![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 2, 2024, 6:07 AM IST
ನವದೆಹಲಿ: ಚೀನಾ ಗಡಿ ಪೂರ್ವ ಲಡಾಕ್ನಲ್ಲಿ ಪರಿಸ್ಥಿತಿಯು ಸ್ಥಿರವಾಗಿದೆಯೇ ಹೊರತು ಸಾಮಾನ್ಯವಾಗಿಲ್ಲ. ಈಗಲೂ ಅದು ಸೂಕ್ಷ್ಮತೆಯಿಂದ ಕೂಡಿದೆ ಎಂದು ಭೂಸೇನಾ ಮುಖ್ಯಸ್ಥ ಜ. ಉಪೇಂದ್ರ ದ್ವಿವೇದಿ ಹೇಳಿದ್ದಾರೆ.
ಚಾಣಕ್ಯ ಡಿಫೆನ್ಸ್ ಡಾಯಲಾಗ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಕಡೆಯಿಂದ ಸಕಾರಾತ್ಮಕ ಸಂಕೇತಗಳು ದೊರೆಯುತ್ತಿವೆ. ನಾವು ತಿಳಿದುಕೊಳ್ಳಬೇಕಾಗಿದ್ದು ಏನೆಂದರೆ, ರಾಜತಾಂತ್ರಿಕ ನಡೆಯು ನಮಗೆ ಆಯ್ಕೆಗಳನ್ನು ಮತ್ತು ಸಾಧ್ಯತೆಗಳನ್ನು ಒದಗಿಸುತ್ತದೆ. ಆದರೆ, ತಳಮಟ್ಟದಲ್ಲಿ ಜಾರಿಯ ವಿಷಯ ಬಂದಾಗ ಅದು ಎರಡೂ ಕಡೆಯ ಸೇನಾ ಕಮಾಂಡರ್ಗಳನ್ನು ಅವಲಂಬಿಸಿರುತ್ತದೆ ಎಂದರು.
ಪೂರ್ವ ಲಡಾಕ್ನಲ್ಲಿ ಈಗಲೂ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳಿಲ್ಲ. 2020ಕ್ಕಿಂತ ಮುಂಚೆ ಇದ್ದ ಸ್ಥಿತಿಯನ್ನು ಸ್ಥಾಪಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದರು. ಇದೇ ವೇಳೆ, ಹೆಜ್ಬುಲ್ಲಾ ಉಗ್ರರು ಬಳಸುತ್ತಿದ್ದ ಪೇಜರ್ ಸ್ಫೋಟಿಸಿದ ಇಸ್ರೇಲ್ ಸಾಹಸಕ್ಕೆ ಭೂಸೇನಾ ಮುಖ್ಯಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.