Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ


Team Udayavani, Oct 2, 2024, 6:00 AM IST

immifra

ರಾಜ್ಯದ ರಾಜಧಾನಿ ಬೆಂಗಳೂರು ಹೊರವಲಯವಾದ ಆನೇಕಲ್‌ನಲ್ಲಿ ಪಾಕಿಸ್ಥಾನ ಮೂಲದ ಕುಟುಂಬವೊಂದು ಅಕ್ರಮವಾಗಿ ವಾಸವಿದ್ದ ಪ್ರಕರಣ ಸೋಮವಾರ ಬೆಳಕಿಗೆ ಬಂದಿದೆ. ಸದ್ಯ ಈ ನಾಲ್ವರನ್ನೂ ಪೊಲೀಸರು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಮಾತ್ರವಲ್ಲದೆ ರಾಜ್ಯದ ಜನತೆಯನ್ನು ಆತಂಕಕ್ಕೀಡು ಮಾಡಿದೆ. ಹಿಂದೂಗಳ ಹೆಸರಿನಲ್ಲಿ ಠಿಕಾಣಿ ಹೂಡುವುದರ ಜತೆಯಲ್ಲಿ ಭಾರತೀಯ ನಾಗರಿಕರಿಗೆ ನೀಡಲಾಗುವ ವಿವಿಧ ಸವಲತ್ತು ಮತ್ತು ಪ್ರಮಾಣಪತ್ರಗಳನ್ನು ಈ ಕುಟುಂಬ ಹೊಂದಿದ್ದುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಕಳೆದೊಂದು ದಶಕದಿಂದೀಚೆಗೆ ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಿರುವುದನ್ನು ಸರಕಾರದ ವಿವಿಧ ಇಲಾಖೆಗಳ ಅಂಕಿಅಂಶಗಳೇ ದೃಢೀಕರಿಸಿವೆ. ಅದರಲ್ಲೂ ಮುಖ್ಯವಾಗಿ ನೆರೆಯ ಬಾಂಗ್ಲಾದೇಶದಿಂದ ನೂರಾರು ಸಂಖ್ಯೆಯಲ್ಲಿ ವಲಸಿಗರು ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ ಮಲೆನಾಡು ಜಿಲ್ಲೆಗಳಲ್ಲೂ ವಾಸ್ತವ್ಯ ಹೂಡಿದ್ದಾರೆ. ಈ ಪೈಕಿ ಬಹುತೇಕರು ಪಶ್ಚಿಮ ಬಂಗಾಲ ಅಥವಾ ಈಶಾನ್ಯ ರಾಜ್ಯಗಳ ನಿವಾಸಿಗಳೆಂದು ಹೇಳಿಕೊಳ್ಳುತ್ತಿರುವರಾದರೂ ಇದು ವಾಸ್ತವಕ್ಕೆ ದೂರವಾದ ವಿಷಯ ಎಂಬುದು ಸ್ಥಳೀಯರಿಗೆ ತಿಳಿದಿದೆ. ಆದರೆ ಕಾರ್ಮಿಕರ ಕೊರತೆಯ ಹಿನ್ನೆಲೆಯಲ್ಲಿ ಅನ್ಯ ಮಾರ್ಗವಿಲ್ಲದೆ ಸ್ಥಳೀಯ ಬಿಲ್ಡರ್‌ಗಳು ಹಾಗೂ ತೋಟ ಮತ್ತು ಎಸ್ಟೇಟ್‌ಗಳ ಮಾಲಕರು ಈ ಅಕ್ರಮ ವಲಸಿಗರನ್ನೇ ಅವಲಂಬಿಸಿದ್ದಾರೆ.

ಅಕ್ರಮವಾಗಿ ರಾಜ್ಯಕ್ಕೆ ಬಂದು ಜೀವನೋಪಾಯ ಕಂಡುಕೊಳ್ಳುವುದರ ಜತೆಯಲ್ಲಿ ಭಾರತೀಯ ನಾಗರಿಕರಿಗೆ ನೀಡಲಾಗುತ್ತಿರುವ ಆಧಾರ್‌, ಪಾನ್‌, ವಾಹನ ಚಾಲನಾ ಪರವಾನಿಗೆ ಪತ್ರ, ರೇಶನ್‌ ಕಾರ್ಡ್‌, ಪಾಸ್‌ಪೋರ್ಟ್‌ ಆದಿಯಾಗಿ ಎಲ್ಲ ತೆರನಾದ ದಾಖಲೆಪತ್ರಗಳನ್ನು ಪಡೆದುಕೊಂಡಿದ್ದಾರೆ. ಪ್ರತಿಯೊಂದು ಚುನಾವಣೆ ಎದುರಾದಾಗಲೂ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿರುವ ವಿಚಾರ ಮುನ್ನೆಲೆಗೆ ಬರುತ್ತದೆಯಾದರೂ ಇವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿತ ಇಲಾಖೆಗಳು ಆಸಕ್ತಿ ತೋರದಿರುವುದು ವಿಪರ್ಯಾಸವೇ ಸರಿ.

