ದ.ಕ. ಚೆಸ್ ಅಸೋಸಿಯೇಶನ್ ಮಂಗಳೂರು ರಾಷ್ಟ್ರೀಯ ಓಪನ್ ರಾಪಿಡ್ ಚೆಸ್ ಆರಂಭ
Team Udayavani, Oct 2, 2024, 11:00 PM IST
ಮಂಗಳೂರು: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ ಮಂಗಳೂರು ವತಿಯಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾದ ಎರಡು ದಿನಗಳ ರಾಷ್ಟ್ರೀಯ ಓಪನ್ ರ್ಯಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ “ಎಂಆರ್ಪಿಎಲ್ ಟ್ರೋಫಿ’ಗೆ ಬುಧವಾರ ಆರಂಭಗೊಂಡಿತು.
9 ಸುತ್ತುಗಳ ಪಂದ್ಯಾವಳಿಯಲ್ಲಿ ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡು, ಪಶ್ಚಿಮ ಬಂಗಾಲ ರಾಜ್ಯಗಳ ಸುಮಾರು 340 ಮಂದಿ ಭಾಗವಹಿಸಿದ್ದಾರೆ. 4 ವರ್ಷದ ಮಕ್ಕಳಿಂದ ಹಿರಿಯರವರೆಗೂ ಭಾಗವಹಿಸಿದ್ದು ವಿಶೇಷವಾಗಿತ್ತು. ಟೂರ್ನಿಯಲ್ಲಿ 2.4 ಲಕ್ಷ ನಗದು ಬಹುಮಾನ, ವಿವಿಧ ವಿಭಾಗಗಳ ಟ್ರೋಫಿ ಜತೆಗೆ ಸುಮಾರು ನೂರೈವತ್ತಕ್ಕೂ ಹೆಚ್ಚು ಬಹುಮಾನಗಳು ಇರಲಿವೆ. ಗುರುವಾರದಂದು ಬ್ಲಿಟ್ಜ್ ಟೂರ್ನಮೆಂಟ್ ನಡೆಯಲಿದೆ.
ಎಂಆರ್ಪಿಎಲ್ನ ಜಿಜಿಎಂ (ಎಚ್ಆರ್) ಕೃಷ್ಣ ಹೆಗ್ಡೆ ಅವರು ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಬುದ್ಧಿಗೆ ಕೆಲಸ ಕೊಡುವ ಚೆಸ್ ಪಂದ್ಯಾವಳಿ ಆಯೋಜನೆ ಮಾಡಲಾಗಿದ್ದು, ಯಶಸ್ಸು ಕಾಣಲಿ. ಮುಂದಿನ ದಿನಗಳಲ್ಲಿಯೂ ಈ ರೀತಿಯ ಪಂದ್ಯಾವಳಿಗಳಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಅಸೋಸಿಯೇಶನ್ ಗೌರವಾಧ್ಯಕ್ಷ ಸುನಿಲ್ ಆಚಾರ್ ಮಾತನಾಡಿ, ಚದುರಂಗ ಭಾರತದಲ್ಲಿ ಪುರಾತನ ಕಾಲದಿಂದಲೂ ಹೆಸರುಗಳಿಸಿದೆ. ಆಲೋಚನೆಗಳನ್ನು ಬೆಳೆಸಿಕೊಳ್ಳಲು ಚೆಸ್ ಪಂದ್ಯಾಟ ಸಹಕಾರಿಯಾಗುತ್ತದೆ ಎಂದರು.
ಜೀನಿಯಸ್ ಚೆಸ್ ಸ್ಕೂಲ್ ಸ್ಥಾಪಕಾಧ್ಯಕ್ಷ ಸತ್ಯಪ್ರಸಾದ್ ಕೋಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ| ಅಮರಶ್ರೀ ಎ. ಶೆಟ್ಟಿ ಸಹಿತ ಟೂರ್ನಮೆಂಟ್ ಸಲಹ ಸಮಿತಿಯ ಸದಸ್ಯರು, ಅಸೋಸಿಯೇಶನ್ ಪದಾಧಿಕಾರಿಗಳು ಇದ್ದರು.
ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟೆ ಸ್ವಾಗತಿಸಿ, ವಾಣಿ ಎಸ್. ಪಣಿಕ್ಕರ್ ನಿರೂಪಿಸಿದರು. ಅಭಿಷೇಕ್ ಕಟ್ಟೆಮಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
U-19 Test: ಆಸೀಸ್ ವಿರುದ್ಧ ಭಾರತಕ್ಕೆ 2 ವಿಕೆಟ್ ಜಯ
Trap Shooting: ಶಾಟ್ ಗನ್ ಟ್ರ್ಯಾಪ್ ಶೂಟಿಂಗ್… ಸ್ಯಾಮುಯೆಲ್ ಸಿಮ್ಸನ್ಗೆ ಚಿನ್ನ
Javelin; ನೀರಜ್ ಚೋಪ್ರಾರಿಂದ ಬೇರೆಯಾಗಲು ಮುಂದಾದ ಕೋಚ್ ಬಾರ್ಟೋನಿಟ್ಜ್: ಕಾರಣ?
ICC Test rankings; ಬುಮ್ರಾಗೆ ಮತ್ತೆ ಅಗ್ರಸ್ಥಾನ:ನಂ.3ಕ್ಕೆ ಜಿಗಿದ ಜೈಸ್ವಾಲ್
India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿ: ಸಿಎಂ
Department of School Education: ಶಾಲೆಗಳ ಉಚಿತ ವಿದ್ಯುತ್: ಅನುಷ್ಠಾನಕ್ಕೆ ಸೂಚನೆ
Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ
Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
Karkala: ಕಾರು ಹರಿದು ಪಾದಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.