Maharashtra; ಚುನಾವಣ ಅಖಾಡ ಸಿದ್ದ: ಬಿಜೆಪಿ ಪಾಲಿಗೆ ಈ ಬಾರಿ ಭಾರೀ ಸವಾಲಿನ ಸ್ಥಿತಿ!

ಮಹಾ ಕದನ ಕೋಲಾಹಲ.. ಉತ್ಸಾಹದಲ್ಲಿರುವ ಕಾಂಗ್ರೆಸ್ ಗೆ ಮಿತ್ರ ಪಕ್ಷಗಳ ಬಲ..

ವಿಷ್ಣುದಾಸ್ ಪಾಟೀಲ್, Oct 2, 2024, 11:24 AM IST

BJP FLAG

ಮಹಾರಾಷ್ಟ್ರದಲ್ಲಿ ಸದ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಷ್ಟೇ ಬಾಕಿ ಉಳಿದಿದ್ದು ಚುನಾವಣ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನವೆಂಬರ್ ಅಂತ್ಯದ ಒಳಗೆ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ಆರಂಭಿಸಿವೆ. ಇನ್ನೇನು ಪಕ್ಷಾಂತರ ಪರ್ವವೂ ನಿರೀಕ್ಷೆಯಂತೆ ಹೆಚ್ಚಾಗುವ ಲಕ್ಷಣಗಳಿವೆ. ನಾಯಕರು ಮಾತ್ರವಲ್ಲದೆ ತಳಮಟ್ಟದ ಸಾವಿರಾರು ಕಾರ್ಯಕರ್ತರು ಯಾರಿಗೆ ನಿಷ್ಠೆ ತೋರುವುದು ಎನ್ನುವ ಗೊಂದಲದಲ್ಲಿಯೂ ಇದ್ದಾರೆ. ಪ್ರಮುಖ ಪಕ್ಷಗಳ ವಿಭಜನೆ, ಲೋಕಸಭಾ ಚುನಾವಣೆಯಲ್ಲಿನ ಅನಿರೀಕ್ಷಿತ ಫಲಿತಾಂಶ ಈ ಮಟ್ಟಿಗಿನ ಗೊಂದಲಕ್ಕೆ ಕಾರಣವಾಗಿದೆ.

ಮುಂಬರುವ ಚುನಾವಣೆ ಆಡಳಿತಾರೂಢ ಬಿಜೆಪಿ-ಶಿವಸೇನೆ-ಎನ್‌ಸಿಪಿ(ಅಜಿತ್ ಪವರ್) ಮೈತ್ರಿಕೂಟ ಮತ್ತು ಕಾಂಗ್ರೆಸ್‌, ಶಿವಸೇನೆ (UBT) ಮತ್ತು ಶರದ್‌ ಪವಾರ್‌ ಅವರ ಎನ್‌ಸಿಪಿ ಬಣವನ್ನು ಒಳಗೊಂಡ ವಿಪಕ್ಷಗಳ ಮಹಾ ವಿಕಾಸ್‌ ಅಘಾಡಿ (MVA) ನಡುವೆ ಬಲು ದೊಡ್ಡ ಸಮರಕ್ಕೆ ಅಖಾಡ ಸಿದ್ಧವಾಗಿದೆ.

ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಎಂವಿಎ ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ 30 ಸ್ಥಾನಗಳನ್ನು ಗೆದ್ದು ಭಾರೀ ಶಾಕ್ ನೀಡಿರುವುದು ಮಹಾ ವಿಕಾಸ್‌ ಅಘಾಡಿಗೆ ವಿಶ್ವಾಸ ಹೆಚ್ಚಿಸಿದ್ದು, ನಾಯಕತ್ವ ಸೇರಿ ಹಲವು ವಿಚಾರಗಳು ಬಿಜೆಪಿ ಪಾಳಯಕ್ಕೆ ಸವಾಲಾಗಿ ಪರಿಣಮಿಸಿದೆ

