Serial Actress: ಮದುವೆ ನಿರಾಕರಿಸಿದ್ದಕ್ಕೆ ಕಿರುತೆರೆ ನಟಿಯ ಮನೆಯಲ್ಲೇ ಯುವಕ ಆತ್ಮಹ*ತ್ಯೆ
Team Udayavani, Oct 2, 2024, 4:08 PM IST
ಬೆಂಗಳೂರು: ಕಿರುತೆರೆ ನಟಿಯೊಬ್ಬಳು (Serial Actress) ಮದುವೆ ಆಗಲು ನಿರಾಕರಿಸಿದ ಕಾರಣದಿಂದಾಗಿ ಮನನೊಂದು ಯುವಕನೋರ್ವ ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಮದನ್ (25) ಮೃತ ಯುವಕ. ಈತ ಇವೆಂಟ್ ಮ್ಯಾನೇಜ್ ಮೆಂಟ್ನಲ್ಲಿ ಡೆಕೊರೇಟ್ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.
ಕೆಲ ಸಮಯದ ಹಿಂದಷ್ಟೇ ಕಿರುತೆರೆಯಲ್ಲಿ ಸಹನಟಿಯಾಗಿ ಕೆಲಸ ಮಾಡುತ್ತಿದ್ದ ವೀಣಾ (Actress veena) ಎಂಬಾಕೆಯ ಪರಿಚಯವಾಗಿತ್ತು. ಸೀರಿಯಲ್ ಸೆಟ್ನಲ್ಲೇ ಇಬ್ಬರು ಸ್ನೇಹಿತರಾಗಿದ್ದರು. ಸ್ನೇಹ ಮುಂದುವರೆಯುತ್ತಿದ್ದಂತೆ ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್ ನಲ್ಲಿದ್ದರು ಎನ್ನಲಾಗಿದೆ.
ಆದರೆ ದಿನ ಕಳೆಯುತ್ತಿದ್ದಂತೆ ವೀಣಾ ಮದುವೆ ಆಗುವಂತೆ ಮದನ್ ನನ್ನು ಹಲವಾರು ಬಾರಿ ಒತ್ತಾಯ ಮಾಡಿದ್ದಳು. ಅದೊಂದು ದಿನ ಕೈ ಕೊಯ್ದುಕೊಂಡು ಮದುವೆ ಆಗಲೇಬೇಕೆಂದು ನಟಿ ಮದನ್ ನನ್ನು ಒತ್ತಾಯಿಸಿದ್ದಳು ಎನ್ನಲಾಗಿದೆ. ವೀಣಾ ಬೇರೆ ಹುಡುಗರ ಜತೆಯೂ ಆತ್ಮೀಯವಾಗಿದ್ದಳು ಎನ್ನುವ ಕಾರಣಕ್ಕೆ ಮದುವೆ ಆಗಲು ಮದನ್ ನಿರಾಕರಿಸಿದ್ದ ಎನ್ನಲಾಗಿದೆ.
ಮಂಗಳವಾರ(ಅ.1ರಂದು) ಮದನ್ ನನ್ನು ವೀಣಾ ಸಿಕೆ ಪಾಳ್ಯದಲ್ಲಿರುವ ತನ್ನ ಮನೆಗೆ ಕರೆದಿದ್ದಳು. ಈ ವೇಳೆ ಇಬ್ಬರು ಚೆನ್ನಾಗಿ ಕುಡಿದು ಪಾರ್ಟಿ ಮಾಡಿದ್ದಾರೆ. ಪಾರ್ಟಿ ವೇಳೆ ಮದುವೆ ವಿಚಾರ ಪ್ರಸ್ತಾಪವಾಗಿದೆ. ವೀಣಾ ಮಾತಿನಿಂದ ಬೇಸರಗೊಂಡ ಮದನ್ ವಾಶ್ ರೂಮ್ಗೆ ಹೋಗಿ ಬರ್ತಿನಿ ಅಂಥ ಹೇಳಿ ಹೋದವನು ಅಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿ ಆಗಿದೆ.
ಮದುವೆ ಆಗುವಂತೆ ಒತ್ತಾಯಿಸುತ್ತಿದ್ದ ವೀಣಾಳ ಬಳಿ ಈ ಸಲಿ ಮದನ್ ಮದುವೆ ಆಗುವುದರ ಬಗ್ಗೆ ಮಾತನಾಡಿದ್ದನಂತೆ ಆದರೆ ವೀಣಾ ಇಷ್ಟು ದಿನ ಮದುವೆ ಆಗುವಂತೆ ಹೇಳುತ್ತಿದ್ದಳು ಆದರೆ ನಿನ್ನೆ ಮದುವೆ ಆಗಲ್ಲ ಎಂದು ಹೇಳಿದ್ದಾಳೆ. ಇದೇ ಕಾರಣದಿಂದ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.
ನಟಿ ವೀಣಾ ʼಕನ್ನಡತಿʼ ಸೀರಿಯಲ್ ಹಾಗೂ ಕೆಲವು ಜಾಹೀರಾತುಗಳಲ್ಲಿ ನಟಿಸುತ್ತಿದ್ದಳು ಎನ್ನಲಾಗಿದೆ.
ಈ ಸಂಬಂಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಟಿ ವೀಣಾರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ವೀಣಾ ಮದುವೆಯಾಗುವುದಾಗಿ ಹಲವರು ಯುವಕರಿಗೆ ವಂಚನೆ ಮಾಡಿದ್ದಾಳೆ ಎಂದು ಮೃತ ಮದನ್ ಪೋಷಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Gandhi Jayanthi:ರಾಷ್ಟ್ರಧ್ವಜ ಹಿಡಿದೇ ಸಿಎಂ ಸಿದ್ದರಾಮಯ್ಯ ಶೂ ಲೇಸ್ ಬಿಚ್ಚಿದ ಕಾರ್ಯಕರ್ತ!
ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ್ ಕುಮಾರ್!
Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ
Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು
ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು
MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ
ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.