Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

ಬಸ್‌ಗಿಂತ ವಿಮಾನಯಾನವೇ ಅಗ್ಗ !

Team Udayavani, Oct 2, 2024, 7:45 AM IST

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

ಮಂಗಳೂರು: ನವರಾತ್ರಿ ಹಬ್ಬ ಸನ್ನಿಹಿತವಾಗುತ್ತಿರುವಂತೆ ಖಾಸಗಿ ಬಸ್‌ಗಳ ಪ್ರಯಾಣ ದರ ದುಪ್ಪಟ್ಟಾಗಿದೆ. ಹಬ್ಬಕ್ಕಾಗಿ ದೂರದೂರಿನಿಂದ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ. ಅದರಲ್ಲೂ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸು ವವರಿಗೆ ಖಾಸಗಿ ಬಸ್‌ನಲ್ಲಿ ಅತೀ ಹೆಚ್ಚಿನ ದರ 3,500 ರೂ. ಇದೆ.

ಪ್ರತಿ ಬಾರಿ ಹಬ್ಬದ ಸಮಯದಲ್ಲಿ ಟಿಕೆಟ್‌ ದರ ಏರಿಕೆ ಮಾಮೂಲಿಯಾಗಿದೆ. ಈ ಹಿಂದೆ ಗೌರಿ-ಗಣಪತಿ ಹಬ್ಬದ ಸಮಯದಲ್ಲೂ ಬಸ್‌ ಟಿಕೆಟ್‌ ದರ ಏರಿಕೆ ಮಾಡಲಾಗಿತ್ತು. ಇದೀಗ ನವರಾತ್ರಿ ಹಬ್ಬಕ್ಕೂ ದರ ಏರಿಕೆ ಮುಂದುವರಿದಿದೆ.

ವಾರಾಂತ್ಯ ದಲ್ಲಿ ಬಂದಿರುವು ದರಿಂದ ಬೆಂಗಳೂರಿನಿಂದ ವಿವಿಧೆಡೆಗೆ ಪ್ರಯಾಣ ಬೆಳೆಸುವವರ ಸಂಖ್ಯೆಯೂ ಅಧಿಕವಾಗಿದೆ. ಇದು ಕೂಡ ಟಿಕೆಟ್‌ ದರ ಹೆಚ್ಚಳಕ್ಕೆ ಕಾರಣವಾಗಿದೆ. ಅ.10ರಿಂದಲೇ ಕೆಲ ಖಾಸಗಿ ಬಸ್‌ಗಳ ಟಿಕೆಟ್‌ ದರಲ್ಲಿ ಏರಿಕೆಯಾಗಿದ್ದು ಹಬ್ಬ ಮುಗಿದು ವಾಪಸ್‌ ಬರುವವರೆಗೂ ದರ ಏರಿಕೆ ಬಿಸಿ ಮುಟ್ಟಲಿದೆ.

ಮಂಗಳೂರು ದಸರಾ ಕಣ್ತುಂಬಿಕೊಳ್ಳಲು ಸಾಮಾನ್ಯವಾಗಿ ದೂರ ದೂರಿನಿಂದ ಸಾರ್ವಜನಿಕರು ಆಗಮಿಸುತ್ತಾರೆ. ಈ ಬಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅ. 3ರಿಂದ 14ರ ವರೆಗೆ ಮಂಗಳೂರು ದಸರಾ ನಡೆಯಲಿದೆ. ಅ. 13ರಂದು ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಜರಗಲಿದೆ. ಈ ಬಾರಿ ಅ. 12 ಎರಡನೇ ಶನಿವಾರ ಮತ್ತು ಅ.13 ರವಿವಾರ ಇದ್ದ ಕಾರಣ ಅ.11ರಂದೇ ಬೆಂಗಳೂರು, ಮೈಸೂರು ಸಹಿತ ವಿವಿಧ ಕಡೆಗಳಿಂದ ಊರಿಗೆ ಜನ ಹೊರಡುತ್ತಾರೆ. ಇದನ್ನೇ ಬಂಡವಾಳವಾಗಿರಿಸಿದ ಖಾಸಗಿ ಬಸ್‌ಗಳು ಟಿಕೆಟ್‌ ದರ ಮೂರು ಪಟ್ಟು ಹೆಚ್ಚಿಸಿದೆ.

