D Notification: ಮುಡಾಕ್ಕಿಂತ ದೊಡ್ಡ ಅಕ್ರಮ ಎಸಗಿದ್ದಾರೆ ಸಿಎಂ: ಕೇಂದ್ರ ಸಚಿವ ಎಚ್‌ಡಿಕೆ

ಹಿನಕಲ್‌ನಲ್ಲಿ ವಸತಿ ಶಾಲೆ ಜಾಗ ಡಿನೋಟಿಫಿಕೇಶನ್‌,  ಈ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಹೈಕೋರ್ಟಿನಲ್ಲಿ ನಿರಾಳ

Team Udayavani, Oct 2, 2024, 7:25 AM IST

HD-Kumaraswamy

ಹೊಸದಿಲ್ಲಿ: ಸಿದ್ದರಾಮಯ್ಯ ಚುನಾವಣೆಯ ಸಾಲ ತೀರಿಸಲು ಒಂದು ಕೋಟಿ ರೂ.ಗೆ ಮಾರಾಟ ಮಾಡಿದ ನಿವೇಶನ ಎಲ್ಲಿಂದ ಬಂದಿತ್ತು. ಮೈಸೂರಿನ ಹಿನಕಲ್ಲು ಗ್ರಾಮ ಪಂಚಾಯತ್‌ನಲ್ಲಿ ಬಡವರ ಮಕ್ಕಳಿಗೆ ವಸತಿ ಶಾಲೆ ನಿರ್ಮಾಣ ಮಾಡಲು ಭೂಮಿ ಡಿ ನೋಟಿಫಿಕೇಶನ್‌ ಮಾಡಿಸಿಕೊಂಡು ಅದನ್ನು ಸಿದ್ದರಾಮಯ್ಯ ಪಡೆದಿದ್ದಾರೆ. ಇದು 14 ನಿವೇಶನಗಳಿಗಿಂತ ದೊಡ್ಡ ಪ್ರಕರಣ. ಇದರ ಜತೆಗೆ ಇನ್ನೆರಡು ಪ್ರಕರಣಗಳಿವೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಊರಿಗೆ ಬುದ್ಧಿ ಹೇಳುವವರು ಇಲ್ಲಿ ಏನೇನು ಮಾಡಿದ್ದೀರಾ? ಈಗ ಚಾಮುಂಡಿ ಬೆಟ್ಟಕ್ಕೆ ತೆರಳಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.1988ರಲ್ಲಿ ಮುಡಾ ವಿಜಯನಗರ ಎರಡನೇ ಹಂತದ ಬಡಾವಣೆ ನಿರ್ಮಾಣಕ್ಕೆ ಹಿನಕಲ್ಲು ಗ್ರಾ.ಪಂ. ವ್ಯಾಪ್ತಿಯಲ್ಲಿ 535 ಎಕರೆ ಜಮೀನು ವಶಪಡಿಸಿ ಕೊಂಡಿತ್ತು. ಇದರಲ್ಲಿ ಬಡಾವಣೆ ನಿರ್ಮಾಣಗೊಂಡು ನಿವೇಶನ ಹಂಚಿಕೆಯಾದ ಸಂದರ್ಭದಲ್ಲಿ ಅಕ್ರಮ ನಡೆದಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿಯಾಗಿದ್ದು ಒಟ್ಟು 18 ಮಂದಿ ಆರೋಪಿಗಳಿದ್ದಾರೆ. ಕೆಳ ನ್ಯಾಯಾಲಯ ಪ್ರಕರಣದ ತನಿಖೆ ನಡೆಯಬೇಕು ಎಂದು ತೀರ್ಪು ನೀಡಿತ್ತು.

ಹೈಕೋರ್ಟ್‌ನಲ್ಲಿ ಈ ಅದೇಶವನ್ನು ಸಿದ್ದರಾಮಯ್ಯ ಪ್ರಶ್ನಿಸಿದಾಗ ಅವರಿಗೆ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ಮೈಕೆಲ್‌ ಡಿ’ಕುನ್ಹಾ ನೀಡಿದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಈ ನ್ಯಾಯಮೂರ್ತಿಗಳು ಸದ್ಯ ರಾಜ್ಯದಲ್ಲಿ ನಡೆದಿರುವ ಕೋವಿಡ್‌ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಒಂದು ದಿನಕ್ಕಾದರೂ ಜೈಲಿಗಟ್ಟುವ ಸಂಚು
ನಾನು ಜಾಮೀನು ಪಡೆದಿರುವುದು ತನಿಖೆ ಮಾಡ ದಂತೆ ಅಲ್ಲ. ಈ ಸರಕಾರ ಕೆಟ್ಟ ಅಧಿಕಾರಿಗಳಿಂದ ಏನು ಬೇಕಾದರೂ ಮಾಡಿಸುತ್ತದೆ. ನಮ್ಮ ವಕೀಲರು ಸೂಚನೆಯಂತೆ ಜಾಮೀನು ತೆಗೆದುಕೊಂಡಿದ್ದೇನೆಯೇ ಹೊರತು ತನಿಖೆ ಮಾಡದಂತೆ ಜಾಮೀನು ತೆಗೆದು ಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಹಿಂದೆ ಇದೇ
ಸಿದ್ದರಾಮಯ್ಯ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗಟ್ಟ‌ಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ ಅವರು ನನ್ನ ಜೈಲಿಗೆ ಕಳುಹಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್‌ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾ ದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಎಂದು ಚರ್ಚೆ ಮಾಡಲಾಗಿದೆ ಆರೋಪಿಸಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು: ಜೆಡಿಎಸ್‌
ತಪ್ಪೇ ಮಾಡಿಲ್ಲ, ಯಾರಿಗೂ ಜಗ್ಗುವುದಿಲ್ಲ; ಬಗ್ಗುವುದೂ ಇಲ್ಲ ಎಂದು ಮೊಂಡುತನ ತೋರುತ್ತಿದ್ದ ಸಿದ್ದರಾಮಯ್ಯ ಈಗ ಮುಡಾ ಹಗರಣ ತಮ್ಮ ಬುಡಕ್ಕೆ ಬರುತ್ತಿದ್ದಂತೆ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ 14 ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಇದು ಎನ್‌ಡಿಎ ಮೈತ್ರಿ ಪಕ್ಷವಾದ ಜೆಡಿಎಸ್‌ ಮತ್ತು ಬಿಜೆಪಿ ನಡೆಸಿದ ಮೈಸೂರು ಚಲೋ ಪಾದಯಾತ್ರೆಗೆ ಸಿಕ್ಕ ಗೆಲುವು ಎಂದು ಜೆಡಿಎಸ್‌ ವ್ಯಾಖ್ಯಾನಿಸಿದೆ.

ಟಾಪ್ ನ್ಯೂಸ್

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

BJP FLAG

Maharashtra; ಚುನಾವಣ ಅಖಾಡ ಸಿದ್ದ: ಬಿಜೆಪಿ ಪಾಲಿಗೆ ಈ ಬಾರಿ ಭಾರೀ ಸವಾಲಿನ ಸ್ಥಿತಿ!

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

3-hunsur

Hunsur: ವಿಚಿತ್ರ ಕರು ಜನನ

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

Temprature

Heat Wave: ರಾಜ್ಯ ರಾಜಧಾನಿ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕ ತಾಪಮಾನ!

loka

MUDA Case: ಲೋಕಾಯುಕ್ತದಿಂದ ಕೆಸರೆ ಗ್ರಾಮದ ವಿವಾದಿತ ಸ್ಥಳದಲ್ಲಿ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.