Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!
Team Udayavani, Oct 2, 2024, 12:12 PM IST
ಚಂಡೀಗಢ: ಕಳ್ಳತನ (Theft) ಮಾಡಲು ಮನೆಯೊಳಗೆ ನುಗ್ಗಲು ಯತ್ನಿಸಿದ ಮೂವರನ್ನು ಮಹಿಳೆಯೊಬ್ಬರು ತನ್ನ ದಿಟ್ಟತನ ಹಾಗೂ ಚಾಣಾಕ್ಷತನ ತಡೆ ಹಿಡಿದಿರುವ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಂಜಾಬ್ನ ಅಮೃತಸರದ (Amritsar) ವರ್ಕಾ ಪ್ರದೇಶದಲ್ಲಿರುವ ಮನೆಯೊಂದಕ್ಕೆ ಹಾಡಹಗಲೇ ಮೂವರು ಮುಸುಕುಧಾರಿ ಕಳ್ಳರು ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಮಹಿಳೆ ಟೆರೇಸ್ ಮೇಲೆ ಬಟ್ಟೆ ಒಣಗಿಸುತ್ತಿದ್ದರು.
ಮಹಿಳೆ ಟೆರೇಸ್ ಮೇಲೆ ಬಟ್ಟೆ ಒಣಗಿಸುತ್ತಿದ್ದಾಗ ತನ್ನ ಮನೆಯ ಹೊರಗೆ ಮೂವರು ಮುಸುಕುಧಾರಿ ಬರುವುದನ್ನು ಮಹಿಳೆ ಗಮನಿಸಿದ್ದಾರೆ. ಮೂವರಲ್ಲಿ ಒಬ್ಬಾತ ಗೇಟ್ ತೆರೆದು ಸೀದಾ ಬಂದಿದ್ದಾನೆ. ಇದನ್ನು ನೋಡಿದ ಕೂಡಲೇ ಮಹಿಳೆ ಟೆರೇಸ್ ನಿಂದ ಕೆಳಗೆ ಬಂದು ಮೊದಲು ಬಾಗಿಲು ಬಂದ್ ಮಾಡಿದ್ದಾರೆ.
अमृतसर में एक महिला ने चोरों को बहादुरी से सबक सिखाया। चोरों की कोशिशों के बावजूद, महिला की दिलेरी उनके लिए भारी पड़ी…#amritsar #thief pic.twitter.com/l75wYxBM6O
— Ajeet Yadav (@ajeetkumarAT) October 1, 2024
ಆದರೆ ಮೂವರು ಮುಸುಕುಧಾರಿಗಳು ಬಾಗಿಲು ಬಡಿಯಲು ಶುರು ಮಾಡಿದ್ದಾರೆ. ಇನ್ನೇನು ಬಾಗಿಲು ಒಡೆದು ಒಳಗೆ ನುಗ್ಗಬೇಕೆನ್ನುವಷ್ಟರಲ್ಲೇ ಮಹಿಳೆ ತನ್ನ ಕೈಯಿಂದ ಎಷ್ಟು ಸಾಧ್ಯವೋ ಅಷ್ಟು ಶಕ್ತಿಯನ್ನು ಬಳಸಿ ಬಾಗಿಲನ್ನು ದೂಡಿಕೊಂಡು ನಿಂತಿದ್ದಾರೆ. ಕೆಲ ಸಮಯದ ಬಳಿಕ ಪಕ್ಕದಲ್ಲಿದ್ದ ಸೋಫಾವನ್ನು ಬಾಗಿಲು ಒರಗಿಸಿಟ್ಟಿದ್ದಾರೆ. ಮಹಿಳೆ ಕಿರುಚಾಡುತ್ತಾ ತನ್ನ ಮನೆಯವರಿಗೆ ಅಲರಾಂ ಮೂಲಕ ಅಪಾಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ಕಳ್ಳರು ಕೆಲ ಸಮಯದ ಬಳಿಕ ಬಾಗಿಲು ಬಡಿದು ಅಲ್ಲಿಂದ ಪರಾರಿ ಆಗಿದ್ದಾರೆ. ಮಹಿಳೆಯ ಈ ದಿಟ್ಟತನದ ವಿಡಿಯೋ ಮನೆಯೊಳಗಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಹಿಳೆಯ ದಿಟ್ಟತನವನ್ನು ಅನೇಕರು ಶ್ಲಾಘಿಸಿದ್ದಾರೆ.
ಸದ್ಯ ದರೋಡೆ ಯತ್ನದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು
ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್
Andhra DCM 11 ದಿನಗಳ ವ್ರತ; ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್
Delhi Drug Bust: ಬೃಹತ್ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್ ವಶ
Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಸಿಂಧನೂರಲ್ಲಿ ಅಪಹರಿಸಲ್ಪಟ್ಟ ಮಹಾರಾಷ್ಟ್ರದ ನಾಲ್ವರು ವಿದ್ಯಾರ್ಥಿಗಳ ರಕ್ಷ ಣೆ; ಇಬ್ಬರ ಬಂಧನ
ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ
ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ್ ಕುಮಾರ್!
Sandalwood: ಗುರುರಾಜ ಕುಲಕರ್ಣಿ ಚಿತ್ರಕ್ಕೆ ಲಾಪತಾ ಲೇಡೀಸ್ ಬರಹಗಾರ ಎಂಟ್ರಿ
Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.