮ್‌ ಮೇಲೆ ದಾಳಿ ಆರಂಭವಾಗು ತ್ತಿದ್ದಂತೆ ಬಂಕರ್‌ಗಳಲ್ಲಿ ಆಶ್ರಯ ಪಡೆಯು ವಂತೆ ಅಲ್ಲಿನ ಸರಕಾರ ಸೂಚಿಸಿತ್ತು. ಮಂಗಳ ವಾರ ರಾತ್ರಿ 11 ಗಂಟೆ ಬಳಿಕ ಮತ್ತೆ ಮಾಹಿತಿ ನೀಡಿದ ಇಸ್ರೇಲ್‌ ಸೇನೆ, ಈಗ ದಾಳಿಯ ಭೀತಿಯಿಲ್ಲ, ಆದರೆ ಆಶ್ರಯದಿಂದ ಹೊರಗೆ ಬರಬಾರದು ಎಂದು ತಿಳಿಸಿತು. ಈ ಮಧ್ಯೆ ಕ್ಷಿಪಣಿ ದಾಳಿಗೆ ಇರಾನ್‌ ಗಂಭೀರ ಪರಿಣಾಮ ಗಳನ್ನು ಎದುರಿಸಲಿದೆ ಎಂದು ಹೇಳಿದೆ.

ಈವರೆಗೆ 180 ಕ್ಷಿಪಣಿಗಳ ದಾಳಿ ನಡೆದಿದೆ. ಇದು ಆರಂಭಿಕ ಲೆಕ್ಕಾಚಾರ. ಈ ಸಂಖ್ಯೆ ಇನ್ನೂ ಹೆಚ್ಚಿರಬಹುದು ಎಂದು ಇಸ್ರೇಲ್‌ ಸೇನೆ ಹೇಳಿದೆ.

ಟೆಲ್‌ ಅವಿವ್‌ ಶೂಟೌಟ್‌
6 ಮಂದಿ ಸಾವು ಮಂಗಳವಾರ ಸಂಜೆ ಇಸ್ರೇಲ್‌ ರಾಜಧಾನಿ ಟೆಲ್‌ ಅವಿವ್‌ನಲ್ಲಿ ನಡೆದ ಶೂಟೌಟ್‌ನಲ್ಲಿ 6 ಮಂದಿ ಮೃತಪಟ್ಟಿದ್ದಾರೆಂದು ಇಸ್ರೇಲ್‌ ಪೊಲೀಸ್‌ ತಿಳಿಸಿದ್ದಾರೆ. ಶಂಕಿತರಿಬ್ಬರು ದಕ್ಷಿಣ ಟೆಲ್‌ ಅವಿವ್‌ನ ಜಾಫಾ ನೆರೆ ಹೊರೆಯಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಅವರೂ ಸತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಇರಾನ್‌ ಇಸ್ರೇಲ್‌ ಮೇಲೆ ಭೀಕರ ಕ್ಷಿಪಣಿ ದಾಳಿ ನಡೆಸುವ ಗಂಟೆಗಳ ಮೊದಲು ಈ ಗುಂಡಿನ ದಾಳಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಇಸ್ರೇಲ್‌ ಮೇಲೆ ಇರಾನ್‌ ದಾಳಿಗೆ ಅಮೆರಿಕ ಕೆಂಡ ಇರಾನ್‌ ಕ್ಷಿಪಣಿ ದಾಳಿ ಆರಂಭಿಸುತ್ತಿದ್ದಂತೆ ಇಸ್ರೇಲ್‌ಗೆ ನೆರವು ನೀಡಲು ಅಮೆರಿಕದ ಸೇನೆಗೆ ಅಧ್ಯಕ್ಷ ಜೋ ಬೈಡೆನ್‌ ಆದೇಶಿಸಿದ್ದಾರೆ. ಇರಾನ್‌ ಕ್ಷಿಪಣಿ ಗಳನ್ನು ಹೊಡೆದುರುಳಿಸುವಂತೆ ಸೂಚಿಸಿ ದ್ದಾರೆ. ಅಲ್ಲದೇ ಇರಾನ್‌ ನಡೆಸಿದ ದಾಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ, ಬೈಡೆನ್‌ ಸೇನೆಗೆ ಸನ್ನದ್ಧ ಸ್ಥಿತಿಯಲ್ಲಿರುವಂತೆ ಸೂಚಿಸಿ ದ್ದಾರೆ. ಅಮೆರಿಕ ಮಾತ್ರವಲ್ಲದೇ ಇತರಪಶ್ಚಿಮರಾಷ್ಟ್ರಗಳು ಇಸ್ರೇಲ್‌ ನೆರವಿಗೆ ಧಾವಿಸಿವೆ.