ಬಿಜೆಪಿಗೆ ವಿಪಕ್ಷಕ್ಕಿಂತ ಸ್ವಪಕ್ಷೀಯರದ್ದೇ ಸವಾಲು

ಶಿವಸೇನೆ(ಶಿಂಧೆ ಬಣ )ಹಿಂದೆಯೂ ಮೈತ್ರಿ ಮಾಡಿಕೊಂಡ ಸ್ಥಾನಗಳು ಸುಲಭವಾಗಿ ಪರಿಹರಿಸಿಕೊಳ್ಳಬಹುದು ಆದರೆ ಅಜಿತ್ ಪವಾರ್ ಬಣದ ಶಾಸಕರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳು ಬಿಜೆಪಿಗೆ ಸವಾಲಾಗಿ ಪರಿಣಮಿಸಿವೆ. ಈಗಾಗಲೇ ಅಜಿತ್ ಪವಾರ್ ಅವರು ಬಿಜೆಪಿ ಪಾಳಯಕ್ಕೆ ಬಂದಿರುವುದೇ ಕೇಸರಿ ಪಾಳಯದ ಹಿನ್ನಡೆಗೆ ಕಾರಣ ಎಂದು ಹಲವರು ಹೇಳಿಕೊಂಡಿದ್ದಾರೆ. ಅಜಿತ್ ಪವಾರ್ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿರುವ ಬಿಜೆಪಿ ಕಾರ್ಯಕರ್ತರು ಮತ್ತು ಕಳೆದ ಬಾರಿಯ ಸೋತ ಬಿಜೆಪಿ/ ಶಿವಸೇನೆ ಅಭ್ಯರ್ಥಿಗಳ ಮನವೊಲಿಸುವುದೂ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಕಳೆದ ಬಾರಿಯೂ ಬಿಜೆಪಿಗೆ ಮೈತ್ರಿಯಲ್ಲಿ ಕಿರಿಕ್
ಕಳೆದ ವಿಧಾನಸಭಾ ಚುನಾವಣೆ ವೇಳೆಯೂ ಬಿಜೆಪಿಗೆ ಮೈತ್ರಿಯಲ್ಲಿ ಸವಾಲು ಎದುರಾಗಿತ್ತು. ಸಿಂಧದುರ್ಗ ಭಾಗದಲ್ಲಿ ಶಿವಸೇನೆ ನಾನಾ ಕಾರಣಕ್ಕಾಗಿ ಪ್ರತ್ಯೇಕ ಸ್ಪರ್ಧೆಯನ್ನೂ ಮಾಡಿತ್ತು. ಚುನಾವಣೆ ನಡೆದ ಕೆಲ ಕಾಲದ ಬಳಿಕ ಉದ್ಧವ್ ಠಾಕ್ರೆ ಮೈತ್ರಿಕೂಟದಿಂದ ದೂರವಾಗಿದ್ದರು. ಈ ಬಾರಿಯೂ ಹಲವು ಲೆಕ್ಕಾಚಾರಗಳನ್ನು ಮಾಡಲಾಗುತ್ತಿದೆ.

ಬಿಜೆಪಿಗೆ ಕಠಿನ ಸವಾಲು
ಒಂದೆಡೆ ಮಿತ್ರಪಕ್ಷಗಳನ್ನು ಸಮಾಧಾನ ಪಡಿಸಿ ಮನವೊಲಿಸಿಕೊಳ್ಳುವುದು, ಇನ್ನೊಂದೆಡೆ ಕಾರ್ಯಕರತರನ್ನು ಉಳಿಸಿಕೊಂಡು ಹೋರಾಟ ಸಂಘಟಿಸುವುದು ಮಾತ್ರವಲ್ಲದೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ಬಿಜೆಪಿ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಒಂದೊಮ್ಮೆ ಹೆಚ್ಚಿನ ಸ್ಥಾನಗಳೂ ಗೆದ್ದರೂ ರಾಜಕೀಯ ಸಾರಥ್ಯ ಯಾರಿಗೆ ಎನ್ನುವ ಗೊಂದಲವೂ ಪಕ್ಷದಲ್ಲಿ ಮಾತ್ರವಲ್ಲದೆ ಮಹಾರಾಷ್ಟ್ರದ ಮತದಾರಲ್ಲಿ ಹೊಕ್ಕಿದೆ. ಇದಕ್ಕೆ ಕಾರಣವಾದ ವಿಚಾರ ಹೆಚ್ಚಿನ ಸ್ಥಾನಗಳೂ ಹೊಂದಿದ್ದರೂ ಶಿವಸೇನೆ ವಿಭಜನೆ ಬಳಿಕ ಏಕನಾಥ್ ಶಿಂಧೆ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಿ, ದೇವೇಂದ್ರ ಫಡ್ನವಿಸ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿದ್ದು. ಈ ಲೆಕ್ಕಾಚಾರ ಲೋಕಸಭಾ ಚುನಾವಣೆಯಲ್ಲಿ ಫಲಪ್ರದವಾಗಲಿಲ್ಲ ಎನ್ನುವುದು ಸ್ಪಷ್ಟವಾಯಿತು.

ಆಂತರಿಕ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿ!

ಆಂತರಿಕ ಭಿನ್ನಾಭಿಪ್ರಾಯಗಳಿಂದಲೇ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆ ಮಾಡದ ರೀತಿಯಲ್ಲಿ ಮೈತ್ರಿಕೂಟಕ್ಕೆ ಹಿನ್ನಡೆಯಾದ ವಿಚಾರ ಬಿಜೆಪಿ ಉನ್ನತ ನಾಯಕತ್ವಕ್ಕೂ ಸ್ಪಷ್ಟವಾಗಿದ್ದು, ಎಲ್ಲ ಭಿನ್ನಾಭಿಪ್ರಾಯಗಳನ್ನು ಬಗೆ ಹರಿಸಿಕೊಂಡು ಕೆಲಸ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

ಕಾರ್ಯಕರ್ತರು ವಿವಿಧ ದಿಕ್ಕುಗಳಲ್ಲಿ ಕಾರ್ಯನಿರ್ವಹಿಸುವ ಸಂಘಟನೆಯು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಪಕ್ಷದ ಸಭೆಯಲ್ಲೇ ಶಾ ಅವರು ಸಲಹೆ ನೀಡಿರುವುದಾಗಿ ಬಿಜೆಪಿ ಮೂಲಗಳು ಹೇಳಿವೆ.

