“ಉಚ್ಚಿಲ ದಸರಾ 2024: ಅ.3 -12ರ ವರೆಗೆ ಸಾಂಸ್ಕೃತಿಕ ರಸದೌತಣ, ಲೇಸರ್ ಶೋ
ಡಾ| ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು...
Team Udayavani, Oct 2, 2024, 1:55 PM IST
ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 3ರಿಂದ 12ರವರೆಗೆ ಜರಗಲಿರುವ ಉಚ್ಚಿಲ ದಸರಾ 2024ರ ಪ್ರಯುಕ್ತ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗ ಮತ್ತು ಭಕ್ತರ ಸಹಕಾರದೊಂದಿಗೆ ಶಾಲಿನಿ ಡಾ| ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಯುವ ದಸರಾ -ನೃತ್ಯ ಸ್ಪರ್ಧೆ : ಅ.3ರ ಸಂಜೆ 6.30ರಿಂದ ನೃತ್ಯ ಸ್ಪರ್ಧೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
ದೊರಕಲಿದೆ. ಅ. 4ರ ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಲೈವ್ ಹಿನ್ನೆಲೆ ಸಂಗೀತ ವಾದನದೊಂದಿಗೆ ನಾಟ್ಯ ನಿಲಯಂ ಮಂಜೇಶ್ವರ ತಂಡದವರಿಂದ ನೃತ್ಯ ವೈವಿಧ್ಯ, ಅ. 5ರ ಸಂಜೆ ಗಂಟೆ 6.15ರಿಂದ
ಕ್ಷೇತ್ರದ ರಥಬೀದಿಯ ಸುತ್ತ ಸಾಮೂಹಿಕ ಭಜನ ಕುಣಿತ, ರಾತ್ರಿ 7.30ರಿಂದ ಜಿಲ್ಲಾ ಮೊಗವೀರ ಯುವ ಸಂಘಟನೆ ಸದಸ್ಯರಿಂದ
ಸಾಂಸ್ಕೃತಿಕ ಕಾಯಕ್ರಮ, ರಾತ್ರಿ 8.30ರಿಂದ ಗುರು ಕೌಸಲ್ಯ ನಿವಾಸ್ ಮತ್ತು ಬಳಗ, ಎಂ. ಎಸ್. ನಾಟ್ಯಕ್ಷೇತ್ರ ಬೆಂಗಳೂರು ಇವರಿಂದ ಶ್ರೀರಾಮ ಹನುಮಂತ ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ.
ಸಾಮೂಹಿಕ ದಾಂಡಿಯಾ: ಅ. 6ರ ಸಂಜೆ 6.30ರಿಂದ 8ರ ತನಕ ಕ್ಷೇತ್ರದ ರಥಬೀದಿಯ ಸುತ್ತ ಸಾರ್ವಜನಿಕರಿಂದ ಸಾಮೂಹಿಕ ದಾಂಡಿಯಾ ನೃತ್ಯ, ರಾತ್ರಿ 8ರಿಂದ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಅವರಿಂದ ವಿಸ್ಮಯ ಜಾದೂ, ಅ. 7ರ ಸಂಜೆ 4ರಿಂದ ವಿದುಷಿ ಪವನ ಬಿ. ಆಚಾರ್ ಮಣಿಪಾಲ ಅವರಿಂದ ಶತವೀಣಾವಲ್ಲರಿ, ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಜ್ಞಾನ ಐತಾಳ್ ನೇತೃತ್ವದ ಹೆಜ್ಜೆನಾದ ಮಂಗಳೂರು ಇವರಿಂದ ನೃತ್ಯ
ಕಾರ್ಯಕ್ರಮ ನಡೆಯಲಿದೆ.