ವಿಶ್ವಸಂಸ್ಥೆ ಕಳವಳ
ಇಂದು ಸಭೆ ಇಸ್ರೇಲ್‌ ಮೇಲೆ ಇರಾನ್‌ ದಾಳಿ ನಡೆಸುತ್ತಿದ್ದಂತೆ ವಿಶ್ವ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಅಲ್ಲದೇ, ಬುಧವಾರ ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಇರಾನ್‌ ದಾಳಿ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವ ಎಂದು ಹೇಳಲಾಗುತ್ತಿದೆ. ಹಲವು ರಾಷ್ಟ್ರಗಳ ಯುದ್ಧ ವಿರಾಮಕ್ಕೆ ಒತ್ತಾಯಿಸಿವೆ.

ಏನೇನಾಯ್ತು?
-ಹೆಜ್ಬುಲ್ಲಾ ನಾಯಕ ಹಸನ್‌ ನಸ್ರಲ್ಲಾ ಹತ್ಯೆಗೆ ಇರಾನ್‌ ಪ್ರತೀಕಾರ
-ಇಸ್ರೇಲ್‌ ಮೇಲೆ ಏಕಾಏಕಿ 180ಕ್ಕೂ ಹೆಚ್ಚು ರಾಕೆಟ್‌ಗಳ ಮಳೆ ಸುರಿಸಿದ ಇರಾನ್‌
-ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಇಸ್ರೇಲ್‌ನ ಐರನ್‌ ಡೋಮ್‌
-ಮತ್ತೆ ಪ್ರತಿದಾಳಿ ಮಾಡಿದ್ರೆ ಹೊಸಕಿ ಹಾಕುತ್ತೇವೆ: ಇಸ್ರೇಲ್‌ಗೆ ಇರಾನ್‌
-ಗಂಭೀರ ಪರಿಣಾಮ ಎದುರಿಸಲು ಸಜ್ಜಾಗಿ: ಇರಾನ್‌ಗೆ ಇಸ್ರೇಲ್‌ ಎಚ್ಚರಿಕೆ
-ಪ್ರತೀಕಾರದ ಸಮಯ, ಸ್ಥಳ ನಾವು ನಿರ್ಧರಿಸುತ್ತೇವೆ: ಇಸ್ರೇಲ್‌
-ಇಸ್ರೇಲ್‌ ನೆರವಿಗೆ ಧಾವಿಸಿದ ಅಮೆರಿಕ, ಪಾಶ್ಚಿಮಾತ್ಯ ರಾಷ್ಟ್ರಗಳು

ಇರಾನ್‌ ಗುಪ್ತಚರ ಮುಖ್ಯಸ್ಥ ಇಸ್ರೇಲ್‌ ಸ್ಪೈ : ಮಾಜಿ ಅಧ್ಯಕ್ಷ‌
ಮೊಸಾದ್‌ನ ಕಾರ್ಯತಂತ್ರಗಳಿಗೆ ಠಕ್ಕರ್‌ ನೀಡಲು ಇರಾನ್‌ ಮೊಸಾದ್‌ ವಿರೋಧಿ ಗುಪ್ತಚರ ಸಂಸ್ಥೆ ಸ್ಥಾಪಿಸಿದ್ದು, ಅದರ ಮುಖ್ಯಸ್ಥನೇ ಮೊಸಾದ್‌ನ ಏಜೆಂಟ್‌ ಆಗಿದ್ದ ಎಂಬ ಸ್ಫೋಟಕ ಮಾಹಿತಿಯನ್ನು ಇರಾನ್‌ ಮಾಜಿ ಅಧ್ಯಕ್ಷ ಮಹಮೂದ್‌ ಅಹ್ಮ ದಿನೆ ಜಾದ್‌ ಹೊರಹಾಕಿದ್ದಾರೆ. 20 ಏಜೆಂಟರ್‌ ಮೊಸಾದ್‌ ವಿರೋಧಿ ಗುಪ್ತಚರ ಸಂಸ್ಥೆ ಮುಖ್ಯಸ್ಥನೇ ಇಸ್ರೇಲ್‌ ಗೂಢಚರ್ಯ ನಾಗಿದ್ದ. ಇರಾನ್‌ನಲ್ಲಿ ಇಸ್ರೇಲ್‌ ನಡೆ ಸಿದ ಕಾರ್ಯಾಚಣೆಗಳಿಗೆ ಮಾಹಿತಿ ರವಾನೆಯಾಗುತ್ತಿತ್ತು ಎಂದಿದ್ದಾರೆ.

ಟಾಪ್ ನ್ಯೂಸ್

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

BJP FLAG

Maharashtra; ಚುನಾವಣ ಅಖಾಡ ಸಿದ್ದ: ಬಿಜೆಪಿ ಪಾಲಿಗೆ ಈ ಬಾರಿ ಭಾರೀ ಸವಾಲಿನ ಸ್ಥಿತಿ!

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

3-hunsur

Hunsur: ವಿಚಿತ್ರ ಕರು ಜನನ

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

man went to feed the lion at Nigeria

Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.