Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು


Team Udayavani, Oct 2, 2024, 4:19 PM IST

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

ಪಂಜಾಬ್: ನೂರು ವರ್ಷ ಹಳೆಯ ಕಟ್ಟಡವೊಂದು ಇದ್ದಕಿದ್ದಂತೆ ಕುಸಿದು ಬಿದ್ದ ಘಟನೆ ಲೂಧಿಯಾನದಲ್ಲಿ ಮಂಗಳವಾರ ನಡೆದಿದೆ.

ಮಂಗಳವಾರ ಮಧ್ಯಾಹ್ನ ಲೂಧಿಯಾನಾದ ಚೌಡಾ ಬಜಾರ್‌ನ ಬಂದಿಯಾ ಮೊಹಲ್ಲಾ ಪ್ರದೇಶದಲ್ಲಿ ಶಿಥಿಲಗೊಂಡಿದ್ದ ಹಳೆಯ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ ಈ ವೇಳೆ ಅಲ್ಲೇ ಪಕ್ಕದಲ್ಲಿದ್ದ ತಾಯಿ ಹಾಗೂ ಎರಡು ವರ್ಷದ ಮಗುವನ್ನು ಹಿಡಿದು ಓಡಿದ ಪರಿಣಾಮ ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಎದೆ ಝಲ್ ಎನಿಸುವಂತಿದೆ.

ಕಟ್ಟಡ ಮಾಲೀಕನ ವಿರುದ್ಧ ಆಕ್ರೋಶ:
ನೂರು ವರ್ಷ ಹಳೆಯ ಕಟ್ಟಡದ ಕೆಳಭಾಗದಲ್ಲೇ ದಿನಕ್ಕೆ ನೂರಾರು ಜನ ತಿರುಗಾಡುತ್ತಿರುತ್ತಾರೆ ಅಲ್ಲದೆ ಕಟ್ಟಡದ ಅಕ್ಕ ಪಕ್ಕದಲ್ಲಿ ಹಲವು ಮನೆಗಳೂ ಇದ್ದು ನೆರೆಹೊರೆಯವರು ಕಟ್ಟಡವನ್ನು ತೆರವುಗೊಳಿಸುವಂತೆ ಹಲವು ಬಾರಿ ಕಟ್ಟಡ ಮಾಲೀಕರಲ್ಲಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಕಟ್ಟಡ ಬಿದ್ದಿದ್ದರಿಂದ ಹೆಚ್ಚಿನ ಜನ ಸಂಚಾರ ಇರದ ಪರಿಣಾಮ ದೊಡ್ಡ ಅನಾಹುತ ತಪ್ಪಿದೆ, ಘಟನೆಯಲ್ಲಿ ಪಕ್ಕದ ಮನೆಯ ಮಹಿಳೆ ಮತ್ತು ಆಕೆಯ ಎರಡು ವರ್ಷದ ಮಗುವನ್ನು ಎತ್ತಿಕೊಂಡು ಓಡಿ ಬಂದ ಪರಿಣಾಮ ಇಬ್ಬರ ಜೀವ ಉಳಿದಿದೆ.

ಮಾಹಿತಿ ತಿಳಿದ ತಕ್ಷಣ ರಕ್ಷಣಾ ತಂಡದ ಜೊತೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಿದ್ದಾರೆ. ಅಲ್ಲದೆ ಕಟ್ಟಡದ ಅವಶೇಷಗಳಡಿ ಹಲವು ದ್ವಿಚಕ್ರ ವಾಹನಗಳು ಸಿಲುಕಿ ಅಪಾರ ಹಾನಿ ಸಂಭವಿಸಿದೆ.

ಮನೆಗಳಿಗೂ ಹಾನಿ:
ಕಟ್ಟಡ ಕುಸಿದ ಪರಿಣಾಮ ಅಕ್ಕಪಕ್ಕದಲ್ಲಿರುವ ಕೆಲ ಮನೆಗಳಿಗೂ ಹಾನಿಯಾಗಿದ್ದು ಮನೆಯ ಗೋಡೆಗಳು ಕುಸಿದು ಬಿದ್ದಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸೋಮವಾರವೇ ಕಟ್ಟಡ ಕೆಲ ಭಾಗ ಕುಸಿದಿತ್ತು:
ಸೋಮವಾರವೇ ಕಟ್ಟಡದ ಗೋಡೆಯ ಭಾಗಗಳು ಕೆಳಗೆ ಬೀಳುತ್ತಿತ್ತು ಎಂದು ಸ್ಥಳೀಯ ನಿವಾಸಿ ಹೇಳಿಕೊಂಡಿದ್ದಾರೆ ಅಲ್ಲದೆ ಈ ಕುರಿತು ಕಟ್ಟಡದ ಮಾಲೀಕರಿಗೂ ಮಾಹಿತಿ ನೀಡಲಾಗಿತ್ತು. ಆದರೆ ಮಾಲೀಕ ಜಾಗಕ್ಕೆ ಬಾರದೆ ನಿರ್ಲಕ್ಷ ವಹಿಸಿದ್ದು ಇದರಿಂದ ಮಂಗಳವಾರ ಇಡೀ ಕಟ್ಟಡ ಕುಸಿದು ಬಿದ್ದಿದೆ ಎಂದು ಹೇಳಿದ್ದಾರೆ. ಘಟನೆಯಿಂದ ಮಹಿಳೆಯ ತಲೆಗೆ ಇಟ್ಟಿಗೆ ಬಿದ್ದು ಗಾಯಗಳಾಗಿದ್ದು, ಹಾಗೆಯೆ ಮಗುವಿಗೂ ಗಾಯಗಳಾಗಿದ್ದು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ತಪ್ಪಿತಸ್ಥರಿಗೆ ಶಿಕ್ಷೆ:
ಇನ್ನು ಘಟನೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಪೊಲೀಸರು ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು ಆ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gangavath-Rain

Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

madikeri

Madikeri: ಕೋಟ್ಯಾಂತರ ಮೌಲ್ಯದ ಹೈಡ್ರೋ ಗಾಂಜಾ ವಶ; 7 ಆರೋಪಿಗಳ ಬಂಧನ

MLC-elctin-Congress

Council By Polls: ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾದ ರಾಜು ಪೂಜಾರಿ

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಹ ಪೀಡಿತ ಪ್ರದೇಶಕ್ಕೆ ಪರಿಹಾರ ಕಿಟ್ ಒದಗಿಸಲು ಬಂದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

IAF Chopper: ಪ್ರವಾಹದ ನೀರಿನಲ್ಲೇ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್… ತಪ್ಪಿದ ದುರಂತ

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

1-pawan-kalyana

Andhra DCM 11 ದಿನಗಳ ವ್ರತ; ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gangavath-Rain

Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.