Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ


Team Udayavani, Oct 2, 2024, 3:20 PM IST

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

ಚೆನ್ನೈ: ದಳಪತಿ ವಿಜಯ್(Thalapathy Vijay)‌ ಅವರ ʼಗೋಟ್‌ʼ (Goat Movie) ಸಿನಿಮಾ  ಥಿಯೇಟರ್‌ನಲ್ಲಿ ಸಕ್ಸಸ್‌ ಫುಲ್‌ ಆಗಿ ಪ್ರದರ್ಶನ ಕಂಡ ಬಳಿಕ ಓಟಿಟಿ ರಿಲೀಸ್‌ಗೆ ಸಿದ್ದವಾಗಿದೆ.

ʼಗೋಟ್‌ʼ ಹವಾ ಕಡಿಮೆ ಆಗುತ್ತಿದ್ದಂತೆ ದಳಪತಿ ವಿಜಯ್‌ ಅವರ ಕೊನೆಯ ಸಿನಿಮಾವೆಂದೇ ಹೇಳಲಾಗುತ್ತಿರುವ  ‘Thalapathy 69’  ಸಿನಿಮಾದ ಬಗ್ಗೆ ಟ್ರೆಂಡ್‌ ಶುರುವಾಗಿದೆ.

ʼThalapathy 69’  ಸಿನಿಮಾವನ್ನು ಹೆಚ್. ವಿನೋದ್ (H. Vinoth) ಅವರು ನಿರ್ದೇಶನ ಮಾಡಲಿದ್ದು, ಇತ್ತೀಗಷ್ಟೇ ಸಿನಿಮಾ ಫಸ್ಟ್‌ ಲುಕ್‌ ಪೋಸ್ಟರ್‌ ರಿಲೀಸ್‌ ಆಗಿತ್ತು.

ಇದನ್ನೂ ಓದಿ: BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

ಪ್ರಜಾಪ್ರಭುತ್ವದ ಜ್ಯೋತಿ ಹೊತ್ತವರು 2025ಕ್ಕೆ ಆಗಮಿಸುತ್ತಿದ್ದಾರೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿತ್ತು.

ಶೂಟಿಂಗ್‌ ಆರಂಭಕ್ಕೂ ಮುನ್ನ ಸಖತ್‌ ಕ್ರೇಜ್‌ ಹುಟ್ಟಿಸಿರುವ ʼThalapathy 69’ ಸಿನಿಮಾದಲ್ಲಿ ನಟಿಸುವ ಪಾತ್ರವರ್ಗವನ್ನು ಚಿತ್ರತಂಡ ಒಂದೊಂದಾಗಿ ರಿವೀಲ್‌ ಮಾಡುತ್ತಿದೆ.

ಈಗಾಗಲೇ ಸೌತ್‌ ಸಿನಿಮಾದಲ್ಲಿ ತನ್ನ ಹೆಜ್ಜೆಯನ್ನಿಟ್ಟಿರುವ‌ ಬಾಲಿವುಡ್‌ ನಟ ಬಾಬಿ ಡಿಯೋಲ್ (Bobby Deol) ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಧಿಕೃತವಾಗಿದೆ. ಇದೀಗ ಸಿನಿಮಾದ ನಾಯಕಿಯನ್ನು ಚಿತ್ರತಂಡ ಪರಿಚಯಿಸಿದೆ.

ಕರಾವಳಿ ಚೆಲುವೆ, ಸೌತ್‌ ಸಿನಿಮಾರಂಗದ ಬ್ಯುಸಿ ನಟಿಯರಲ್ಲಿ ಒಬ್ಬರಾಗಿರುವ ಪೂಜಾ ಹೆಗ್ಡೆ(Pooja Hegde) ʼThalapathy 69’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ದಳಪತಿ ಅವರ 69ನೇ ಸಿನಿಮಾಕ್ಕೆ ಬಂಡವಾಳ ಹಾಕಲಿರುವ ‘ಕೆವಿಎನ್ ಪ್ರೊಡಕ್ಷನ್ಸ್’‌ (Kvn Productions)  ಪೂಜಾ ಹೆಗ್ಡೆ ಅವರ ಪೋಸ್ಟರ್‌ ಹಂಚಿಕೊಂಡು ಪಾತ್ರವರ್ಗವನ್ನು ರಿವೀಲ್‌ ಮಾಡಿದೆ.

