Mangaluru: ಹೈಕೋರ್ಟ್ ಪೀಠ: ಹೋರಾಟಕ್ಕೆ ಸಿದ್ಧತೆ
Team Udayavani, Oct 2, 2024, 12:36 AM IST
ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆ ಬಲಗೊಳ್ಳುತ್ತಿದ್ದು ಮತ್ತೊಂದು ಹೋರಾಟಕ್ಕೆ ವೇದಿಕೆ ಸಜ್ಜಾಗುತ್ತಿದೆ.
6 ಜಿಲ್ಲೆಗಳಿಗೆ ಅನುಕೂಲ
ಹೈಕೋಟ್ ಪೀಠ ಮಂಗಳೂರಿನಲ್ಲಿ ಸ್ಥಾಪನೆಯಾದರೆ ದ.ಕ. ಜಿಲ್ಲೆ ಮಾತ್ರವಲ್ಲದೆ ಉಡುಪಿ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರಕನ್ನಡದವರಿಗೂ ಅನುಕೂಲವಾಗಲಿದೆ. ಅಕ್ಕಪಕ್ಕದ ಜಿಲ್ಲೆಯವರು ಮಂಗಳೂರಿಗೆ ಬರುವುದಕ್ಕೆ ಪೂರಕವಾಗಿ ಎಲ್ಲ ಅಗತ್ಯ ಸೌಕರ್ಯಗಳು ಇಲ್ಲಿವೆ ಎನ್ನುತ್ತಾರೆ ಮಂಗಳೂರಿನ ನ್ಯಾಯವಾದಿಗಳು.
ಶೇ.3 0ರಷ್ಟು ಪ್ರಕರಣಗಳು
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆ ಬಹುಕಾಲದ್ದು. 2008ರಲ್ಲಿಯೂ ಹೋರಾಟ ನಡೆದಿತ್ತು. ಅನಂತರವೂ ಹಲವಾರು ಬಾರಿ ಪ್ರಯತ್ನಗಳನ್ನು ನಡೆಸಲಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳ ಒಟ್ಟು ಪ್ರಕರಣಗಳು ಹೈಕೋರ್ಟ್ನ ಒಟ್ಟು ಪ್ರಕರಣಗಳ ಶೇ. 30ರಷ್ಟಿವೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸ್ಥಳಾವಕಾಶದ ಕೊರತೆಯೂ ಇಲ್ಲ. ಈಗ ಕೊಡಿಯಾಲಬೈಲ್ನಲ್ಲಿರುವ ಜಿಲ್ಲಾ ಕಾರಾಗೃಹ ಮುಡಿಪುವಿಗೆ ಸ್ಥಳಾಂತರವಾಗಲಿದೆ. ಹಾಗಾಗಿ ಕೊಡಿಯಾಲಬೈಲಿನ 6 ಎಕರೆ ಸ್ಥಳದಲ್ಲಿ ಪೀಠ ಸ್ಥಾಪನೆ ಮಾಡಬಹುದು ಎನ್ನುತ್ತಾರೆ ಮಂಗಳೂರು ವಕೀಲರ ಸಂಘದ ಹಾಲಿ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಮತ್ತು ಮಾಜಿ ಅಧ್ಯಕ್ಷ ಪೃಥ್ವಿರಾಜ್ ರೈ ಅವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ
D.K.,ಜಿಲ್ಲಾ ನಿ.ಸ.ನೌಕರರ ವೇದಿಕೆಯಿಂದ ಪ್ರತಿಭಟನೆ: ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲು ಆಗ್ರಹ
Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ
Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ
Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.