2019ರಲ್ಲಿ ಮಹಾರಾಷ್ಟ್ರದಲ್ಲಿ ಅವಿಭಜಿತ ಶಿವಸೇನೆಯೊಂದಿಗೆ ಚುನಾವಣ ಪೂರ್ವ ಮೈತ್ರಿ ಮಾಡಿಕೊಂಡು ಬಿಜೆಪಿ ಸ್ಪರ್ಧಿಸಿದ್ದ 164 ವಿಧಾನಸಭಾ ಕ್ಷೇತ್ರಗಳ ಪೈಕಿ 105ರಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. . ಮುಂಬೈನ 36 ವಿಧಾನಸಭಾ ಸ್ಥಾನಗಳ ಪೈಕಿ ಕೇಸರಿ ಪಕ್ಷ 16 ಸ್ಥಾನಗಳನ್ನು ಗೆದ್ದಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ, ಸ್ಪರ್ಧಿಸಿದ 28 ಲೋಕಸಭಾ ಸ್ಥಾನಗಳ ಪೈಕಿ ಕೇವಲ ಒಂಬತ್ತನ್ನು ಮಾತ್ರ ಗೆದ್ದು ಭಾರೀ ಆಘಾತ ಅನುಭವಿಸಿದೆ.

ಸದ್ಯದ ರಾಜಕೀಯ ಪಕ್ಷಗಳ ಬಲಾಬಲ

288 ಸದಸ್ಯ ಬಲದ ಸದನದಲ್ಲಿ ಬಿಜೆಪಿ ಸದ್ಯ ಹೆಚ್ಚಿನ ಶಾಸಕರ ಬಲ ಹೊಂದಿದ್ದು, ಶಿವಸೇನೆ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹಾಯುತಿ (ಎನ್ ಡಿಎ) ಸರಕಾರ ಮುನ್ನಡೆಸುತ್ತಿದೆ. ಬಿಜೆಪಿ 102 ಶಾಸಕರನ್ನು ಹೊಂದಿದ್ದು, ಶಿಂಧೆ ಸೇನೆ 38, ಅಜಿತ್ ಪವಾರ್ ಬಣದ ಎನ್ ಸಿಪಿ 40 ಶಾಸಕರ ಬಲ ಸರ್ಕಾರಕ್ಕಿದೆ. ಮೈತ್ರಿಕೂಟದ ಒಟ್ಟು 202 ಶಾಸಕರ ಭರ್ಜರಿ ಬಹುಮತದೊಂದಿಗೆ ಸರಕಾರ ಮುನ್ನಡೆಸುತ್ತಿದೆ. ಇಷ್ಟು ಬಲವಿದ್ದರೂ ಲೋಕಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ರಣತಂತ್ರದ ಎದುರು ಮೈತ್ರಿಕೂಟ ಹಿನ್ನಡೆ ಅನುಭವಿಸಿತ್ತು.

ವಿಪಕ್ಷ ಮಹಾ ವಿಕಾಸ್ ಅಘಾಡಿಯಲ್ಲಿ ಸದ್ಯ 71 ಶಾಸಕರ ಬಲವಿದೆ. ಕಾಂಗ್ರೆಸ್ 37, ಶಿವಸೇನೆ (ಉದ್ಧವ್ ಠಾಕ್ರೆ ಬಣ) 16, ಶರದ್ ಪವರ್ ಎನ್ ಸಿಪಿ 12 ಶಾಸಕರನ್ನು ಹೊಂದಿದೆ. ಸದ್ಯ 15 ಸ್ಥಾನಗಳು ಖಾಲಿ ಇದ್ದು, ಇಬ್ಬರು ಓವೈಸಿ ಅವರ ಎಐಎಂಐಎಂ ಶಾಸಕರಿದ್ದಾರೆ.

ಟಾಪ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

1-a-souti

India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

1-pawan-kalyana

Andhra DCM 11 ದಿನಗಳ ವ್ರತ; ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

10-shirva

Shirva: ಬಂಟಕಲ್ಲು ರಕ್ತದಾನ ಶಿಬಿರ- ರಕ್ತದಾನದಿಂದ ಜೀವ ಉಳಿಸುವ ಕಾರ್ಯ: ಕಾಪು ತಹಶೀಲ್ದಾರ್‌

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

1-a-souti

India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.