Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ
ಪತಿಗಿಂತ ಅವರಿಗೆ ಮೂಡಾ ಸೈಟ್ ಮಹತ್ವದ್ದಲ್ಲ
Team Udayavani, Oct 2, 2024, 4:38 PM IST
ಮುಧೋಳ: ಯಜಮಾನರಿಗೆ ಮುಜುಗರವನ್ನುಂಟು ಮಾಡುವ ಯಾವ ಆಸ್ತಿಯೂ ನನಗೆ ದೊಡ್ಡದಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ತಮಗೆ ಮುಡಾ ನೀಡಿದ್ದ ಸೈಟ್ ಗಳನ್ನು ಮರಳಿ ನೀಡಿ ಪತಿಯ ದಾರಿಯಲ್ಲಿ ನಡೆದು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಅ.2ರ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಅನವಶ್ಯಕವಾಗಿ ನಮ್ಮ ಯಜಮಾನರ ಹೆಸರು ತಳಕು ಹಾಕಲಾಗುತ್ತಿದೆ. ಅವರ ಎದುರು ನನಗೆ ಯಾವ ಆಸ್ತಿಯೂ ದೊಡ್ಡದಲ್ಲ. ಅವರ ಕಳಂಕರಹಿತ ರಾಜಕೀಯ ಜೀವನಕ್ಕೆ ಮಸಿ ಬಳಿಯುವ ಹುನ್ನಾರ ನಡೆಯುತ್ತಿದೆ ಎಂಬ ಬೇಸರ ಅವರಲ್ಲಿ ಮನೆ ಮಾಡಿದೆ ಎಂದು ತಿಳಿಸಿದರು.
ಆದರೆ ಪ್ರತಿಯೊಂದರಲ್ಲೂ ತಪ್ಪು ಹುಡುಕುವ ವಿರೋಧಿಗಳು ಅದಕ್ಕೆ ಅಪಾರ್ಥ ಕಲ್ಪಿಸುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನೆಂಬುದರ ಬಗ್ಗೆ ತಿಳಿಸಿದ ರಾಜಕೀಯ ವಿರೋಧಿಗಳು ವಿನಾಕಾರಣ ಅವರ ಹೆಸರು ಎಳೆದು ತರುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ
Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ
Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ
Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ
Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.