MUDA Case: ಕತ್ತಲಾದ ಮೇಲೆ ಜಗ್ಗಿದ್ಯಾಕೆ? ಬಗ್ಗಿದ್ಯಾಕೆ?: ಸಿಎಂಗೆ ನಾರಾಯಣಸ್ವಾಮಿ ಲೇವಡಿ
ನಿವೇಶನಗಳ ಮರಳಿಸಿರುವುದರಿಂದ ಅಪರಾಧ ಮನ್ನಾ ಆಗುವುದಿಲ್ಲ: ವಿಧಾನಪರಿಷತ್ ವಿಪಕ್ಷ ನಾಯಕ
Team Udayavani, Oct 2, 2024, 6:47 AM IST
ಬೆಂಗಳೂರು: “ನಾನು ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಏನೇ ಬಂದರೂ ಎದುರಿಸುತ್ತೇನೆ’ ಎನ್ನುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಕತ್ತಲಾದ ಮೇಲೆ ಜಗ್ಗಿದ್ಯಾಕೆ? ಬಗ್ಗಿದ್ಯಾಕೆ?’ ರಾತೋರಾತ್ರಿ ಇಂಥ ಪರಿವರ್ತನೆಗೆ ಕಾರಣವೇನು ? ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ನಿವೇಶನಗಳನ್ನು ಮುಡಾಕ್ಕೆ ಹಿಂತಿರುಗಿಸುವುದಾಗಿ ಅವರ ಪತ್ನಿ ಪತ್ರ ಕೊಟ್ಟಿದ್ದಾರೆ. ಆದರೆ ಅದರಲ್ಲಿ ದಿನಾಂಕವೇ ಇಲ್ಲ. ಆದ್ದರಿಂದ ಅದು ಖಾತ್ರಿಯೇನಲ್ಲ. ಇದರಿಂದ ನಿಮ್ಮ ಕಪಟತನ ಬಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾರೂ ಕೂಡ ಈ ರೀತಿ ಉದ್ಧಟತನ ತೋರಬಾರದು ಎಂದರು.
ವಾಲ್ಮೀಕಿ ನಿಗಮದ್ದು 187 ಕೋಟಿ ರೂ.ಗಳ ಹಗರಣವಲ್ಲ, 87 ಕೋಟಿ ರೂ. ಹಗರಣ ಎಂದು ಸದನದಲ್ಲೇ ಒಪ್ಪಿಕೊಂಡರು. ಮುಡಾದ ತಮ್ಮ ನಿವೇಶನಗಳಿಗೆ 62 ಕೋ.ರೂ. ಬರಬೇಕು; ಕೊಡುತ್ತೀರಾ ಎಂದು ಪತ್ರಕರ್ತರನ್ನು ಪ್ರಶ್ನಿಸಿದ್ದರು. ಈಗ ನಿವೇಶನ ಮರಳಿಸಿದ್ದಾರೆ. ಇದರಿಂದ ಅಪರಾಧ ಮನ್ನಾ ಆಗುವುದಿಲ್ಲ ಎಂದರು.
ಸಮರ್ಥಿಸಿದ ಎಲ್ಲರೂ ರಾಜೀನಾಮೆ ಕೊಡಲಿ: ಲೆಹರ್ ಸಿಂಗ್ ಆಗ್ರಹ
ಮುಡಾ ಪ್ರಕರಣದಲ್ಲಿ ಇಡೀ ಸಚಿವ ಸಂಪುಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಮಸ್ತ ಆಡಳಿತ ಯಂತ್ರವೇ ಸಮರ್ಥಿಸಿಕೊಂಡಿದ್ದು ಪ್ರತಿಯೊಬ್ಬರೂ ರಾಜೀನಾಮೆ ನೀಡಬೇಕು. ಇಲ್ಲವಾದರೆ ರಾಜ್ಯದ ಜನರ ಕ್ಷಮೆಯಾಚಿಸಬೇಕೆಂದು ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸೈಟ್ ವಾಪಸ್ ನೀಡಿದ್ದು,ಪಾರ್ವತಿಯವರ ತ್ಯಾಗ ಮನೋಭಾವನೆ ತೋರಿಸುತ್ತೆ: ಡಿ. ಸುಧಾಕರ್
Munirathna ಮನೆಯಲ್ಲಿ ಸಿಕ್ಕ ಪೆನ್ಡ್ರೈವ್ನಲ್ಲಿ ಖಾಸಗಿ ವಿಡಿಯೋ ಪತ್ತೆ?
Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ
Recruitment Test: ಪಿಎಸ್ಐ ಪರೀಕ್ಷೆ ಅಕ್ರಮ ತಡೆಗೆ ಇಎನ್ಟಿ ವೈದ್ಯರ ನಿಯೋಜನೆ!
Heat Wave: ರಾಜ್ಯ ರಾಜಧಾನಿ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕ ತಾಪಮಾನ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಬಿಗ್ಬಾಸ್ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್ ಧನರಾಜ್; ಅಂಥದ್ದೇನಾಯ್ತು
ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!
ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ
Muddebihal: ಗಾಂಧಿ ಜಯಂತಿಯಂದು ಪೊಲೀಸರಿಂದ ಮಾದರಿ ಕಾರ್ಯ
Kollywood: ಮೂವರು ಗಂಡಂದಿರಿಗೆ ವಿಚ್ಚೇದನ ಕೊಟ್ಟು 4ನೇ ಮದುವೆಗೆ ಸಜ್ಜಾದ ಖ್ಯಾತ ನಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.