MUDA scam: ಪಾರ್ವತಿ ಪತ್ರದ ಬೆನ್ನಲ್ಲೇ ಸೈಟ್‌ ಹಿಂದಕ್ಕೆ

ಮುಡಾಕ್ಕೆ ಪತ್ರ ಬರೆದ 24 ತಾಸುಗಳ ಒಳಗೆ ಎಲ್ಲ 14 ನಿವೇಶನಗಳ ಕ್ರಯಪತ್ರ ರದ್ದು

Team Udayavani, Oct 2, 2024, 6:35 AM IST

MUDA scam: ಪಾರ್ವತಿ ಪತ್ರದ ಬೆನ್ನಲ್ಲೇ ಸೈಟ್‌ ಹಿಂದಕ್ಕೆMUDA scam: ಪಾರ್ವತಿ ಪತ್ರದ ಬೆನ್ನಲ್ಲೇ ಸೈಟ್‌ ಹಿಂದಕ್ಕೆ

ಮೈಸೂರು: ತಮ್ಮ ಹೆಸರಿನಲ್ಲಿದ್ದ ಜಮೀನಿಗೆ ಬದಲಿಯಾಗಿ 14 ನಿವೇಶನ ಪಡೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಅಷ್ಟೂ ನಿವೇಶನಗಳನ್ನು ವಾಪಸ್‌ ನೀಡುವುದಾಗಿ ಮುಡಾಕ್ಕೆ ಪತ್ರ ಬರೆದ 24 ತಾಸುಗಳ ಒಳಗೆ ಆ ನಿವೇಶನಗಳ ಕ್ರಯಪತ್ರ ರದ್ದಾಗಿದೆ. ಮುಡಾದಲ್ಲಿ ಬದಲಿ ನಿವೇಶನ ಪಡೆದು ಮತ್ತೆ ವಾಪಸ್‌ ನೀಡಿರುವ ಮೊದಲ ಪ್ರಕರಣ ಇದಾಗಿದೆ.

ಸಿಎಂ ಮತ್ತು ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯದಲ್ಲಿ ಎಫ್ಐಆರ್‌ ದಾಖಲಾಗುತ್ತಿದ್ದಂತೆ ಸೋಮವಾರ ಸಂಜೆ ಸಿಎಂ ಅವರ ಪುತ್ರ ಯತೀಂದ್ರ ಅವರು ಮುಡಾ ಕಚೇರಿಗೆ ತೆರಳಿ ತಮ್ಮ ತಾಯಿಗೆ ನೀಡಲಾಗಿರುವ 14 ನಿವೇಶನ ಗಳನ್ನು ವಾಪಸ್‌ ನೀಡುವ ಪತ್ರವನ್ನು ಸಲ್ಲಿಸಿದ್ದರು.

ಬಳಿಕ ಮುಡಾ ಆಯುಕ್ತರು ಕಾನೂನು ಶಾಖೆಯ ಸಲಹೆಯಂತೆ ಪಾರ್ವತಿಯವರಿಗೆ ನೀಡಲಾಗಿರುವ 14 ಸೈಟ್‌ಗಳ ಕ್ರಯ ಪತ್ರ ರದ್ದುಪಡಿಸುವಂತೆ ಉಪನೋಂದಣಾಧಿಕಾರಿಗಳ ಕಚೇರಿಗೆ ಮಂಗಳವಾರ ಬೆಳಗ್ಗೆ ಪತ್ರ ಬರೆದಿದ್ದರು. 24 ತಾಸುಗಳ ಒಳಗೆ 14 ನಿವೇಶನಗಳ ಖಾತೆ ರದ್ದಾಗಿರುವುದು ವಿಶೇಷವಾಗಿದೆ.