ಯಕ್ಷಗಾನ, ನೃತ್ಯ, ಹರಿಕಥೆ:
ಅ. 8ರ ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ರಾಘವೇಂದ್ರ ಆಚಾರ್ಯ
ಜನ್ಸಾಲೆ ನೇತೃತ್ವದ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಯಕ್ಷ ಕಲಾ ತಂಡ ಇವರಿಂದ ಚಕ್ರ ಚಂಡಿಕೆ ಯಕ್ಷಗಾನ, ಅ. 9ರ ಮಧ್ಯಾಹ್ನ 2ರಿಂದ ಯಶಸ್ವಿನಿ ಉಳ್ಳಾಲ್ ಅವರಿಂದ ಗಾನ ಲಹರಿ, ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶ್ರೀ ದೇವಿ ನೃತ್ಯಾರಾಧನ ಕಲಾಕೇಂದ್ರ ಪುತ್ತೂರು ಇದರ ನೃತ್ಯ ಗುರು ವಿದುಷಿ ರೋಹಿಣಿ ಉದಯ್ ಶಿಷ್ಯೆಯರಿಂದ ನೃತ್ಯ ರಂಜನಿ, ಅ. 10ರ ಸಂಜೆ 6.30ರಿಂದ ಖ್ಯಾತ ಕೀರ್ತನಕಾರ ಡಾ| ಎಸ್.ಪಿ. ಗುರುದಾಸ್ ಮಂಗಳೂರು ಅವರಿಂದ ಹರಿಕಥಾ ಸತ್ಸಂಗ ಲಕ್ಷ್ಮೀ ಕಲ್ಯಾಣ ನಡೆಯಲಿದೆ.
ಅಜಯ್ ವಾರಿಯರ್ ನೇತೃತ್ವದಲ್ಲಿ ಸಂಗೀತ ಸಂಜೆ ಅ. 11ರ ಸಂಜೆ 6.30ರಿಂದ ಕಲಾಮೃತ ತಂಡ ಮಂಗಳೂರು ಅವರಿಂದ
ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಹಿನ್ನೆಲೆ ಗಾಯಕ ಅಜಯ್ ವಾರಿಯರ್ ಮತ್ತು ತಂಡ ಬೆಂಗಳೂರು
ಇವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ, ಅ. 12ರ ಬೆಳಗ್ಗೆ 11.30ರಿಂದ ವಿದುಷಿ ಡಾ| ಸುಚಿತ್ರ ಹೊಳ್ಳ ಪುತ್ತೂರು ಅವರಿಂದ
ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಅ. 12ರಂದು ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಜಲಸ್ತಂಭನ ಶೋಭಾಯಾತ್ರೆ ಮತ್ತು ಜಲಸ್ತಂಭನೆ
ಪ್ರಯುಕ್ತ ರಾತ್ರಿ 10 ಗಂಟೆಗೆ ಕಾಪು ಬೀಚ್ ನಲ್ಲಿ ಲೈವ್ ಮ್ಯೂಸಿಕ್ ಶೋ ಮತ್ತು ವಿಶೇಷ ಲೇಸರ್ ಶೋ ಪ್ರದರ್ಶನ ನಡೆಯಲಿದೆ
ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ್ ಸುವರ್ಣ, ದಸರಾ ಉತ್ಸವ ಸಮಿತಿ
ಅಧ್ಯಕ್ಷ ವಿನಯ್ ಕರ್ಕೇರ ಹಾಗೂ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!
ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ
Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್ ಟಿಕೆಟ್ ದರ ಬಲು ದುಬಾರಿ !
Legislative Council: ಇಂದು ಕಾಂಗ್ರೆಸ್ ಅಭ್ಯರ್ಥಿ ಹೆಸರು ಪ್ರಕಟ ?
Mangaluru: ಉಗ್ರರಂತೆ ಕಳ್ಳರಿಗೂ ತರಬೇತಿ ಕೇಂದ್ರ! ಚಡ್ಡಿ ಗ್ಯಾಂಗ್ಗೆ ದರೋಡೆಯೇ ದೇವರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ
ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ್ ಕುಮಾರ್!
Sandalwood: ಗುರುರಾಜ ಕುಲಕರ್ಣಿ ಚಿತ್ರಕ್ಕೆ ಲಾಪತಾ ಲೇಡೀಸ್ ಬರಹಗಾರ ಎಂಟ್ರಿ
Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ
Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.