ಪೂಜಾ ಹೆಗ್ಡೆ ಅವರು ಈ ಹಿಂದೆ ವಿಜಯ್‌ ಅವರೊಂದಿಗೆ ʼಬೀಸ್ಟ್‌ʼ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದರು. ಇಬ್ಬರ ಅನ್‌ ಸ್ಕ್ರೀನ್ ಜೋಡಿಯನ್ನು ನೋಡಿ ಪ್ರೇಕ್ಷಕರು ಮೆಚ್ಚಿಕೊಂಡಿದ್ದರು.‌

ಅನಿರುದ್ಧ್ ರವಿಚಂದರ್ ಸಿನಿಮಾಕ್ಕೆ ಮ್ಯೂಸಿಕ್‌ ನೀಡಲಿದ್ದಾರೆ. ದಳಪತಿ ವಿಜಯ್‌ ಅವರ ರಾಜಕೀಯ ಜೀವನಕ್ಕೆ ಹತ್ತಿರವಾಗುವ ಸಿನಿಮಾವಿದು ಎನ್ನಲಾಗಿದೆ.

ಸಿನಿಮಾದಲ್ಲಿ ಎನ್ನಲಾಗಿದೆ. ವಿಜಯ್‌, ಬಾಬಿ, ಪೂಜಾ ಜತೆ ಮೋಹನ್ ಲಾಲ್ ಮತ್ತು ಮಮಿತಾ ಬೈಜು ಮುಂತಾದವರು ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

2025ರ ಅಕ್ಟೋಬರ್‌ ನಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

ಸದ್ಯ ಪೂಜಾ ಹೆಗ್ಡೆ ಸೂರ್ಯ – ಕಾರ್ತಿಕ್‌ ಸುಬ್ಬರಾಜ್‌ ಅವರ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

CM-Feet

Gandhi Jayanthi:ರಾಷ್ಟ್ರಧ್ವಜ ಹಿಡಿದೇ ಸಿಎಂ ಸಿದ್ದರಾಮಯ್ಯ ಶೂ ಲೇಸ್‌ ಬಿಚ್ಚಿದ ಕಾರ್ಯಕರ್ತ!

12

Vettaiyan Trailer: ಪಾಪಿಗಳ ಎನ್‌ಕೌಂಟರ್‌ ಮಾಡಲು ಖಾಕಿ ತೊಟ್ಟು ಬಂದ ʼತಲೈವಾʼ

ಪ್ರವಾಹ ಪೀಡಿತ ಪ್ರದೇಶಕ್ಕೆ ಪರಿಹಾರ ಕಿಟ್ ಒದಗಿಸಲು ಬಂದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

IAF Chopper: ಪ್ರವಾಹದ ನೀರಿನಲ್ಲೇ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್… ತಪ್ಪಿದ ದುರಂತ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

14-koppala

ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್‌, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ್ ಕುಮಾರ್!

13-sirawara

Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Vettaiyan Trailer: ಪಾಪಿಗಳ ಎನ್‌ಕೌಂಟರ್‌ ಮಾಡಲು ಖಾಕಿ ತೊಟ್ಟು ಬಂದ ʼತಲೈವಾʼ

6

Kollywood: ಮೂವರು ಗಂಡಂದಿರಿಗೆ ವಿಚ್ಚೇದನ ಕೊಟ್ಟು 4ನೇ ಮದುವೆಗೆ ಸಜ್ಜಾದ ಖ್ಯಾತ ನಟಿ

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Kantara: Chapter 1: ʼಕಾಂತಾರ-1ʼನಲ್ಲಿ ರಿಷಬ್‌ ತಂದೆ ಪಾತ್ರದಲ್ಲಿ ಮೋಹನ್‌ ಲಾಲ್?

Kantara: Chapter 1: ʼಕಾಂತಾರ-1ʼನಲ್ಲಿ ರಿಷಬ್‌ ತಂದೆ ಪಾತ್ರದಲ್ಲಿ ಮೋಹನ್‌ ಲಾಲ್?

GOAT OTT Release: ದಳಪತಿ ವಿಜಯ್‌ ʼಗೋಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

GOAT OTT Release: ದಳಪತಿ ವಿಜಯ್‌ ʼಗೋಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

023

Sandalwood: ಶೀಘ್ರಮೇವ ಗೆಲುವು ಪ್ರಾಪ್ತಿರಸ್ತು

CM-Feet

Gandhi Jayanthi:ರಾಷ್ಟ್ರಧ್ವಜ ಹಿಡಿದೇ ಸಿಎಂ ಸಿದ್ದರಾಮಯ್ಯ ಶೂ ಲೇಸ್‌ ಬಿಚ್ಚಿದ ಕಾರ್ಯಕರ್ತ!

12

Vettaiyan Trailer: ಪಾಪಿಗಳ ಎನ್‌ಕೌಂಟರ್‌ ಮಾಡಲು ಖಾಕಿ ತೊಟ್ಟು ಬಂದ ʼತಲೈವಾʼ

15-Chincholi

Chincholi: ಬಟ್ಟೆ ಒಗೆಯುವ ವೇಳೆ ‌ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.