ಕಳೆದ ಕೆಲವು ವರ್ಷಗಳ ಅವಧಿಯಲ್ಲಿ ರಾಜ್ಯದ ವಿವಿಧೆಡೆ ನಡೆದ ಹಿಂಸಾಚಾರಗಳು, ದುಷ್ಕೃತ್ಯಗಳಲ್ಲಿ ಅಕ್ರಮ ವಲಸಿಗರ ಕೈವಾಡವಿರುವುದು ಮತ್ತು ಈ ಪ್ರಕರಣಗಳ ಆರೋಪಿಗಳು ನಿಷೇಧಿತ ಉಗ್ರಗಾಮಿ ಸಂಘಟನೆಗಳೊಂದಿಗೆ ನಂಟು ಹೊಂದಿರುವುದು ತನಿಖಾ ಸಂಸ್ಥೆಗಳ ಗಮನಕ್ಕೆ ಬಂದಿದೆ. ಇಷ್ಟೆಲ್ಲ ಆಗಿಯೂ ಪಾಕಿಸ್ಥಾನಿ ಮೂಲದ ಕುಟುಂಬವೊಂದು ಆರು ವರ್ಷಗಳಿಂದ ರಾಜ್ಯದಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದುದರ ಹಿಂದೆ ರಾಜಕೀಯ ಹಿತಾಸಕ್ತಿ ಅಡಗಿರುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು. ಇದೇ ವೇಳೆ ಪಾಕ್‌ ಪ್ರಜೆಗಳು ಹಿಂದೂಗಳ ಹೆಸರಿನಲ್ಲಿ ರಹಸ್ಯವಾಗಿ ನೆಲೆಸಿದುದು ಕೂಡ ಶಾಂತಿ-ಸೌಹಾರ್ದತೆಗೆ ಭಂಗ ತರುವ ವಿಷಯವೇ.

ಇನ್ನಾದರೂ ಸರಕಾರ ಎಚ್ಚೆತ್ತುಕೊಂಡು, ಪ್ರಕರಣವನ್ನು ಆಮೂಲಾಗ್ರ ತನಿಖೆ ನಡೆಸಬೇಕು. ಈ ಕುಟುಂಬದ ಸಂಪೂರ್ಣ ಹಿನ್ನೆಲೆಯನ್ನು ಕೆದಕುವುದರ ಜತೆಯಲ್ಲಿ ಇದರ ಹಿಂದೆ ಯಾರ್ಯಾರ ಕೈವಾಡವಿದೆ, ಈ ಕುಟುಂಬ ಸಂಪರ್ಕದಲ್ಲಿರುವ ಜನರು, ಸಂಘಟನೆಗಳು ಇವೆಲ್ಲದರ ಬಗೆಗೆ ಕೂಲಂಕಷ ತನಿಖೆ ನಡೆಸಬೇಕು. ಆಡಳಿತ ವ್ಯವಸ್ಥೆಯಿಂದ ಇಂತಹ ಬಲುದೊಡ್ಡ ಪ್ರಮಾದ ಹೇಗಾಯಿತು ಎಂಬ ಬಗ್ಗೆಯೂ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.

ಇದೇ ವೇಳೆ ರಾಜ್ಯದಲ್ಲಿ ನೆಲೆಸಿರುವ ಎಲ್ಲ ಅಕ್ರಮ ವಲಸಿಗರ ಬಗೆಗೆ ಸಮಗ್ರ ಮಾಹಿತಿಯನ್ನು ಕಲೆಹಾಕಿ ಅವರನ್ನು ಗಡೀಪಾರು ಮಾಡಲು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು. ಇಂತಹ ಪ್ರಕರಣಗಳನ್ನು ಮೊಳಕೆಯಲ್ಲಿಯೇ ಚಿವುಟಿ ಹಾಕದಿದ್ದಲ್ಲಿ ಭವಿಷ್ಯದಲ್ಲಿ ಇದು ರಾಜ್ಯದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಬಲುದೊಡ್ಡ ಅಪಾಯವಾಗಿ ಮಾರ್ಪಡಲಿದೆ ಎಂಬುದನ್ನು ರಾಜ್ಯ ಸರಕಾರ ಮರೆಯಬಾರದು.

ಟಾಪ್ ನ್ಯೂಸ್

1-wweqwe

Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake-Medicine

Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ

UN-Assembly

UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ

WHO

Permanent Member: ಭದ್ರತಾ ಮಂಡಳಿ ಖಾಯಂ ಸದಸ್ಯತ್ವ: ಭಾರತಕ್ಕೆ ಆನೆಬಲ

Fake-Medicine

Quality Poor Medicine: ಮಾರುಕಟ್ಟೆಗೆ ನಕಲಿ ಔಷಧ ಪ್ರವೇಶ ತಪ್ಪಿಸಿ

railaw

Indian Railway: ರೈಲು ಹಳಿ ತಪ್ಪಿಸುವ ಯತ್ನ ಆಮೂಲಾಗ್ರ ತನಿಖೆ ಅಗತ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-wweqwe

Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು

online

Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.