ಎಲ್ಲಿಗೆ ಎಷ್ಟು ದರ ಏರಿಕೆ?
ಖಾಸಗಿ ಬಸ್‌ಗಳಲ್ಲಿ ಅ. 11ರಂದು ಬೆಂಗಳೂರಿನಿಂದ ಮಂಗಳೂರಿಗೆ ಅತೀ ಹೆಚ್ಚಿನ ದರ 3,500 ರೂ. ಇದೆ. ಅದೇ ರೀತಿ, ಮಂಗಳೂರಿನಿಂದ ಮೈಸೂರಿಗೆ 1,200 ರೂ., ಬಳ್ಳಾರಿಗೆ 950 ರೂ., ಬಾಗಲಕೋಟೆ 1,500 ರೂ., ಕೊಪ್ಪಳ 2,600 ರೂ., ವಿಜಯಪುರ 1,500 ರೂ. ಇದೆ. ಹಬ್ಬಕ್ಕೆ ಕೆಲ ದಿನ ಬಾಕಿ ಇರುವಾಗಿನಿಂದಲೇ ಏರುಗತಿಯಲ್ಲಿ ಸಾಗಿರುವ ಬಸ್‌ ಪ್ರಯಾಣ ದರ ಮುಂದಿನ ದಿನಗಳಲ್ಲಿ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಆದರೆ ಕೆಎಸ್ಸಾರ್ಟಿಸಿಯಲ್ಲಿ ಪ್ರಯಾಣ ದರ ಸದ್ಯಕ್ಕೆ ಏರಿಕೆಯಾಗಿಲ್ಲ. ಸಾಮಾನ್ಯವಾಗಿ ಹಬ್ಬದ ಸಮಯದಲ್ಲಿ ಕಾರ್ಯಾಚರಿಸುವ ಹೆಚ್ಚುವರಿ ಬಸ್‌ಗಳಿಗೆ ಮಾಮೂಲಿ ದರಕ್ಕಿಂತ ಹೆಚ್ಚಿನ ದರ ಇರುತ್ತದೆ.

ವಿಮಾನ ಟಿಕೆಟ್‌ ದರದಲ್ಲಿ
ತುಸು ಹೆಚ್ಚಳ
ನವರಾತ್ರಿ ಸಮಯದಲ್ಲಿ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೆ ಹೋಲಿಕೆ ಮಾಡಿದರೆ, ವಿಮಾನ ಟಿಕೆಟ್‌ ದರದಲ್ಲಿ ಭಾರೀ ಏರಿಕೆ ಕಂಡುಬಂದಿಲ್ಲ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ 2,999 ರೂ. ಇದ್ದು ಅ. 11ರಂದು 3,239 ರೂ.ಗೆ ಏರಿಕೆ ಕಂಡಿದೆ. ರೈಲು ಪ್ರಯಾಣದಲ್ಲಿ ಟಿಕೆಟ್‌ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ಈಗಾಗಲೇ ಟಿಕೆಟ್‌ ಭರ್ತಿಯಾಗಿದ್ದು, ಅನೇಕ ಮಂದಿ ವೈಟಿಂಗ್‌ ಲಿಸ್ಟ್‌ನಲ್ಲಿ ಇದ್ದಾರೆ.

ಟಾಪ್ ನ್ಯೂಸ್

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

BJP FLAG

Maharashtra; ಚುನಾವಣ ಅಖಾಡ ಸಿದ್ದ: ಬಿಜೆಪಿ ಪಾಲಿಗೆ ಈ ಬಾರಿ ಭಾರೀ ಸವಾಲಿನ ಸ್ಥಿತಿ!

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

3-hunsur

Hunsur: ವಿಚಿತ್ರ ಕರು ಜನನ

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Mangaluru: ಉಗ್ರರಂತೆ ಕಳ್ಳರಿಗೂ ತರಬೇತಿ ಕೇಂದ್ರ! ಚಡ್ಡಿ ಗ್ಯಾಂಗ್‌ಗೆ ದರೋಡೆಯೇ ದೇವರು

Mangaluru: ಉಗ್ರರಂತೆ ಕಳ್ಳರಿಗೂ ತರಬೇತಿ ಕೇಂದ್ರ! ಚಡ್ಡಿ ಗ್ಯಾಂಗ್‌ಗೆ ದರೋಡೆಯೇ ದೇವರು

Mangaluru: ಪಂಜದಲ್ಲೊಬ್ಬರು ಆಧುನಿಕ ಗಾಂಧಿ

Mangaluru: ಪಂಜದಲ್ಲೊಬ್ಬರು ಆಧುನಿಕ ಗಾಂಧಿ

2

Urwa: ಪೊಲೀಸ್‌ ಕಾನ್‌ಸ್ಟೆಬಲ್‌ಗೆ ಜೀವಬೆದರಿಕೆ, ಕೊಲೆಗೆ ಯತ್ನ: ಪ್ರಕರಣ ದಾಖಲು

Protest: ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಬಂದ್‌

Protest: ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಬಂದ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.