Western Ghat: ಡಾ.ಕಸ್ತೂರಿ ರಂಗನ್‌ ವರದಿ ತಿರಸ್ಕಾರ: ನಿರ್ಣಯ ಕೇಂದ್ರ ಸರಕಾರಕ್ಕೆ ರವಾನೆ

ಕೇಂದ್ರ ಸರಕಾರದ 6ನೇ ಕರಡು ಅಧಿಸೂಚನೆಗೂ ವಿರೋಧ, ಪರಿಸರ ಸೂಕ್ಷ್ಮ ವಲಯ ಸಂರಕ್ಷಣೆ ವಯನಾಡು ದುರಂತದ ನೆನಪು

Team Udayavani, Oct 2, 2024, 7:15 AM IST

western-Ghat

ಬೆಂಗಳೂರು: ಪಶ್ಚಿಮಘಟ್ಟಗಳ ಸಂರಕ್ಷಣೆ ಸಲುವಾಗಿ ಡಾ| ಕಸ್ತೂರಿ ರಂಗನ್‌ ನೀಡಿದ್ದ ವರದಿಯನ್ನು ತಿರಸ್ಕರಿಸಿರುವ ರಾಜ್ಯ ಸರಕಾರ, ಕೇಂದ್ರ ಸರಕಾರದ 6ನೇ ಕರಡು ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸಿದೆ.

ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದ ಈ ಕುರಿತ ನಿರ್ಣಯವನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿಕೊಟ್ಟಿದ್ದು, ಕಸ್ತೂರಿ ರಂಗನ್‌ ವರದಿ ಅನುಷ್ಠಾನ ಮಾಡುವ ಕೇಂದ್ರದ ಕರಡು ಅಧಿಸೂಚನೆಗೆ ನಮ್ಮ ವಿರೋಧವಿದೆ ಎಂಬುದನ್ನು ಮತ್ತೂಮ್ಮೆ ಸ್ಪಷ್ಟಪಡಿಸಿದೆ. ಉನ್ನತ ಮಟ್ಟದ ಕಾರ್ಯನಿರತ ತಂಡವು ಕೇವಲ ದೂರಸಂವೇದಿ ದತ್ತಾಂಶದ ಆಧಾರದ ಮೇಲೆ ಪಶ್ಚಿಮಘಟ್ಟಗಳ ಪ್ರದೇಶವನ್ನು ನಿಗದಿಪಡಿಸಿದೆ ಎಂಬುದು ರಾಜ್ಯ ಸರಕಾರದ ವಾದ. ಅಷ್ಟೇ ಅಲ್ಲದೆ, ಈಗಾಗಲೇ ವಿವಿಧ ಕಾನೂನುಗಳ ಅಡಿಯಲ್ಲಿ ಪರಿಸರ ಸೂಕ್ಷ್ಮ ವಲಯಗಳನ್ನು ಸಂರಕ್ಷಿಸು ತ್ತಿರುವುದರಿಂದ ಈ ವರದಿಯ ಅನುಷ್ಠಾನ ಬೇಕಿಲ್ಲ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದೆ.

ಸಂಪುಟದ ನಿರ್ಣಯ ಏನಾಗಿತ್ತು?
ಕೇಂದ್ರ ಸರಕಾರವು ಪಶ್ಚಿಮಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು 2024ರ ಜು. 31ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿ, ಆಕ್ಷೇಪಣೆ ಹಾಗೂ ಸಲಹೆಗಳನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿತ್ತು. ಡಾ| ಕೆ. ಕಸ್ತೂರಿ ರಂಗನ್‌ ವರದಿಯನ್ವಯ ಪರಿಸರ ಸೂಕ್ಷ್ಮ ಪ್ರದೇಶವನ್ನಾಗಿ ರಾಜ್ಯದ 20,688 ಚದರ ಕಿಲೋಮೀಟರ್‌ ಪ್ರದೇಶವನ್ನು ಗುರುತಿಸಿದ್ದು, ವಾಸ್ತವ ಲೋಪದೋಷಗಳ ತಿದ್ದುಪಡಿ ಅನಂತರ ಇದರ ಪ್ರಮಾಣವು 19,252.70 ಚ.ಕಿ.ಮೀ.ಗೆ ಇಳಿದಿತ್ತು. ಈಗಾಗಲೇ ವಿವಿಧ ಕಾನೂನುಗಳ ಅಡಿಯಲ್ಲಿ ಸಂರಕ್ಷಿತ ಪ್ರದೇಶ, ಅಧಿಸೂಚಿತ ಅರಣ್ಯ ಅಥವಾ ಪರಿಸರ, ಪರಿಸರ ಸೂಕ್ಷ್ಮ ವಲಯವಾಗಿ ಅಧಿಸೂಚಿಸಿ 16,036.72 ಚ.ಕಿ.ಮೀ. ಪ್ರದೇಶವನ್ನು ರಾಜ್ಯದಲ್ಲಿ ಸಂರಕ್ಷಿಸಲಾಗುತ್ತಿದೆ.

ವಯನಾಡು ದುರಂತ; ಮರುಚಿಂತನೆಯ ಮಾತು
ಈ ಹಿಂದೆ ಕೇರಳದ ವಯನಾಡಿನಲ್ಲಿ ದುರಂತ ಸಂಭವಿಸಿದಾಗ ಕಸ್ತೂರಿ ರಂಗನ್‌ ವರದಿ ಬಗ್ಗೆ ಮರುಚಿಂತನೆ ನಡೆಸುವ ಅವಶ್ಯಕತೆ ಇದೆ, ನಮ್ಮಲ್ಲೂ ರೆಸಾರ್ಟ್‌, ಹೋಂ ಸ್ಟೇಗಳ ತೆರವು ಕಾರ್ಯ ಆಗಬೇಕಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದರು. ಪಶ್ಚಿಮಘಟ್ಟ ಪ್ರದೇಶದ ಜನಪ್ರತಿನಿಧಿಗಳ ಸಭೆಯಲ್ಲಿ 10 ಜಿಲ್ಲೆಗಳ 1,499 ಗ್ರಾಮಗಳಿಗೆ ಈ ವರದಿಯಿಂದ ಕಷ್ಟವಾಗಲಿದ್ದು, ಯಾವುದೇ ಕಾರಣಕ್ಕೂ ಇದನ್ನು ಒಪ್ಪಬಾರದೆಂದು ಪಕ್ಷಾತೀತವಾಗಿ ಆಗ್ರಹ ವ್ಯಕ್ತವಾಗಿತ್ತು. ಈ ಎಲ್ಲ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕರಿಸಲು ಸಂಪುಟ ಉಪಸಮಿತಿ ಹಾಗೂ ಸೆ. 27ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿಯೂ ನಿರ್ಣಯ ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

BJP FLAG

Maharashtra; ಚುನಾವಣ ಅಖಾಡ ಸಿದ್ದ: ಬಿಜೆಪಿ ಪಾಲಿಗೆ ಈ ಬಾರಿ ಭಾರೀ ಸವಾಲಿನ ಸ್ಥಿತಿ!

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

3-hunsur

Hunsur: ವಿಚಿತ್ರ ಕರು ಜನನ

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

Temprature

Heat Wave: ರಾಜ್ಯ ರಾಜಧಾನಿ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕ ತಾಪಮಾನ!

HD-Kumaraswamy

D Notification: ಮುಡಾಕ್ಕಿಂತ ದೊಡ್ಡ ಅಕ್ರಮ ಎಸಗಿದ್ದಾರೆ ಸಿಎಂ: ಕೇಂದ್ರ ಸಚಿವ ಎಚ್‌ಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.