ಸಲಹೆ ಪಡೆದು ನಿರ್ಧಾರ: ಈ ಸಂಬಂಧ “ಉದಯವಾಣಿ’ ಜತೆಗೆ ಮಾತನಾಡಿರುವ ಮುಡಾ ಆಯುಕ್ತ ರಘುನಂದನ್‌, ಡಾ| ಯತೀಂದ್ರ ಸೋಮವಾರ ನಮ್ಮ ಕಚೇರಿಗೆ ಆಗಮಿಸಿ 14 ಸೈಟ್‌ಗಳನ್ನು ಹಿಂದಿರು ಗಿಸುವ ಬಗ್ಗೆ ಪತ್ರ ನೀಡಿದ್ದರು. ಬಳಿಕ ನಿವೇಶನ ಹಿಂದಿರುಗಿಸಿದರೆ ವಾಪಸ್‌ ತೆಗೆದುಕೊಳ್ಳಬಹುದೇ ಎನ್ನುವ ಬಗ್ಗೆ ಕಾನೂನು ಸಲಹೆಗಾರರೊಂದಿಗೆ ಚರ್ಚಿ ಸಿದ್ದೆ. ಕಾನೂನಿನಲ್ಲಿ ವಾಪಸ್‌ ಪಡೆಯಲು ಅವಕಾಶವಿದೆ ಎಂದು ಹೇಳಿದ್ದರಿಂದ ಉಪನೋಂದಣಾಧಿಕಾರಿಗಳಿಗೆ ವಿವಾದಿತ 14 ನಿವೇಶನಗಳ ಖಾತೆ ರದ್ದು ಮಾಡುವಂತೆ ಪತ್ರ ಬರೆದು ತಿಳಿಸಿದ್ದೆ. ಅದರಂತೆ ಅವರು ಪ್ರಕ್ರಿಯೆ ಕೈಗೊಂಡಿದ್ದಾರೆ ಎಂದಿದ್ದಾರೆ.

ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್‌ ಪ್ರತಿಕ್ರಿಯಿಸಿ, 1991ರ ನಿಯಮ 8ರಲ್ಲಿ ಸ್ವ ಇಚ್ಛೆಯಿಂದ ನಿವೇಶನ ವಾಪಸ್‌ ಕೊಡಬಹುದು. ಹಾಗೆಯೇ ನಾವು ಆ ಸೈಟ್‌ಗಳನ್ನು ಪಡೆದುಕೊಳ್ಳಲು ಅವಕಾಶವಿದೆ. ನಮ್ಮ ಬಳಿ ಭೂ ಮಾಲಕರು
ಬಂದಿಲ್ಲ, ಅವರ ಸ್ಥಳಕ್ಕೆ ಹೋಗಿ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶವಿದೆ ಎಂದು ತಿಳಿಸಿದರು.

ಯಾರು ಕೊಟ್ಟರೂ ಪಡೆಯುತ್ತೇವೆ: ಬದಲಿ ನಿವೇಶನ ಪಡೆದು ಮತ್ತೆ ವಾಪಸ್‌ ನೀಡಿರುವುದು ಮುಡಾದಲ್ಲಿ ಮೊದಲ ಪ್ರಕರಣವಾಗಿದೆ. ಮುಂದೆ ಯಾರೇ ವಾಪಸ್‌ ಕೊಟ್ಟರೂ ಇಷ್ಟೇ ವೇಗವಾಗಿ ಪಡೆಯುತ್ತೇವೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಪಾರ್ವತಿಯವರು ವಾಪಸ್‌ ಮಾಡಿರುವ 14 ನಿವೇಶನಗಳನ್ನು ಬೇರೆಯವರಿಗೆ ಹಂಚಿಕೆ ಮಾಡಬಹುದೇ ಅಥವಾ ತನಿಖೆ ಮುಗಿಯುವವರೆಗೆ ಕಾಯಬೇಕೇ ಎಂಬ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತೇವೆ. ಜತೆಗೆ ಈ ಪ್ರಕ್ರಿಯೆ ಬಗ್ಗೆ ತನಿಖಾ ಸಂಸ್ಥೆಗಳಿಗೆ ಮಾಹಿತಿ ಕೊಡುತ್ತೇವೆ.
– ರಘುನಂದನ್‌,
ಮುಡಾ ಆಯುಕ್ತರು

ಟಾಪ್ ನ್ಯೂಸ್

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

BJP FLAG

Maharashtra; ಚುನಾವಣ ಅಖಾಡ ಸಿದ್ದ: ಬಿಜೆಪಿ ಪಾಲಿಗೆ ಈ ಬಾರಿ ಭಾರೀ ಸವಾಲಿನ ಸ್ಥಿತಿ!

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

3-hunsur

Hunsur: ವಿಚಿತ್ರ ಕರು ಜನನ

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

Temprature

Heat Wave: ರಾಜ್ಯ ರಾಜಧಾನಿ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕ ತಾಪಮಾನ!

HD-Kumaraswamy

D Notification: ಮುಡಾಕ್ಕಿಂತ ದೊಡ್ಡ ಅಕ್ರಮ ಎಸಗಿದ್ದಾರೆ ಸಿಎಂ: ಕೇಂದ್ರ ಸಚಿವ ಎಚ್‌ಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.